AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ಸಿಲುಕಿದ್ದ ಕರುವನ್ನು ಪ್ಲಾಸ್ಟಿಕ್​​​ನಲ್ಲಿ ಸುತ್ತಿ, ಹೆಗಲ ಮೇಲೆ ಹಾಕಿಕೊಂಡ ವ್ಯಕ್ತಿ

ಕಾಶ್ಮೀರದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಜನರ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಈ ಆಘಾತಕಾರಿ ಸಂಗಿತು ನಡುವೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ, ಈ ವಿಡಿಯೋ ತುಂಬಾ ಹೃದಯಸ್ಪರ್ಶಿಯಾಗಿದ್ದು, ಕರುವೊಂದು ಪ್ರವಾಹದಲ್ಲಿ ಸಿಲುಕಿದ್ದು, ಅದನ್ನು ವ್ಯಕ್ತಿಯೊಬ್ಬರು ಕಾಪಾಡಿದ ಸುಂದರ ಕ್ಷಣವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಪ್ರವಾಹದಲ್ಲಿ ಸಿಲುಕಿದ್ದ ಕರುವನ್ನು ಪ್ಲಾಸ್ಟಿಕ್​​​ನಲ್ಲಿ ಸುತ್ತಿ, ಹೆಗಲ ಮೇಲೆ ಹಾಕಿಕೊಂಡ ವ್ಯಕ್ತಿ
ವೈರಲ್​ ವಿಡಿಯೋ
ಸಾಯಿನಂದಾ
| Edited By: |

Updated on: Aug 30, 2025 | 5:09 PM

Share

ಜಮ್ಮು (Jammu) ಪ್ರವಾಹದಿಂದ ತತ್ತರಿಸಿದೆ. ಪ್ರವಾಹಕ್ಕೆ ಜನ ಜೀವನ ಸಂಕಷ್ಟದಲ್ಲಿದೆ. ಇದರ ನಡುವೆ ಹೃದಯದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಮನುಷ್ಯರಿಗೆ ತಮ್ಮ ಜೀವದ ಜತೆಗೆ ತಾನು ಸಾಕಿದ ಪ್ರಾಣಿ ರಕ್ಷಣೆ ಕೂಡ ಅಗತ್ಯ ಎನ್ನುವುದು ಈ ವಿಡಿಯೋದಿಂದ ಕಾಣಬಹುದು. ಮನುಷ್ಯನಿಗೆ ಪ್ರಾಣಿಗಳ ಜತೆಗೆ ಎಷ್ಟು ಅಮೂಲ್ಯವಾದ ಪ್ರೀತಿ ಇದೆ ನೋಡಿ. ಪ್ರವಾಹದ (Floods) ನಡುವೆ ವ್ಯಕ್ತಿಯೊಬ್ಬರು ತಮ್ಮ ಜೀವದ ಜತೆಗೆ ಕರುವಿನ ಜೀವವನ್ನು ಉಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೀಡಿಯೊದಲ್ಲಿ ಕುಸಿದು ಬಿದ್ದ ರಸ್ತೆಗಳು, ಧರೆ ಬಿದ್ದ ದೈತ್ಯ ಮರಗಳು ಮತ್ತೊಂದು ಕಡೆ ಎಲ್ಲವೂ ಜಲಾವೃತಗೊಂಡಿರುವುದನ್ನು ಕಾಣಬಹುದು. ಇದರ ನಡುವೆ ಚಳಿಯಿಂದ ನಡುಗುತ್ತಿದ್ದ ಕರುವೊಂದನ್ನು ಪ್ಲಾಸ್ಟಿಕ್​​​ನಲ್ಲಿ ಸುತ್ತಿಕೊಂಡು ಬೆನ್ನ ಮೇಲೆ ಎತ್ತಿಕೊಂಡಿರುವುದನ್ನು ಕಾಣಬಹುದು.

ಈ ವೈರಲ್​​ ಆಗಿರುವ ವಿಡಿಯೋದಲ್ಲಿ ಪ್ರವಾಹದ ನಡುವೆ ಭಕ್ತನೊಬ್ಬ ಹಸುವನ್ನು ರಕ್ಷಿಸುತ್ತಾನೆ, ಆಶೀರ್ವಾದ ಪಡೆಯುತ್ತಾನೆ ಎಂದು  ಶೀರ್ಷಿಕೆ ಬರೆದಿದ್ದಾರೆ. ನರಿಂದರ್ ಸಿಂಗ್ ಎಂಬ ವ್ಯಕ್ತಿ, ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಜಮ್ಮುವಿನಲ್ಲಿ ಅಪಾರ ಹಾನಿಯಾಗಿದೆ. ಮೇಘಸ್ಫೋಟ, ದಿಢೀರ್ ಪ್ರವಾಹ , ನದಿಗಳ ಉಕ್ಕಿ ಹರಿಯುವಿಕೆ, ಪರ್ವತ ಪ್ರದೇಶಗಳಲ್ಲಿ ಭೂಕುಸಿತ ಮತ್ತು ಸೇತುವೆಗಳು ಮತ್ತು ರಸ್ತೆಗಳಂತಹ ಮೂಲಸೌಕರ್ಯಗಳಿಗೆ ತೀವ್ರ ಹಾನಿಯಾಗಿದೆ. ತಗ್ಗು ಪ್ರದೇಶಗಳು ಇನ್ನೂ ಜಲಾವೃತವಾಗಿದ್ದು, ನಿವಾಸಿಗಳು ತೀವ್ರ ಪರಿಸ್ಥಿತಿಗಳನ್ನು ನಿಭಾಯಿಸಲು ಹೆಣಗಾಡುತ್ತಿದ್ದಾರೆ.

ಇದನ್ನೂ ಓದಿ
Image
ಭಾರತ ಬಿಟ್ಟು ಹೊರಡುವಾಗ ಅಮೆರಿಕನ್ ಮಹಿಳೆ ಭಾವುಕ
Image
ಮೊಬೈಲ್ ಬಳಸೋರಿಗೆ ಲಂಡನ್‌ಗಿಂತ ಮುಂಬೈ ಸೇಫ್
Image
ಭಾರತಕ್ಕೆ ಹೋಲಿಸಿದ್ರೆ ಲಂಡನ್‌ ದುಬಾರಿ, ವೈರಲ್‌ ಆಯ್ತು ಪೋಸ್ಟ್‌
Image
ಭಾರತ ಎಷ್ಟು ಸುಂದರವಾಗಿದೆ ಎಂದು ತೋರಿಸಿಕೊಟ್ಟ ವಿದೇಶಿ ವ್ಲಾಗರ್

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದ್ದು, ಅವರ ಧೈರ್ಯ ಮತ್ತು ಸಹಾಸಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ, ಕರುವನ್ನು ಪುಟ್ಟ ಮಗುವಿನಂತೆ ಅಪ್ಪಿಕೊಂಡಿ, ಅದಕ್ಕೆ ಚಳಿಯಾಗದಂತೆ ಪ್ಲಾಸ್ಟಿಕ್​​​ ಸುತ್ತಿದ್ದಾರೆ. ಈ ವೀಡಿಯೊವನ್ನು ಆಗಸ್ಟ್ 28, 2025 ರಂದು ಹಂಚಿಕೊಳ್ಳಲಾಯಿತು ಮತ್ತು ಅಂದಿನಿಂದ 40,000 ವೀಕ್ಷಣೆಗಳು ಮತ್ತು ಹಲವಾರು ಕಾಮೆಂಟ್‌ಗಳನ್ನು ಗಳಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮುಂದೆ ಕಣ್ಣೀರು, ಗರ್ವದಿಂದ ಸೆಲ್ಯೂಟ್‌ ಹೊಡೆದ ಯುವತಿ

ಇನ್‌ಸ್ಟಾಗ್ರಾಮ್ ಬಳಕೆದಾರರು ಈ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಆ ವ್ಯಕ್ತಿಯ ಧೈರ್ಯ ಮತ್ತು ಕರುಣೆಯನ್ನು ಈ ವಿಡಿಯೋ ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರೊಬ್ಬರು ನನ್ನನ್ನು ನಂಬಿರಿ, ಅವರು ನಿಜಕ್ಕೂ ರತ್ನ ಎಂದು ಹೇಳಿದ್ದಾರೆ. ಈ ಮನುಷ್ಯನಿಗೆ ದೊಡ್ಡ ಗೌರವ ನೀಡಬೇಕು ಎಂದು ಕಮೆಂಟ್​​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ