AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Dasara 2024: ಮಂಗಳೂರು ದಸರಾ ಮಹೋತ್ಸವದ ಮೊದಲ ದಿನದ ಝಲಕ್; ಇಲ್ಲಿದೆ ನೋಡಿ ವಿಡಿಯೋ

ಕುದ್ರೋಳಿ ಗೋಕರ್ಣಣಾಥೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷ ಪ್ರತಿವರ್ಷ ಬಹಳ ಅದ್ಧೂರಿಯಾಗಿ ಮಂಗಳೂರು ದಸರಾ ಮಹೋತ್ಸವನ್ನು ಆಚರಿಸಲಾಗುತ್ತದೆ. ಈ ಬಾರಿಯ ದಸರಾಕ್ಕೆ ನಿನ್ನೆ (ಅ.03) ಲನೆ ದೊರಕಿದ್ದು, ವಿದ್ಯಾದೇವಿ ಶಾರದೆ, ವಿಘ್ನವಿನಾಶಕ ಗಣೇಶ ಸೇರಿದಂತೆ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ನವರಾತ್ರಿಯ ಮೊದಲ ದಿನದ ಅದ್ಧೂರಿ ಸಂಭ್ರಮ ಹಾಗೂ ಮುದ್ದು ಶಾರದೆಗೆ ಸಂಬಂಧಪಟ್ಟ ಫೋಟೋ ವಿಡಿಯೋಗಳು ಸೋಷಿಯಲ್‌ ಹರಿದಾಡುತ್ತಿವೆ. ಈ ಸಂಭ್ರಮದ ಒಂದು ಸಣ್ಣ ಝಲಕ್‌ ಇಲ್ಲಿದೆ ನೋಡಿ

ಮಾಲಾಶ್ರೀ ಅಂಚನ್​
| Edited By: |

Updated on: Oct 04, 2024 | 12:55 PM

Share

ನಾಡ ಹಬ್ಬ ಮೈಸೂರು ದಸರಾವನ್ನು ಬಹಳ ಅದ್ಧೂರಿಯಾಗಿ ಆಚರಿಸುವಂತೆ ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾವನ್ನು ಕೂಡಾ ಪ್ರತಿವರ್ಷ ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಈ ದಸರಾ ಉತ್ಸವದಲ್ಲಿ ಮುದ್ದು ಶಾರದೆಯನ್ನು ನೋಡುವುದೇ ಕಣ್ಣಿಗೊಂದು ಆನಂದ. ಈ ಬಾರಿಯ ಮಂಗಳೂರು ದಸರಾ ಮಹೋತ್ಸವಕ್ಕೆ ನಿನ್ನೆ (ಅ.03) ಚಾಲನೆ ದೊರಕಿದೆ. ವಿದ್ಯಾದೇವಿ ಶಾರದೆ, ವಿಘ್ನವಿನಾಶಕ ಗಣೇಶ ಸೇರಿದಂತೆ ಆದಿ ಶಕ್ತಿ ಹಾಗೂ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, 9 ದಿನಗಳ ಕಾಲ ಪೂಜೆ ನಡೆಯಲಿದೆ. ಅದ್ಧೂರಿ ಮೆರವಣಿಗೆಯ ಮೂಲಕ ಮುದ್ದು ಶಾರದೆಯನ್ನು ಇಲ್ಲಿನ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ನವರಾತ್ರಿಯ ಮೊದಲ ದಿನದ ಅದ್ಧೂರಿ ಸಂಭ್ರಮದ ಹಾಗೂ ಮುದ್ದು ಶಾರದೆಗೆ ಸಂಬಂಧಪಟ್ಟ ವಿಡಿಯೋಗಳು ಸೋಷಿಯಲ್‌ ಹರಿದಾಡುತ್ತಿವೆ. ಈ ಸಂಭ್ರಮದ ಸಣ್ಣ ಝಲಕ್‌ ಇಲ್ಲಿದೆ ನೋಡಿ…

ಮಂಗಳೂರು ದಸರಾದ ಮೊದಲ ದಿನದ ನವರಾತ್ರಿ ಸಂಭ್ರಮದ ಸುಂದರ ದೃಶ್ಯವನ್ನು ಸೂರಜ್‌ ಎಸ್.‌ ಅಂಚನ್‌ (suraj_s_anchan) ಎಂಬವರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಈ ಅದ್ಭುತ ದೃಶ್ಯಾವಳಿಯಲ್ಲಿ ಮುದ್ದು ಶಾರದೆಯ ಪ್ರತಿಷ್ಠಾಪನೆ, ಹುಲಿ ಕುಣಿತದ ಸಂಭ್ರಮದ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ: ರಾತ್ರಿ ವೇಳೆ ಮೈಸೂರು ಅರಮನೆಯ ಗುಮ್ಮಟದಲ್ಲಿ ಕೆಂಪು ಬಣ್ಣದ ದೀಪ ಉರಿಯುವುದನ್ನು ಏಕೆ ಗೊತ್ತಾ?

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಕುದ್ರೋಳಿ ಶಾರದೆಯ ಮುದ್ದು ಮುಖವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!