AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ತನ್ನ ಪಾದರಕ್ಷೆ ಹುಡುಕಲು ಚಾಟ್ ಜಿಪಿಟಿ ಮೊರೆ ಹೋದ ವ್ಯಕ್ತಿ

ಇತ್ತೀಚೆಗಿನ ದಿನಗಳಲ್ಲಿ ವೈಯುಕ್ತಿಕ ಸಮಸ್ಯೆ, ಉದ್ಯೋಗ ಸೇರಿದಂತೆ ಇನ್ನಿತ್ತರ ಸಮಸ್ಯೆಗಳಿಗೆ ಚಾಟ್ ಜಿಪಿಟಿಯಿಂದ ಸಲಹೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ವ್ಯಕ್ತಿಯೊಬ್ಬ ಚಪ್ಪಲಿಗಳ ರಾಶಿಯಲ್ಲಿ ತನ್ನ ಕಳೆದುಹೋದ ಚಪ್ಪಲಿ ಹುಡುಕಲು ಚಾಟ್ ಜಿಪಿಟಿ ಸಲಹೆ ಪಡೆದಿದ್ದಾನೆ. ಈ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವ್ಯಕ್ತಿಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ತನ್ನ ಪಾದರಕ್ಷೆ ಹುಡುಕಲು ಚಾಟ್ ಜಿಪಿಟಿ ಮೊರೆ ಹೋದ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 16, 2026 | 11:44 AM

Share

ಪ್ರತಿಯೊಂದು ಸಮಸ್ಯೆಗೂ ಪರಿಹಾರಯಿದೆ. ಹೌದು, ಏನೇ ಸಮಸ್ಯೆ ಎದುರಾದ್ರೂ ಅದಕ್ಕೆ ಪರಿಹಾರ ಹುಡುಕೋದು ಬಹಳ ಮುಖ್ಯ. ತಮ್ಮ ಆತ್ಮೀಯರ ಸಲಹೆ ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾಲವೊಂದಿತ್ತು. ಆದರೆ ಈಗ ಕಾಲ ಬದಲಾಗಿದ್ದು, ಚಾಟ್ ಜಿಪಿಟಿ (Chat GPT) ಮೂಲಕ ಪರಿಹಾರ ಸಾಧ್ಯ. ಹೌದು, ಈ ಚಾಟ್ ಜಿಪಿಟಿ ಹತ್ರ ಯಾವುದೇ ಸಮಸ್ಯೆಗೂ  ಶೀಘ್ರದಲ್ಲೇ ಪರಿಹಾರ ಸಿಗುತ್ತದೆ. ಈ ಚಾಟ್ ಜಿಪಿಟಿ ಸಲಹೆ ಪಡೆದು ವ್ಯಕ್ತಿಯೊಬ್ಬ ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ಚಪ್ಪಲಿ ಹುಡುಕಲು ಮುಂದಾಗಿದ್ದಾನೆ. ಈ ವಿಚಿತ್ರ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ವ್ಯಕ್ತಿಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.

ಶುಭಾಂಗ್ ಬೋರಕರ್ (ShubhangBorkar) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಚಿತ್ರ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಚಪ್ಪಲಿಗಳ ರಾಶಿ ಕಂಡು ಬಂದಿದ್ದು, ಇದರಲ್ಲಿ ಕಳೆದುಹೋದ ತನ್ನ ಚಪ್ಪಲಿಯನ್ನು ಹುಡುಕಿ ಸುಸ್ತಾಗಿ ಹೋಗಿದ್ದಾನೆ. ಕೊನೆಗೆ ಚಪ್ಪಲಿ ಹುಡುಕಲು ಚಾಟ್ ಜಿಪಿಟಿ ಸಹಾಯ ಪಡೆದಿದ್ದಾನೆ. ಚಪ್ಪಲಿಗಳ ರಾಶಿಯ ಫೋಟೋ ತೆಗೆದು ಕಳೆದುಕೊಂಡ ಚಪ್ಪಲಿಯನ್ನು ಹುಡುಕಿಕೊಡುವಂತೆ ಚಾಟ್ ಜಿಪಿಟಿಗೆ ಕೇಳಿಕೊಂಡಿರುವುದನ್ನು ಕಾಣಬಹುದು. ಕೆಲವೇ ಕೆಲವು ಕ್ಷಣಗಳಲ್ಲಿ ಚಾಟ್ ಜಿಪಿಟಿ ಚಪ್ಪಲಿಯನ್ನು ಪತ್ತೆಹಚ್ಚಿದೆ. ಚಾಟ್ ಜಿಪಿಟಿ ಚಪ್ಪಲಿ ಹುಡುಕಿಕೊಟ್ಟದ್ದನ್ನು ಕೇಳಿ ನಗುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ

ಈ ವಿಡಿಯೋ 23 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸ್ಮಾರ್ಟ್ ಐಡಿಯಾ ಎಂದಿದ್ದಾರೆ. ಇನ್ನೊಬ್ಬರು, ಚಾಟ್ ಜಿಪಿಟಿ ಯನ್ನು ಹೀಗೂ ಬಳಸಬಹುದೆಂದು ತೋರಿಸಿಕೊಟ್ಟ ಮಹಾನುಭಾವ ಎಂದು ಹೇಳಿದ್ದಾರೆ. ಮತ್ತೊಬ್ಬರು, ಜನ್ರು ಇಷ್ಟು ಅಪ್ಡೇಟ್ ಆಗಿದ್ದಾರೆ ಎಂದು ಗೊತ್ತೇ ಇರಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ