AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಂಡ್ಯದಲ್ಲೊಂದು ಅಚ್ಚರಿಯ ಘಟನೆ; ಒಂದಲ್ಲ ಎಡರಲ್ಲ… ಏಕಕಾಲಕ್ಕೆ ಮೂರು ಕರುಗಳಿಗೆ ಜನ್ಮ ನೀಡಿದ ಹಸು

ಈ ಪ್ರಪಂಚದಲ್ಲಿ ಆಗೊಮ್ಮೆ ಈಗೊಮ್ಮೆ ನಮ್ಮ ಊಹೆಗೂ ನಿಲುಕದ ಕೆಲವೊಂದು ಅಚ್ಚರಿಯ ಸಂಗತಿಗಳು ನಡೆಯುತ್ತಿರುತ್ತವೆ. ಇಂತಹ ಘಟನೆಗಳು ನಮ್ಮನ್ನು ಬೆರಗುಗೊಳಿಸುತ್ತವೆ. ಇದೀಗ ಅಂತಹದ್ದೇ ಅಚ್ಚರಿಯ ಘಟನೆ ನಡೆದಿದ್ದು, ಅಪರೂಪದಲ್ಲಿ ಅಪರೂಪ ಎನ್ನುವಂತೆ ಹೆಚ್.‌ಎಫ್‌ ತಳಿಯ ಹಸುವೊಂದು ಒಂದಲ್ಲ ಎರಡಲ್ಲ ಏಕಕಾಲಕ್ಕೆ ಮೂರು ಕರುಗಳಿಗೆ ಜನ್ಮವನ್ನು ನೀಡಿದೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 29, 2024 | 3:21 PM

Share

ಸಾಮಾನ್ಯವಾಗಿ ಹಸುಗಳು ಒಂದು ಸಲ ಒಂದೇ ಕರುವಿಗೆ ಜನ್ಮವನ್ನು ನೀಡುತ್ತವೆ. ಅಪರೂಪದಲ್ಲಿ ಅಪರೂಪ ಎನ್ನುವಂತೆ ಕೆಲವು ಕಡೆಗಳಲ್ಲಿ ಹಸುಗಳು ಅವಳಿ ಕರುಗಳಿಗೆ ಜನ್ಮ ನೀಡಿದಂತಹ ಉದಾಹರಣೆಗಳು ಕೂಡಾ ಇವೆ. ಆದ್ರೆ ನೀವು ಹಸು ತ್ರಿವಳಿ ಕರುಗಳಿಗೆ ಜನ್ಮ ನೀಡಿದಂತಹ ಸುದ್ದಿಯನ್ನು ಕೇಳಿದ್ದೀರಾ? ಇಲ್ಲೊಂದು ಇಂತಹ ಅಚ್ಚರಿಯ ಘಟನೆ ನಡೆದಿದ್ದು ಹೆಚ್.‌ಎಫ್‌ ತಳಿಯ ಹಸುವೊಂದು ತ್ರಿವಳಿ ಹೆಣ್ಣು ಕರುಗಳಿಗೆ ಜನ್ಮವನ್ನು ನೀಡಿದೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಈ ಅದ್ಭುತ ಹಾಗೇನೇ ಅಚ್ಚರಿಯ ವಿಷಯವನ್ನು ತಿಳಿದು ನೆಟ್ಟಿಗರು ಬೆರಗಾಗಿದ್ದಾರೆ.

ಹಸು ಅವಳಿ ಕರುಗಳಿಗೆ ಜನ್ಮ ನೀಡಿದಂತಹ ಸುದ್ದಿಗಳ ಬಗ್ಗೆ ಕೇಳಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ಹಸು ತ್ರಿವಳಿ ಕರುಗಳಿಗೆ ಜನ್ಮವನ್ನು ನೀಡಿದೆ. ಈ ಅಚ್ಚರಿಯ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ. ಹೆಚ್.ಎಫ್‌ ತಳಿಯ ಹಸುವೊಂದು ಏಕಕಾಲಕ್ಕೆ ಬರೋಬ್ಬರಿ 3 ಹೆಣ್ಣು ಕರುಗಳಿಗೆ ಜನ್ಮವನ್ನು ನೀಡಿದ್ದು, ಈ ತ್ರಿವಳಿ ಕರುಗಳು ಆರೋಗ್ಯಕರವಾಗಿದೆ.

ಇದನ್ನೂ ಓದಿ: ಇದೇನಿದು ಆಶ್ಚರ್ಯ… ಹುಲ್ಲು ಬಿಟ್ಟು ಜೀವಂತ ಕೋಳಿಯನ್ನು ತಿಂದ ಹಸು; ವಿಡಿಯೋ ವೈರಲ್‌

ಈ ಕುರಿತ ವಿಡಿಯೋವನ್ನು ಪರಿಸರ ಪರಿವಾರ (Parisara360) ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು “ಅವಳಿಯಲ್ಲ, ತ್ರಿವಳಿ ಕರುಗಳ ಜನನ; ಮಾಲೀಕರಿಗೆ ತ್ರಿಬಲ್‌ ಧಮಾಕ!!” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಬಳಿಕ ಹಸು ತನ್ನ ಕಂದಮ್ಮಗಳನ್ನು ಆರೈಕೆ ಮಾಡುತ್ತಿರುವ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಏಕಕಾಲಕ್ಕೆ ಹಸು ಮೂರು ಕರುಗಳಿಗೆ ಜನ್ಮ ನೀಡಿರುವಂತಹ ಈ ಸುದ್ದಿಯನ್ನು ಕೇಳಿ ನೆಟ್ಟಿಗರು ಬೆರಗಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ