AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು

ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು​​ ಕದ್ದೊಯ್ಯುತ್ತಿದ್ದ  ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್​ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ.

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು
ಕಳ್ಳನನ್ನು ಸೆರೆಹಿಡಿದ ಪೊಲೀಸರು
TV9 Web
| Edited By: |

Updated on:Jan 13, 2022 | 5:13 PM

Share

ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು​​ ಕದ್ದೊಯ್ಯುತ್ತಿದ್ದ  ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್​ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ. ನಗರದ ನೆಹರು ಮೈದಾನದ ಬಳಿ ಇಬ್ಬರು ವ್ಯಕ್ತಿಗಳು ಕೂಗುತ್ತಿರುವುದನ್ನು ನೋಡಿ ಪೊಲೀಸ್​ ಕಮಿಷನರ್​ ಕಚೇರಿಯಲ್ಲಿದ್ದ ಸಿಬ್ಬಂದಿ ಗಮನಿಸಿದ್ದಾರೆ. ನಂತರ ವಿಷಯ ತಿಳಿದು ಕಳ್ಳನನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಒಬ್ಬ ಆರೋಪಿ ಸೆರೆಯಾಗಿದ್ದನು. ಆತನ ಸಹಾಯದಿಂದ ಇನ್ನೊಬ್ಬ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಮಂಗಳೂರು ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಜ. 12 ರಂದು ನಡೆದಿದೆ. ಬಿಹಾರ ಮೂಲದ ಇಬ್ಬರ ಮೊಬೈಲ್​ ಹಾಗು ಇತರ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿಯೇ ಓರ್ವ ಆರೋಪಿಯನ್ನು ಹಿಡಿದಿದ್ದ ಪೊಲೀಸರು ಪ್ರಮುಖ ಆರೋಪಿಯನ್ನು ಬೆನ್ನಟ್ಟಿದ್ದರು. ಮಂಗಳೂರು ರೈಲು ನಿಲ್ದಾಣದ ಬಳಿ ಅರೋಪಿಯೊಬ್ಬನನ್ನು ಸೆರೆಹಿಡಿದಿದ್ದಾರೆ. ಸದ್ಯ ಸೆರೆಯಾದ ಆರೋಪಿಗಳನ್ನು ಶಮಂತ್​ (20), ಹರೀಶ್​ ಪೂಜಾರಿ(32) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕದ್ದಿರುವ ವಸ್ತುಗಳಾದ ಸ್ಯಾಮಸಂಗ್​​ ಮೊಬೈಲ್​ ಹಾಗೂ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಪೊಲೀಸ್​ ಸಿಬ್ಬಂದಿಗೆ ಸಾರ್ವಜನಿಕರು ಸಹಾಯ ಮಾಡಿದ್ದು, ಪೊಲೀಸರ ಚೇಸಿಂಗ್​ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನೂ ಓದಿ:

ಆರು ಸಿಂಹಿಣಿಗಳ ಜತೆ ಕಾಡಿನಲ್ಲಿ ರಾಜಾರೋಷವಾಗಿ ನಡೆದ ಮಹಿಳೆ: ವಿಡಿಯೋ ವೈರಲ್​

Published On - 5:10 pm, Thu, 13 January 22

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ