AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅರರೇ ಯಾರಿವನು ಸುಂದರ ಪುರುಷ, ಮದುವೆ ಮಂಟಪದಲ್ಲಿ ಮದುಮಗಳ ಅದ್ಭುತ ಯಕ್ಷಗಾನ ನೃತ್ಯ ಪ್ರದರ್ಶನ 

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದಂತಹ ಮದುವೆ ಕಾರ್ಯಕ್ರಮದಲ್ಲಿ ವಧು ವರನ ಸಮ್ಮುಖದಲ್ಲಿ ಮದುವೆ ಮಂಟಪದಲ್ಲಿಯೇ ಅದ್ಭುತವಾಗಿ ಯಕ್ಷಗಾನ ನೃತ್ಯ ಪ್ರದರ್ಶನವನ್ನು ಮಾಡಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನೆಟ್ಟಿಗರಂತೂ ನವ ವಧುವಿನ ಸುಂದರ ನೃತ್ಯಕ್ಕೆ ಮನಸೋತಿದ್ದಾರೆ.

Viral Video: ಅರರೇ ಯಾರಿವನು ಸುಂದರ ಪುರುಷ, ಮದುವೆ ಮಂಟಪದಲ್ಲಿ ಮದುಮಗಳ ಅದ್ಭುತ ಯಕ್ಷಗಾನ ನೃತ್ಯ ಪ್ರದರ್ಶನ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 21, 2024 | 5:57 PM

ಯಕ್ಷಗಾನ ಕರಾವಳಿಯ ಗಂಡು ಕಲೆ. ಇಲ್ಲಿನ ಹಳ್ಳಿಗಳಲ್ಲಿ ಪುರಾಣಗಳ ಕಥೆಗಳನ್ನು ಸಾರುವ ಯಕ್ಷಗಾನ ಇಂದು ವಿಶ್ವ ಮಟ್ಟದಲ್ಲಿ ತನ್ನ ಛಾಪು ಮೂಡಿಸಿದೆ. ಯಕ್ಷಗಾನವನ್ನು ಆರಾಧಿಸುವ ಇಲ್ಲಿ ಯಕ್ಷಗಾನ ಪ್ರದರ್ಶನ ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತವೆ. ಇದೀಗ ಮದುವೆ ಮಂಟಪದಲ್ಲಿ ವರ ಹಾಗೂ ಸಂಬಂಧಿಕರ  ಸಮ್ಮುಖದಲ್ಲಿ ಮದುಮಗಳು ಯಕ್ಷಗಾನ ನೃತ್ಯ ಪ್ರದರ್ಶನ ಮಾಡಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಮದುವೆ ಸಮಾರಂಭಗಳಲ್ಲಿ ಸಾಮಾನ್ಯವಾಗಿ ಸಂಬಂಧಿಕರ ಜೊತೆಗೆ ವಧುವರರು  ಡಿಜೆ ಹಾಡುಗಳಿಗೆ ನೃತ್ಯವನ್ನು  ಮಾಡುತ್ತಾರೆ, ಆದರೆ ಇತ್ತೀಚಿಗೆ ಮಂಗಳೂರಿನಲ್ಲಿ ನಡೆದಂತಹ ಮದುವೆ ಸಮಾರಂಭವೊಂದರಲ್ಲಿ   ವಧು ಸಂಬಂಧಿಕರು ಹಾಗೂ ವರನ ಸಮ್ಮುಖದಲ್ಲಿ ಯಕ್ಷಗಾನ ಪ್ರಸಂಗದ ಒಂದು ಸಣ್ಣ ತುಣುಕಿಗೆ ನೃತ್ಯವನ್ನು ಮಾಡಿದ್ದು, ನೆಟ್ಟಿಗರು ವಧುವಿನ ನೃತ್ಯ ಹಾಗೂ ಆಕೆಯ ಯಕ್ಷಾಭಿಮಾನವನ್ನು ಕೊಂಡಾಡಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ನೃತ್ಯಕ್ಕೆ ಅನೇಕರು ಕಮೆಂಟ್​​ ಕೂಡ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮದುಮಗಳು ವರ ಹಾಗೂ ಸಂಬಂಧಿಕರ ಸಮ್ಮುಖದಲ್ಲಿ ಮದುವೆ ಮಂಟಪದಲ್ಲಿ ಅರರೇ ಯಾರಿವನು ಸುಂದರ ಪುರುಷ ಎನ್ನುತ್ತಾ ಯಕ್ಷಗಾನ ಪ್ರಸಂಗದ ಸಣ್ಣ ತುಣುಕಿಗೆ ಅದ್ಭುತವಾಗಿ ಯಕ್ಷ ನೃತ್ಯ ಮಾಡುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ತಾಯಿಗಿಂತ ದೊಡ್ಡ ಯೋಧ ಯಾರೂ ಇಲ್ಲ; ತನ್ನ ಮೊಟ್ಟೆಯನ್ನೇ ತಿಂದ ಕಾಗೆಯನ್ನು ಹೊಡೆದು ಸಾಯಿಸಿದ ಹಕ್ಕಿ 

ಈ ವಿಡಿಯೋ  ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ಕೆಲವರು ವಧುವಿನ ಯಕ್ಷ ನೃತ್ಯವನ್ನು ಮನಸೋತಿದ್ದಾರೆ, ಇನ್ನೂ ಕೆಲವರೂ ಮದುವೆಯೇ ಆಗಲಿ ಯಕ್ಷಗಾನವೇ ಆಗಲಿ ಅದರದ್ದೇ ಆದ ಚೌಕಟ್ಟಿನಲ್ಲಿ ನಡೆದರೆ ಚೆಂದ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ