AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಪಟದ ಹಗ್ಗದೊಂದಿಗೆ ಹಾರಿ ಹೋದ ವ್ಯಕ್ತಿ: ವೀಡಿಯೋ ವೈರಲ್​

ಗಾಳಿ ಬಲವಾಗಿ ಬೀಸಿದ ಕಾರಣ ಗಾಳಿಪಟದಂತೆ ಹಗ್ಗ ಹಿಡಿದ ವ್ಯಕ್ತಿಯೂ ಹಾರಿಹೋದ ವಿಲಕ್ಷಣ ಘಟನೆ ನಡೆದಿದೆ. ಈ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಗಾಳಿಪಟದ ಹಗ್ಗದೊಂದಿಗೆ ಹಾರಿ ಹೋದ ವ್ಯಕ್ತಿ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 25, 2021 | 5:12 PM

Share

ಕೆಲವು ದಿನಗಳ ಹಿಂದೆ ಪ್ಯಾರಾಚೂಟ್​ನಿಂದ ಇಬ್ಬರು ಮಹಿಳೆಯರು ಹಗ್ಗ ತುಂಡಾಗಿ ಸಮುದ್ರಕ್ಕೆ ಬಿದ್ದ ವೀಡಿಯೋ ವೈರಲ್​ ಆಗಿತ್ತು. ಇದೀಗ ವ್ಯಕ್ತಿಯೊಬ್ಬ ಗಾಳಿಪಟದ ದಾರದೊಂದಿಗೆ ಹಾರಿ ಹೋಗಿ  ಕೆಲವು ಸೆಕೆಂಡುಗಳ ಗಾಳಿಯಲ್ಲಿ ಹಾರಾಡಿ ನಂತರ ನೆಲಕ್ಕೆ ಬಿದ್ದ  ವೀಡಿಯೋ ವೈರಲ್​ ಅಗಿದೆ. ಹೌದು ನೀವು ಓದಿದ್ದು ನಿಜ ಇಲ್ಲೊಬ್ಬ ವ್ಯಕ್ತಿ ಗಾಳಿಪಟ ಹಾರಿಸುತ್ತಿದ್ದಾಗ ಸೆಣಬಿನ ದಾರ ಹಿಡಿದುಕೊಂಡಿದ್ದ. ಆದರೆ ಗಾಳಿ ಬಲವಾಗಿ ಬೀಸಿದ ಕಾರಣ ಗಾಳಿಪಟದಂತೆ ಹಗ್ಗ ಹಿಡಿದ ವ್ಯಕ್ತಿಯೂ ಹಾರಿಹೋದ ವಿಲಕ್ಷಣ ಘಟನೆ ನಡೆದಿದೆ. ಈ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ವೀಡಿಯೋದಲ್ಲಿ ಗಾಳಪಟದಂತೆ ವ್ಯಕ್ತಿ ತೂಗಾಡುತ್ತಿರುವುದು ಕಾಣಬಹುದು. ವರದಿಯ ಪ್ರಕಾರ, ಸೆಣಬಿನ ದಾರದಲ್ಲಿ ಗಾಳಿಪಟವನ್ನು ಕಟ್ಟಲು ವ್ಯಕ್ತಿ ದಾರವನ್ನು ಹಿಡಿದುಕೊಂಡಿದ್ದರು. ಆದರೆ ಅವನ ಹಿಂದೆ ನಿಂತಿದ್ದ ಕೆಲವು ಹುಡುಗರು ದಾರವನ್ನು ಕೈಬಿಟ್ಟಿದ್ದಾರೆ. ಈ ವೇಳೆ ಗಾಳಿ ಜೋರಾಗಿ ಬೀಸಿದೆ ಇದರಿಂದ ಹಗ್ಗದ ಜತೆಗೆ ವ್ಯಕ್ತಿಯೂ ಹಾರಿಹೋಗಿದ್ದಾನೆ. ಇದರಿಂದ ಗಾಬರಿಗೊಂಡ ಹುಡುಗರು ಕೆಳಗಿರುವ ದಾರವನ್ನು ಹಿಡಿದು ಎಳೆದು ಮರಕ್ಕೆ ಕಟ್ಟಿದ್ದಾರೆ. ಇದರಿಂದ ದಾರ ಹಿಡಿದಿದ್ದ ವ್ಯಕ್ತಿ ನಿಧಾನವಾಗಿ ಕೆಳಗೆ ಬಂದಿದ್ದಾನೆ. ಆದರೆ ಪೂರ್ತಿಯಾಗಿ ದಾರ ಕೆಳಗೆ ಬರುವ ಮೊದಲೇ ವ್ಯಕ್ತಿ ದಾರವನ್ನು ಕೈಬಿಟ್ಟಿದ್ದು ನೆಲಕ್ಕೆ ಬಿದ್ದಿದ್ದಾರೆ. ನೆಲಕ್ಕೆ ಬಿದ್ದ ವೇಳೆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ. ಭಯಾನಕ ವೀಡಿಯೋ ನೋಡಿ ನೆಟ್ಟಿಗರು ಕೂಡ ಗಾಬರಿಯಾಗಿದ್ದಾರೆ.  ಒಂದು ವಾರದ ಹಿಂದೆ ಶ್ರೀಲಂಕಾ ಮಾಧ್ಯಮಗಳು ಈ ವಿಡಿಯೋವನ್ನು ಪ್ರಸಾರ ಮಾಡಿವೆ. ಆ ಬಳಿಕ ವಿಶ್ವದಾದ್ಯಂತ ವೀಡಿಯೋ ವೈರಲ್​ ಆಗಿದೆ.

ನಾಯಿಯನ್ನು ಕ್ರಿಸ್​ಮಸ್​ ಗಿಫ್ಟ್​ನಂತೆ ಪ್ಯಾಕ್​ ಮಾಡಿದ ಮಾಲೀಕ: ಕ್ಯೂಟ್​ ಡಾಗ್​ ವೀಡಿಯೋ ವೈರಲ್​​

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ