AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಶ್ವವಾಯು ಬಳಿಕ ನಾಲಿಗೆಯ ಮೇಲೆ ಬೆಳೆದ ಕಪ್ಪು ಕೂದಲು: ವಿಚಿತ್ರ ಕಾಯಿಲೆಗೆ ತುತ್ತಾದ ವ್ಯಕ್ತಿ

ವ್ಯಕ್ತಿಯೊಬ್ಬನ ನಾಲಿಗೆಯ ಮೇಲೆ ಕಪ್ಪು ಕೂದಲು ಬೆಳೆದಿದೆ. ವೈದ್ಯರನ್ನು ಇದನ್ನು ನೋಡಿ ವ್ಯಕ್ತಿ ಲಿಂಗುವ ವಿಲೋಸಾ ನಿಗ್ರಾ ಅಥವಾ ಕಪ್ಪು ಕೂದಲುಳ್ಳ ನಾಲಿಗೆ ಎನ್ನುವ ಸಮಸ್ಯೆಗೆ ತುತ್ತಾಗಿದ್ದಾರೆ ಎಂದು ಹೇಳಿದ್ದಾರೆ.

ಪಾರ್ಶ್ವವಾಯು ಬಳಿಕ ನಾಲಿಗೆಯ ಮೇಲೆ ಬೆಳೆದ ಕಪ್ಪು ಕೂದಲು: ವಿಚಿತ್ರ ಕಾಯಿಲೆಗೆ ತುತ್ತಾದ ವ್ಯಕ್ತಿ
ನಾಲಿಗೆಯ ಮೇಲೆ ಬೆಳೆದ ಕಪ್ಪು ಕೂದಲು
TV9 Web
| Edited By: |

Updated on:Mar 12, 2022 | 11:49 AM

Share

ಕೆಲವೊಮ್ಮೆ ದೇಹದಲ್ಲಿನ ಅಸಹಜ ಬೆಳವಣಿಗೆಗಳು ವಿಕಾರವಾಗಿ ಕಾಣುವಂತೆ ಮಾಡುತ್ತದೆ. ಮಾರಕ ಕಾಯಿಲೆಗೆ ತುತ್ತಾದ ಮೇಲೆ ಅದರಿಂದಾಗುವ ಪರಿಣಾಮಗಳು ಭಯಾನಕವಾಗಿರುತ್ತದೆ. ಅಂತಹದ್ದೆ ಒಂದು ಘಟನೆಯ ಕುರಿತು ವರದಿಯಾಗಿದೆ. ವ್ಯಕ್ತಿಯೊಬ್ಬನ ನಾಲಿಗೆಯ ಮೇಲೆ ಕಪ್ಪು ಕೂದಲು ಬೆಳೆದಿದೆ. ವೈದ್ಯರನ್ನು ಇದನ್ನು ನೋಡಿ ವ್ಯಕ್ತಿ ಲಿಂಗುವ ವಿಲೋಸಾ ನಿಗ್ರಾ ಅಥವಾ ಕಪ್ಪು ಕೂದಲುಳ್ಳ ನಾಲಿಗೆ ಎನ್ನುವ ಸಮಸ್ಯೆಗೆ ತುತ್ತಾಗಿದ್ದಾರೆ ಎಂದು ಹೇಳಿದ್ದಾರೆ.  50 ವರ್ಷದ ವ್ಯಕ್ತಿಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ. ಈ ಕುರಿತು ಟೈಮ್ಸ್​ ನೌ ವರದಿ ಮಾಡಿದೆ.

ಈ ಸಮಸ್ಯೆ ಕಾಣಿಸಿಕೊಳ್ಳುವ ಕೆಲವು ತಿಂಗಳ ಹಿಂದೆ ವ್ಯಕ್ತಿ ದೇಹದ ಎಡಭಾಗದಲ್ಲಿ ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಅದಾದ ಬಳಿಕ 2 ತಿಂಗಳ ನಂತರ ನಾಲಿಗೆಯ ಮೇಲೆ ಕಪ್ಪು ಬಣ್ಣ ಕಾಣಿಸಿಕೊಳ್ಳಲು ಆರಂಭವಾಗಿತ್ತು. ನಂತರ ಚಿಕ್ಕ ಕೂದಲು ಬೆಳೆಯಲು ಆರಂಭವಾಗಿತ್ತು. ಇದನ್ನು ಗಮನಿಸಿದ ವ್ಯಕ್ತಿ  ಚರ್ಮರೋಗ ವೈದ್ಯರನ್ನು ಸಂಪರ್ಕಿಸಿದಾಗ ಕಪ್ಪು ಕೂದಲುಳ್ಳ ನಾಲಿಗೆ ಸಮಸ್ಯೆಗೆ ತುತ್ತಾಗಿರುವುದು ಪತ್ತೆಯಾಗಿದೆ.

ಮಾರ್ಚ್ 9 ರಂದು JAMA ಡರ್ಮಟಾಲಜಿ ಜರ್ನಲ್‌ನಲ್ಲಿ ಪ್ರಕಟವಾದ ಪ್ರಕರಣದ ವರದಿಯ ಪ್ರಕಾರ ದಪ್ಪ, ಕಪ್ಪು ಲೇಪನವು ಮಧ್ಯದ ಗೆರೆ ಮತ್ತು ನಾಲಿಗೆಯ ಹಿಂಭಾಗದ ಬಳಿ ಹಳದಿ ಗೆರೆಗಳಿಂದ ಕೂಡಿದೆ. ಆಹಾರದ ಕೆಲವು ಅಂಶಗಳು ಕೂದಲಿನ ಮಧ್ಯದಲ್ಲಿ ಸಿಲುಕಿಕೊಂಡು ವ್ಯಕ್ತಿ ಅನಾರೋಗ್ಯಕ್ಕೆ ತುತ್ತಾಗಿದ್ದನು ಎನ್ನಲಾಗಿದ್ದು ವೈದ್ಯರು ಅದನ್ನು ಸ್ವಚ್ಛಗೊಳಿಸಿ  ಚಿಕಿತ್ಸೆ ನೀಡಿದ್ದಾರೆ. ನಾಲಿಗೆಯ ಹೊರ ಅಂಚುಗಳು, ತುದಿಯಲ್ಲಿ 1 ಮಿಲಿ ಮಿಟರ್​ನಷ್ಟು ಉದ್ದದ ಕೂದಲು ಬೆಳೆದಿದೆ. ಸರಿಯಾಗಿ ಬ್ರಷ್​ ಮಾಡಿ, ಸ್ವಚ್ಛಗೊಳಿಸಿಕೊಳ್ಳದಿದ್ದರೆ ಕೂದಲು ಹೆಚ್ಚು ಉದ್ದವಾಗಿ ಬೆಳೆಯುವ ಸಾಧ್ಯತೆ ಇದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ಎಂದು ವರದಿ ತಿಳಿಸಿದೆ. ಸದ್ಯ ವ್ಯಕ್ತಿಯ ನಾಲಿಗೆಯ ಮೇಲೆ ಕೂದಲು ಬೆಳೆದ ವಿಚಾರ ಜಗತ್ತಿನೆಲ್ಲಡೆ ವೈರಲ್​ ಆಗಿದೆ.

 ಇದನ್ನೂ ಓದಿ:

Viral Story: ಇಂಜಿನಿಯರಿಂಗ್​ ಓದಿ ಕಂಪನಿ ಉದ್ಯೋಗ ಬಿಟ್ಟು ಬಿರಿಯಾನಿ​ ಅಂಗಡಿ ತೆರೆದ​ ಯುವಕರು

Published On - 11:47 am, Sat, 12 March 22

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ