AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು

ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ

Viral Video: ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು
ಯುವಕ
TV9 Web
| Updated By: Pavitra Bhat Jigalemane|

Updated on:Mar 17, 2022 | 1:04 PM

Share

ನಾಗರ ಹಾವಿನೊಂದಿಗ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದು ಹೇಳುತ್ತಾರೆ. ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾಜ್ ಸಯೀದ್ ಎನ್ನುವ ಯುವಕ ಮೂರು ನಾಗರ ಹಾವುಗಳ ಎದುರು ಕುಳಿತು ಅವುಗಳೊಂದಿಗೆ ಆಟವಾಡಿದ್ದಾನೆ. ಟ್ವಿಟರ್​ನಲ್ಲಿ ಈ ಆತಂಕಕಾರಿ ವಿಡಿಯೋವನ್ನು ಐಎಫ್ಎ​ಸ್​ ಅಧಿಕಾರಿ ಸುಸಾಂತ್​ ನಂದ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಯುವಕ ಮೂರು ಹಾವುಗಳ ಎದುರು ಕುಳಿತು ಕೈಗಳನ್ನು ಆಡಿಸುತ್ತಾನೆ. ಅದಕ್ಕೆ ತಕ್ಕಂತೆ ಹಾವುಗಳು ಕುಣಿಯುತ್ತವೆ. ಅವುಗಳ ತಲೆಯನ್ನು ಮುಟ್ಟಿ ಹಾವುಗಳಿಗೆ ಕೋಪತರಿಸಿದ್ದಾನೆ. ಇದರಿಂದ ಇಂದು ಹಾವು ಹಾರಿ ಆತನ ಕಾಲಿಗೆ ಕಚ್ಚಿ ಹಿಡಿದಿದೆ. ಇದನ್ನು ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ತಜ್ಞರು ಕೂಡ ಇದು ಅಪಾಯಕಾರಿ ಎಂದಿದ್ದಾರೆ.

ಸ್ನೇಕ್‌ಬೈಟ್ ಹೀಲಿಂಗ್ ಅಂಡ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷೆ ಮತ್ತು ಸಂಸ್ಥಾಪಕಿ ಪ್ರಿಯಾಂಕಾ ಕದಮ್  ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು ಸಯದ್ ಅವರನ್ನು ಹಾವು ಕಚ್ಚಿದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಿಆದ ಸೈಯದದ ಅವರಿಗೆ 46 ಆ್ಯಂಟಿ ಬಯೋಟಿಕ್​ಗಳನ್ನು ನಿಡಲಾಗಿದೆ ಎಂದು ವರದಿ ತಿಳಿಸಿದೆ.

ಸೈಯದ್​ 20 ವರ್ಷದ ಯುವಕ. ಈತ ಹಾವಿನ ಬಗೆಗೆ ಹೆಚ್ಚು ಉತ್ಸಾಹಿಯಾಗಿದ್ದು, ತಮ್ಮ ತಪ್ಪಾದ ಸಾಹಸದ ಕಾರಣ ಹಾವಿನ ಕಡಿತಕ್ಕೆ ಒಳಗಾಗಿದ್ದಾರೆ. ಸದ್ಯ ಶಿರಸಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಸದ್ಯ ವೈರಲ್​ ಆದ ಭಯಾನಕ ವಿಡಿಯೋ 22 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡಿದ ಮಹಿಳೆ: 8 ಮಿಲಿಯನ್​​ಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ

Published On - 12:08 pm, Thu, 17 March 22

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು