AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಪಟದ ಹಗ್ಗದೊಂದಿಗೆ ಹಾರಿ ಹೋದ ವ್ಯಕ್ತಿ: ವೀಡಿಯೋ ವೈರಲ್​

ಗಾಳಿ ಬಲವಾಗಿ ಬೀಸಿದ ಕಾರಣ ಗಾಳಿಪಟದಂತೆ ಹಗ್ಗ ಹಿಡಿದ ವ್ಯಕ್ತಿಯೂ ಹಾರಿಹೋದ ವಿಲಕ್ಷಣ ಘಟನೆ ನಡೆದಿದೆ. ಈ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಗಾಳಿಪಟದ ಹಗ್ಗದೊಂದಿಗೆ ಹಾರಿ ಹೋದ ವ್ಯಕ್ತಿ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 25, 2021 | 5:12 PM

Share

ಕೆಲವು ದಿನಗಳ ಹಿಂದೆ ಪ್ಯಾರಾಚೂಟ್​ನಿಂದ ಇಬ್ಬರು ಮಹಿಳೆಯರು ಹಗ್ಗ ತುಂಡಾಗಿ ಸಮುದ್ರಕ್ಕೆ ಬಿದ್ದ ವೀಡಿಯೋ ವೈರಲ್​ ಆಗಿತ್ತು. ಇದೀಗ ವ್ಯಕ್ತಿಯೊಬ್ಬ ಗಾಳಿಪಟದ ದಾರದೊಂದಿಗೆ ಹಾರಿ ಹೋಗಿ  ಕೆಲವು ಸೆಕೆಂಡುಗಳ ಗಾಳಿಯಲ್ಲಿ ಹಾರಾಡಿ ನಂತರ ನೆಲಕ್ಕೆ ಬಿದ್ದ  ವೀಡಿಯೋ ವೈರಲ್​ ಅಗಿದೆ. ಹೌದು ನೀವು ಓದಿದ್ದು ನಿಜ ಇಲ್ಲೊಬ್ಬ ವ್ಯಕ್ತಿ ಗಾಳಿಪಟ ಹಾರಿಸುತ್ತಿದ್ದಾಗ ಸೆಣಬಿನ ದಾರ ಹಿಡಿದುಕೊಂಡಿದ್ದ. ಆದರೆ ಗಾಳಿ ಬಲವಾಗಿ ಬೀಸಿದ ಕಾರಣ ಗಾಳಿಪಟದಂತೆ ಹಗ್ಗ ಹಿಡಿದ ವ್ಯಕ್ತಿಯೂ ಹಾರಿಹೋದ ವಿಲಕ್ಷಣ ಘಟನೆ ನಡೆದಿದೆ. ಈ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ವೀಡಿಯೋದಲ್ಲಿ ಗಾಳಪಟದಂತೆ ವ್ಯಕ್ತಿ ತೂಗಾಡುತ್ತಿರುವುದು ಕಾಣಬಹುದು. ವರದಿಯ ಪ್ರಕಾರ, ಸೆಣಬಿನ ದಾರದಲ್ಲಿ ಗಾಳಿಪಟವನ್ನು ಕಟ್ಟಲು ವ್ಯಕ್ತಿ ದಾರವನ್ನು ಹಿಡಿದುಕೊಂಡಿದ್ದರು. ಆದರೆ ಅವನ ಹಿಂದೆ ನಿಂತಿದ್ದ ಕೆಲವು ಹುಡುಗರು ದಾರವನ್ನು ಕೈಬಿಟ್ಟಿದ್ದಾರೆ. ಈ ವೇಳೆ ಗಾಳಿ ಜೋರಾಗಿ ಬೀಸಿದೆ ಇದರಿಂದ ಹಗ್ಗದ ಜತೆಗೆ ವ್ಯಕ್ತಿಯೂ ಹಾರಿಹೋಗಿದ್ದಾನೆ. ಇದರಿಂದ ಗಾಬರಿಗೊಂಡ ಹುಡುಗರು ಕೆಳಗಿರುವ ದಾರವನ್ನು ಹಿಡಿದು ಎಳೆದು ಮರಕ್ಕೆ ಕಟ್ಟಿದ್ದಾರೆ. ಇದರಿಂದ ದಾರ ಹಿಡಿದಿದ್ದ ವ್ಯಕ್ತಿ ನಿಧಾನವಾಗಿ ಕೆಳಗೆ ಬಂದಿದ್ದಾನೆ. ಆದರೆ ಪೂರ್ತಿಯಾಗಿ ದಾರ ಕೆಳಗೆ ಬರುವ ಮೊದಲೇ ವ್ಯಕ್ತಿ ದಾರವನ್ನು ಕೈಬಿಟ್ಟಿದ್ದು ನೆಲಕ್ಕೆ ಬಿದ್ದಿದ್ದಾರೆ. ನೆಲಕ್ಕೆ ಬಿದ್ದ ವೇಳೆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ. ಭಯಾನಕ ವೀಡಿಯೋ ನೋಡಿ ನೆಟ್ಟಿಗರು ಕೂಡ ಗಾಬರಿಯಾಗಿದ್ದಾರೆ.  ಒಂದು ವಾರದ ಹಿಂದೆ ಶ್ರೀಲಂಕಾ ಮಾಧ್ಯಮಗಳು ಈ ವಿಡಿಯೋವನ್ನು ಪ್ರಸಾರ ಮಾಡಿವೆ. ಆ ಬಳಿಕ ವಿಶ್ವದಾದ್ಯಂತ ವೀಡಿಯೋ ವೈರಲ್​ ಆಗಿದೆ.

ನಾಯಿಯನ್ನು ಕ್ರಿಸ್​ಮಸ್​ ಗಿಫ್ಟ್​ನಂತೆ ಪ್ಯಾಕ್​ ಮಾಡಿದ ಮಾಲೀಕ: ಕ್ಯೂಟ್​ ಡಾಗ್​ ವೀಡಿಯೋ ವೈರಲ್​​

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​