AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಅರ್ಧ ಸೇದಿ ಎಸೆದ ಬೀಡಿ ನುಂಗಿ ಕಂದಮ್ಮ ಸಾವು, ಪತಿಯ ವಿರುದ್ಧ ಪತ್ನಿ ದೂರು

ಚಿಕ್ಕ ಮಕ್ಕಳೇ ಹಾಗೆ, ಕೈಗೆ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಚಿಕ್ಕ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಕಾಳಜಿ ವಹಿಸಿದರೂ ಸಾಲದು. ಆದರೆ ಇಲ್ಲೊಬ್ಬ ತಂದೆಯೂ ಮಾಡಿದ ಎಡವಟ್ಟಿನಿಂದ ಮಗುವಿನ ಪ್ರಾಣಪಕ್ಷಿಯೇ ಹಾರಿ ಹೋಗಿದೆ. ತಂದೆಯೂ ಅರ್ಧ ಸೇದಿ ಎಸೆದ ಬೀಡಿ ತುಂಡನ್ನು ಹತ್ತು ತಿಂಗಳ ಮಗುವು ನುಂಗಿದೆ. ಹಾಗಾದ್ರೆ ಈ ಘಟನೆಯೂ ನಡೆದಿದ್ದು ಎಲ್ಲಿ? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ತಂದೆ ಅರ್ಧ ಸೇದಿ ಎಸೆದ ಬೀಡಿ ನುಂಗಿ ಕಂದಮ್ಮ ಸಾವು, ಪತಿಯ ವಿರುದ್ಧ  ಪತ್ನಿ ದೂರು
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Jun 17, 2025 | 8:32 PM

Share

ಮಂಗಳೂರು, ಜೂನ್ 7: ಚಿಕ್ಕ ಮಕ್ಕಳ (little kids)ನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಹೌದು ಪುಟಾಣಿ ಮಕ್ಕಳ ಮೇಲೆ ಎಷ್ಟು ಕಣ್ಣಿಟ್ಟರೂ ಸಾಲದು. ಸ್ವಲ್ಪ ಯಾಮಾರಿದ್ರೂ ಕೈಗೆ ಸಿಕ್ಕದೆಲ್ಲವನ್ನು ಬಾಯಿಗೆ ಹಾಕಿಕೊಳ್ಳುತ್ತವೆ. ಈ ಸಣ್ಣ ಮಕ್ಕಳು ನಾಣ್ಯ, ಬಾಟಲಿ ಮುಚ್ಚಳ ನುಂಗಿ ಸಾವನ್ನಪ್ಪಿದ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಇದೀಗ ತಂದೆ ಅರ್ಧ ಸೇದಿ ಎಸೆದ ಬೀಡಿಯನ್ನು ನುಂಗಿ ಹತ್ತು ತಿಂಗಳ ಕಂದಮ್ಮ ಮೃತಪಟ್ಟಿರುವ ಘಟನೆಯೂ ಮಂಗಳೂರಿನ ಅಡ್ಯಾರ್ (Adyar of Mangaluru) ನಲ್ಲಿ ನಡೆದಿದೆ.

ಮಗುವೊಂದು ತಂದೆ ಸೇದಿ ಎಸೆದಿದ್ದ ಬೀಡಿಯನ್ನು ನುಂಗಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಆ ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶನಿವಾರ ಮಧ್ಯಾಹ್ನ 1.25 ರ ವೇಳೆಗೆ ಈ ಘಟನೆ ನಡೆಸಿದ್ದು, ಭಾನುವಾರ ಬೆಳಗ್ಗೆ 10-25 ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದೆ ಎಂದು ತಿಳಿದು ಬಂದಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಹತ್ತು ತಿಂಗಳ ಮಗು ಅನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ತಂದೆಯ ಎಡವಟ್ಟು ಮಗುವಿನ ಪ್ರಾಣಕ್ಕೆ ಕುತ್ತು ತಂದಿದೆ.

ಇದನ್ನೂ ಓದಿ : ಚಲಿಸುವ ಬೈಕ್‌ನಲ್ಲಿ ಪ್ರೇಮಿಗಳ ರೊಮ್ಯಾನ್ಸ್, ಬಿಸಿ ಮುಟ್ಟಿಸಿದ ಪೊಲೀಸರು

ಇದನ್ನೂ ಓದಿ
Image
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
Image
ಕೂಲರ್‌ಗಾಗಿ ವಧು ವರನ ಕಡೆಯವರ ನಡುವೆ ಕಿರಿಕ್, ರಣರಂಗವಾಯ್ತು ಕಲ್ಯಾಣ ಮಂಟಪ
Image
ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು
Image
ಬೈಕ್ ಓಡಿಸುತ್ತಿರುವಾಗಲೇ ಹಿಂಬದಿ ಕುಳಿತ ಪತ್ನಿಯಿಂದ ಪತಿಗ ಬಿತ್ತು ಒದೆ

ತನ್ನ ಗಂಡ ಬೀಡಿ ಸೇದಿ, ಮನೆಯಲ್ಲಿ ಅಲ್ಲಲ್ಲಿ ಬಿಸಾಾಡುತ್ತಿದ್ದರು. ಅದನ್ನು ತೆಗೆದು ಕಸದ ಬುಟ್ಟಿಗೆ ಹಾಕಿ ಎಂದು ಹೇಳಿದರೂ ನನ್ನ ಮಾತು ಕೇಳುತ್ತಿರಲಿಲ್ಲ. ಆದರೆ ಇದೀಗ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ನುಂಗಿ ಮಗುವು ಸಾವಿಗೀಡಾಗಿದೆ ಎಂದು ಪತ್ನಿ ಆರೋಪ ಮಾಡಿದ್ದಾರೆ. ಈ ಘಟನೆಗೆ ಸಂಬಂಧ ಪಟ್ಟಂತೆ ಮಗುವಿನ ತಾಯಿ ಲಕ್ಷ್ಮಿದೇವಿ ಮಂಗಳೂರು ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!