AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮಾಯಕನಂತೆ ವರ್ತಿಸುತ್ತಾ ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ; ಮುಂದೇನಾಯ್ತು? ವಿಡಿಯೊ ನೋಡಿ

ಇದೀಗ ವೈರಲ್ ಆದ ವಿಡಿಯೊದಲ್ಲಿ ಗಮನಿಸುವಂತೆ ಕಳ್ಳನು ಸೈಕಲ್ ಕದಿಯಲು ಬಂದಿದ್ದಾನೆ. ಮುಂದೇನಾಗುತ್ತೆ ಗೊತ್ತಾ? ವಿಡಿಯೊದಲ್ಲೇ ನೋಡಿ.

Viral Video: ಅಮಾಯಕನಂತೆ ವರ್ತಿಸುತ್ತಾ ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ; ಮುಂದೇನಾಯ್ತು? ವಿಡಿಯೊ ನೋಡಿ
ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ
Follow us
TV9 Web
| Updated By: shruti hegde

Updated on:Nov 21, 2021 | 10:22 AM

ಕಳ್ಳ ಕದಿಯಲು ಹೋಗಿ ಸಿಕ್ಕಿಬಿದ್ದ ವಿಡಿಯೊಗಳು ಸಾಕಷ್ಟು ಹರಿದಾಡುತ್ತವೆ. ಕದಿಯೋಕೆಂದು ಹೋಗಿ ಎಡವಟ್ಟಾಗಿ ಮಾಲೀಕರ ಬಳಿ ಸಿಲುಕಿಕೊಂಡು ಒದ್ದಾಡಿದ ಕಳ್ಳರ ಪಜೀತಿ ನೋಡಲು ಮಜವಾಗುತ್ತವೆ. ಅವುಗಳಲ್ಲಿ ಕೆಲವು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸುತ್ತವೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ಗಮನಿಸುವಂತೆ ಕಳ್ಳನು ಸೈಕಲ್ ಕದಿಯಲು ಬಂದಿದ್ದಾನೆ. ಮುಂದೇನಾಗುತ್ತೆ ಗೊತ್ತಾ? ವಿಡಿಯೊದಲ್ಲೇ ನೋಡಿ.

ಕಳ್ಳ ತನ್ನದೇ ಮನೆಯ ಗೇಟ್ ಅನ್ನುವಂತೆ ಆರಾಮವಾಗಿ ನಡೆದು ಬಂದು ಗೇಟ್ ಒಳಗೆ ನಿಂತಿದ್ದಾನೆ. ಮೆಟ್ಟಿಲು ಏರಿ ಮೇಲೆ ಹತ್ತುವಂತೆ ವರ್ತಿಸುತ್ತಾನೆ. ಆಚೆ ಈಚೆಗೆಲ್ಲಾ ತಿರುಗಾಡಿ ಯಾರಾದರೂ ಇದ್ದಾರಾ? ಎಂದು ಪರೀಕ್ಷಿಸಿಕೊಳ್ಳುತ್ತಾನೆ. ಬಳಿಕ ಅಲ್ಲೇ ನಿಂತಿದ್ದ ಕೆಂಪು ಬಣ್ಣದ ಸೈಕಲ್ ಕದ್ದು ಸ್ಥಳದಿಂದ ಪರಾರಿಯಾಗಿದ್ದಾನೆ. ಇಷ್ಟೇ ಅಲ್ಲ. ಮುಂದೇನಾಯ್ತು? ಎಂಬುದು ಮಜವಾಗಿದೆ ವಿಡಿಯೋ ನೋಡಿ. ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಈ ವಿಡಿಯೊ ಸುಮಾರು 8,850 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

View this post on Instagram

A post shared by MEMES.BKS?? (@memes.bks)

ಕಳ್ಳ ಸೈಕಲ್ ಕದ್ದು ಓಡುತ್ತಿದ್ದಂತೆಯೇ ಹಿಂದಿನಿಂದ ಮಾಲೀಕ ಕೂಡಾ ಓಡಿದ್ದಾನೆ. ಬಳಿಕ ಕಳ್ಳನನ್ನು ಹಿಡಿದು ತನ್ನ ಸೈಕಲ್ಅನ್ನು ಹಿಂತಿರುಗಿ ತಂದಿದ್ದಾನೆ. ಈ ವಿಡಿಯೊ ಇದೀಗ ಫುಲ್ ವೈರಲ್ ಆಗಿದ್ದು, ಕಳ್ಳನ ಪಜೀತಿ ಏನಾಗಿರಬಹುದು? ಎನ್ನುತ್ತಾ ನೆಟ್ಟಿಗರು ತಮಾಷೆ ಮಾಡಿದ್ದಾರೆ. ಸಕತ್ ವೈರಲ್ ಆದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ. ಕಳ್ಳನ ಪರಿಸ್ಥಿತಿ ನೋಡಿ ಕೆಲವರು ನಕ್ಕಿದ್ದರೆ, ಮಾಲೀಕ ಎಚ್ಚೆತ್ತುಕೊಂಡಿದ್ದಕ್ಕೆ ಸೈಕಲ್ ಸಿಕ್ಕಿತು ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್

Viral Video: ದೈತ್ಯ ಆನೆ ಕಬ್ಬಿಣದ ಬೇಲಿ ಏರುತ್ತಿರುವುದನ್ನು ನೀವು ಎಂದಾದರೂ ನೋಡಿದ್ದೀರಾ? ಈ ವಿಡಿಯೊ ನೋಡಿ

Published On - 10:20 am, Sun, 21 November 21

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ