AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು

ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು​​ ಕದ್ದೊಯ್ಯುತ್ತಿದ್ದ  ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್​ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ.

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು
ಕಳ್ಳನನ್ನು ಸೆರೆಹಿಡಿದ ಪೊಲೀಸರು
TV9 Web
| Edited By: |

Updated on:Jan 13, 2022 | 5:13 PM

Share

ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು​​ ಕದ್ದೊಯ್ಯುತ್ತಿದ್ದ  ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್​ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ. ನಗರದ ನೆಹರು ಮೈದಾನದ ಬಳಿ ಇಬ್ಬರು ವ್ಯಕ್ತಿಗಳು ಕೂಗುತ್ತಿರುವುದನ್ನು ನೋಡಿ ಪೊಲೀಸ್​ ಕಮಿಷನರ್​ ಕಚೇರಿಯಲ್ಲಿದ್ದ ಸಿಬ್ಬಂದಿ ಗಮನಿಸಿದ್ದಾರೆ. ನಂತರ ವಿಷಯ ತಿಳಿದು ಕಳ್ಳನನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಒಬ್ಬ ಆರೋಪಿ ಸೆರೆಯಾಗಿದ್ದನು. ಆತನ ಸಹಾಯದಿಂದ ಇನ್ನೊಬ್ಬ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಮಂಗಳೂರು ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಜ. 12 ರಂದು ನಡೆದಿದೆ. ಬಿಹಾರ ಮೂಲದ ಇಬ್ಬರ ಮೊಬೈಲ್​ ಹಾಗು ಇತರ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿಯೇ ಓರ್ವ ಆರೋಪಿಯನ್ನು ಹಿಡಿದಿದ್ದ ಪೊಲೀಸರು ಪ್ರಮುಖ ಆರೋಪಿಯನ್ನು ಬೆನ್ನಟ್ಟಿದ್ದರು. ಮಂಗಳೂರು ರೈಲು ನಿಲ್ದಾಣದ ಬಳಿ ಅರೋಪಿಯೊಬ್ಬನನ್ನು ಸೆರೆಹಿಡಿದಿದ್ದಾರೆ. ಸದ್ಯ ಸೆರೆಯಾದ ಆರೋಪಿಗಳನ್ನು ಶಮಂತ್​ (20), ಹರೀಶ್​ ಪೂಜಾರಿ(32) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕದ್ದಿರುವ ವಸ್ತುಗಳಾದ ಸ್ಯಾಮಸಂಗ್​​ ಮೊಬೈಲ್​ ಹಾಗೂ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಪೊಲೀಸ್​ ಸಿಬ್ಬಂದಿಗೆ ಸಾರ್ವಜನಿಕರು ಸಹಾಯ ಮಾಡಿದ್ದು, ಪೊಲೀಸರ ಚೇಸಿಂಗ್​ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನೂ ಓದಿ:

ಆರು ಸಿಂಹಿಣಿಗಳ ಜತೆ ಕಾಡಿನಲ್ಲಿ ರಾಜಾರೋಷವಾಗಿ ನಡೆದ ಮಹಿಳೆ: ವಿಡಿಯೋ ವೈರಲ್​

Published On - 5:10 pm, Thu, 13 January 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ