AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​

ರಸ್ತೆಯಲ್ಲಿ ಬಾಲಕ ಟ್ರಕ್ ಟೈರ್​ ಮೇಲೆ ನಿಂತು ತನ್ನ ಕಾಲುಗಳ ಸಹಾಯದಿಂದ ಟೈಯರ್​ಅನ್ನು ಓಡಿಸುತ್ತಾನೆ. ಬಾಲಕನ ಸ್ಟಂಟ್​ ವಿಡಿಯೋ ವೈರಲ್​.. ವಿಡಿಯೋ ಇಲ್ಲಿದೆ ನೀವೂ ನೋಡಿ.

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​
ಟ್ರಕ್​ ಟೈರ್​ ಮೇಲೆ ಹತ್ತಿ ನಿಂತ ಬಾಲಕ
shruti hegde
|

Updated on:May 10, 2021 | 12:18 PM

Share

ಸಾಮಾಜಿಕ ಜಾಲತಾಣದಲ್ಲಿ ಬಾಲಕರ ಸ್ಟಂಟ್​ ವಿಡಿಯೋಗಳು ಆಗಾಗ ಹೆಚ್ಚು ವೈರಲ್ ಅಗುತ್ತಿರುತ್ತದೆ. ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತಿದ ಸಾಹಸ, ಕೈಕಾಲುಗಳನ್ನು ಸರಳಪಳಿಯಂತೆ ತಿರುಚುವ ಸಾಹಸಗಳನ್ನು ನೋಡಿಯೇ ಇರುತ್ತೀರಿ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​ ಅಗುತ್ತಿದೆ. ಬಾಲಕನ ಟ್ಯಾಲೆಂಟ್​ ನಿಮ್ಮನ್ನೂ ಆಶ್ಚರ್ಯಚಕಿತರನ್ನಾಗಿ ಮಾಡುತ್ತದೆ. ವಿಡಿಯೋ ಇಲ್ಲಿದೆ ನೋಡಿ.

ರಸ್ತೆಯಲ್ಲಿ ಬಾಲಕ ಟ್ರಕ್ ಟೈರ್​ ಮೇಲೆ ನಿಂತು ತನ್ನ ಕಾಲುಗಳ ಸಹಾಯದಿಂದ ಟೈರ್​ಅನ್ನು ಓಡಿಸುತ್ತಾನೆ. ಮತ್ತು ಟೈರ್​ಅನ್ನು ತನ್ನ ಕಾಲುಗಳ ಸಹಾಯದಿಂದ ಹಿಂದಕ್ಕೆ ಎಳೆಯುತ್ತಾನೆ. ಈತನ ಸಾಹಸ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ವೀಕ್ಷಿಸಿದ ನೆಟ್ಟಿಗರು ಬಾಲಕನ ಸ್ಟಂಟ್​ ನೋಡಿ ಆಶ್ಚರ್ಯಗೊಂಡಿದ್ದಾರೆ.

ವಿಡಿಯೋವನ್ನು ಐಪಿಎಸ್​ ಅಧಿಕಾರಿ ರುಪಿನ್​ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಗಮನಿಸಿದಂತೆ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತಿರುತ್ತವೆ. ಆ ಸಮಯದಲ್ಲಿ ಬಾಲಕ ರಸ್ತೆಯ ಬದಿಯಲ್ಲಿ ಟ್ರಕ್​ ಟೈರ್​​ಅನ್ನು ಹಿಡಿದು ನಿಂತಿರುವುದನ್ನು ನೋಡಬಹುದು. ಬಳಿಕ ರಸ್ತೆಯ ಮಧ್ಯಕ್ಕೆ ಬಂದು ಟೈರ್​ ಮೇಲೆ ಹತ್ತಿ ನಿಂತು ಟೈಯರ್​ ಓಡಿಸಲು ಪ್ರಾರಂಭಿಸುತ್ತಾನೆ. ತನ್ನ ಕಾಲುಗಳ ಮೂಲಕ ಟೈರ್​ಅನ್ನು ಓಡಿಸುವ ರೀತಿ ಆಶ್ಚರ್ಯವನ್ನು ಉಂಟುಮಾಡುತ್ತದೆ.

ಮೇ 8ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮತ್ತು 100ಕ್ಕೂ ಹೆಚ್ಚು ಲೈಕ್ಸ್​ಗಳು ಮತ್ತು ರಿಟ್ವೀಟ್​ಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

Published On - 12:15 pm, Mon, 10 May 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ