AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಅರ್ಧ ಸೇದಿ ಎಸೆದ ಬೀಡಿ ನುಂಗಿ ಕಂದಮ್ಮ ಸಾವು, ಪತಿಯ ವಿರುದ್ಧ ಪತ್ನಿ ದೂರು

ಚಿಕ್ಕ ಮಕ್ಕಳೇ ಹಾಗೆ, ಕೈಗೆ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಚಿಕ್ಕ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಕಾಳಜಿ ವಹಿಸಿದರೂ ಸಾಲದು. ಆದರೆ ಇಲ್ಲೊಬ್ಬ ತಂದೆಯೂ ಮಾಡಿದ ಎಡವಟ್ಟಿನಿಂದ ಮಗುವಿನ ಪ್ರಾಣಪಕ್ಷಿಯೇ ಹಾರಿ ಹೋಗಿದೆ. ತಂದೆಯೂ ಅರ್ಧ ಸೇದಿ ಎಸೆದ ಬೀಡಿ ತುಂಡನ್ನು ಹತ್ತು ತಿಂಗಳ ಮಗುವು ನುಂಗಿದೆ. ಹಾಗಾದ್ರೆ ಈ ಘಟನೆಯೂ ನಡೆದಿದ್ದು ಎಲ್ಲಿ? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ತಂದೆ ಅರ್ಧ ಸೇದಿ ಎಸೆದ ಬೀಡಿ ನುಂಗಿ ಕಂದಮ್ಮ ಸಾವು, ಪತಿಯ ವಿರುದ್ಧ  ಪತ್ನಿ ದೂರು
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Jun 17, 2025 | 8:32 PM

Share

ಮಂಗಳೂರು, ಜೂನ್ 7: ಚಿಕ್ಕ ಮಕ್ಕಳ (little kids)ನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಹೌದು ಪುಟಾಣಿ ಮಕ್ಕಳ ಮೇಲೆ ಎಷ್ಟು ಕಣ್ಣಿಟ್ಟರೂ ಸಾಲದು. ಸ್ವಲ್ಪ ಯಾಮಾರಿದ್ರೂ ಕೈಗೆ ಸಿಕ್ಕದೆಲ್ಲವನ್ನು ಬಾಯಿಗೆ ಹಾಕಿಕೊಳ್ಳುತ್ತವೆ. ಈ ಸಣ್ಣ ಮಕ್ಕಳು ನಾಣ್ಯ, ಬಾಟಲಿ ಮುಚ್ಚಳ ನುಂಗಿ ಸಾವನ್ನಪ್ಪಿದ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಇದೀಗ ತಂದೆ ಅರ್ಧ ಸೇದಿ ಎಸೆದ ಬೀಡಿಯನ್ನು ನುಂಗಿ ಹತ್ತು ತಿಂಗಳ ಕಂದಮ್ಮ ಮೃತಪಟ್ಟಿರುವ ಘಟನೆಯೂ ಮಂಗಳೂರಿನ ಅಡ್ಯಾರ್ (Adyar of Mangaluru) ನಲ್ಲಿ ನಡೆದಿದೆ.

ಮಗುವೊಂದು ತಂದೆ ಸೇದಿ ಎಸೆದಿದ್ದ ಬೀಡಿಯನ್ನು ನುಂಗಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಆ ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶನಿವಾರ ಮಧ್ಯಾಹ್ನ 1.25 ರ ವೇಳೆಗೆ ಈ ಘಟನೆ ನಡೆಸಿದ್ದು, ಭಾನುವಾರ ಬೆಳಗ್ಗೆ 10-25 ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದೆ ಎಂದು ತಿಳಿದು ಬಂದಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಹತ್ತು ತಿಂಗಳ ಮಗು ಅನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ತಂದೆಯ ಎಡವಟ್ಟು ಮಗುವಿನ ಪ್ರಾಣಕ್ಕೆ ಕುತ್ತು ತಂದಿದೆ.

ಇದನ್ನೂ ಓದಿ : ಚಲಿಸುವ ಬೈಕ್‌ನಲ್ಲಿ ಪ್ರೇಮಿಗಳ ರೊಮ್ಯಾನ್ಸ್, ಬಿಸಿ ಮುಟ್ಟಿಸಿದ ಪೊಲೀಸರು

ಇದನ್ನೂ ಓದಿ
Image
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
Image
ಕೂಲರ್‌ಗಾಗಿ ವಧು ವರನ ಕಡೆಯವರ ನಡುವೆ ಕಿರಿಕ್, ರಣರಂಗವಾಯ್ತು ಕಲ್ಯಾಣ ಮಂಟಪ
Image
ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು
Image
ಬೈಕ್ ಓಡಿಸುತ್ತಿರುವಾಗಲೇ ಹಿಂಬದಿ ಕುಳಿತ ಪತ್ನಿಯಿಂದ ಪತಿಗ ಬಿತ್ತು ಒದೆ

ತನ್ನ ಗಂಡ ಬೀಡಿ ಸೇದಿ, ಮನೆಯಲ್ಲಿ ಅಲ್ಲಲ್ಲಿ ಬಿಸಾಾಡುತ್ತಿದ್ದರು. ಅದನ್ನು ತೆಗೆದು ಕಸದ ಬುಟ್ಟಿಗೆ ಹಾಕಿ ಎಂದು ಹೇಳಿದರೂ ನನ್ನ ಮಾತು ಕೇಳುತ್ತಿರಲಿಲ್ಲ. ಆದರೆ ಇದೀಗ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ನುಂಗಿ ಮಗುವು ಸಾವಿಗೀಡಾಗಿದೆ ಎಂದು ಪತ್ನಿ ಆರೋಪ ಮಾಡಿದ್ದಾರೆ. ಈ ಘಟನೆಗೆ ಸಂಬಂಧ ಪಟ್ಟಂತೆ ಮಗುವಿನ ತಾಯಿ ಲಕ್ಷ್ಮಿದೇವಿ ಮಂಗಳೂರು ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ