AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Dasara 2024: ಮಂಗಳೂರು ದಸರಾ ಮಹೋತ್ಸವದ ಮೊದಲ ದಿನದ ಝಲಕ್; ಇಲ್ಲಿದೆ ನೋಡಿ ವಿಡಿಯೋ

ಕುದ್ರೋಳಿ ಗೋಕರ್ಣಣಾಥೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷ ಪ್ರತಿವರ್ಷ ಬಹಳ ಅದ್ಧೂರಿಯಾಗಿ ಮಂಗಳೂರು ದಸರಾ ಮಹೋತ್ಸವನ್ನು ಆಚರಿಸಲಾಗುತ್ತದೆ. ಈ ಬಾರಿಯ ದಸರಾಕ್ಕೆ ನಿನ್ನೆ (ಅ.03) ಲನೆ ದೊರಕಿದ್ದು, ವಿದ್ಯಾದೇವಿ ಶಾರದೆ, ವಿಘ್ನವಿನಾಶಕ ಗಣೇಶ ಸೇರಿದಂತೆ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ನವರಾತ್ರಿಯ ಮೊದಲ ದಿನದ ಅದ್ಧೂರಿ ಸಂಭ್ರಮ ಹಾಗೂ ಮುದ್ದು ಶಾರದೆಗೆ ಸಂಬಂಧಪಟ್ಟ ಫೋಟೋ ವಿಡಿಯೋಗಳು ಸೋಷಿಯಲ್‌ ಹರಿದಾಡುತ್ತಿವೆ. ಈ ಸಂಭ್ರಮದ ಒಂದು ಸಣ್ಣ ಝಲಕ್‌ ಇಲ್ಲಿದೆ ನೋಡಿ

ಮಾಲಾಶ್ರೀ ಅಂಚನ್​
| Edited By: |

Updated on: Oct 04, 2024 | 12:55 PM

Share

ನಾಡ ಹಬ್ಬ ಮೈಸೂರು ದಸರಾವನ್ನು ಬಹಳ ಅದ್ಧೂರಿಯಾಗಿ ಆಚರಿಸುವಂತೆ ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾವನ್ನು ಕೂಡಾ ಪ್ರತಿವರ್ಷ ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದಸರಾ ಉತ್ಸವದಲ್ಲಿ ಮುದ್ದು ಶಾರದೆಯನ್ನು ನೋಡುವುದೇ ಕಣ್ಣಿಗೊಂದು ಆನಂದ. ಈ ಬಾರಿಯ ಮಂಗಳೂರು ದಸರಾ ಮಹೋತ್ಸವಕ್ಕೆ ನಿನ್ನೆ (ಅ.03) ಚಾಲನೆ ದೊರಕಿದೆ. ವಿದ್ಯಾದೇವಿ ಶಾರದೆ, ವಿಘ್ನವಿನಾಶಕ ಗಣೇಶ ಸೇರಿದಂತೆ ಆದಿ ಶಕ್ತಿ ಹಾಗೂ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, 9 ದಿನಗಳ ಕಾಲ ಪೂಜೆ ನಡೆಯಲಿದೆ. ಅದ್ಧೂರಿ ಮೆರವಣಿಗೆಯ ಮೂಲಕ ಮುದ್ದು ಶಾರದೆಯನ್ನು ಇಲ್ಲಿನ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ನವರಾತ್ರಿಯ ಮೊದಲ ದಿನದ ಅದ್ಧೂರಿ ಸಂಭ್ರಮದ ಹಾಗೂ ಮುದ್ದು ಶಾರದೆಗೆ ಸಂಬಂಧಪಟ್ಟ ವಿಡಿಯೋಗಳು ಸೋಷಿಯಲ್‌ ಹರಿದಾಡುತ್ತಿವೆ. ಈ ಸಂಭ್ರಮದ ಸಣ್ಣ ಝಲಕ್‌ ಇಲ್ಲಿದೆ ನೋಡಿ…

ಮಂಗಳೂರು ದಸರಾದ ಮೊದಲ ದಿನದ ನವರಾತ್ರಿ ಸಂಭ್ರಮದ ಸುಂದರ ದೃಶ್ಯವನ್ನು ಸೂರಜ್‌ ಎಸ್.‌ ಅಂಚನ್‌ (suraj_s_anchan) ಎಂಬವರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಈ ಅದ್ಭುತ ದೃಶ್ಯಾವಳಿಯಲ್ಲಿ ಮುದ್ದು ಶಾರದೆಯ ಪ್ರತಿಷ್ಠಾಪನೆ, ಹುಲಿ ಕುಣಿತದ ಸಂಭ್ರಮದ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ: ರಾತ್ರಿ ವೇಳೆ ಮೈಸೂರು ಅರಮನೆಯ ಗುಮ್ಮಟದಲ್ಲಿ ಕೆಂಪು ಬಣ್ಣದ ದೀಪ ಉರಿಯುವುದನ್ನು ಏಕೆ ಗೊತ್ತಾ?

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಕುದ್ರೋಳಿ ಶಾರದೆಯ ಮುದ್ದು ಮುಖವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ