AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು

ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು​​ ಕದ್ದೊಯ್ಯುತ್ತಿದ್ದ  ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್​ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ.

Video: ಸಿನಿಮಾ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಸೆರೆಹಿಡಿದ ಮಂಗಳೂರು ಪೊಲೀಸರು
ಕಳ್ಳನನ್ನು ಸೆರೆಹಿಡಿದ ಪೊಲೀಸರು
TV9 Web
| Edited By: |

Updated on:Jan 13, 2022 | 5:13 PM

Share

ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು​​ ಕದ್ದೊಯ್ಯುತ್ತಿದ್ದ  ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್​ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ. ನಗರದ ನೆಹರು ಮೈದಾನದ ಬಳಿ ಇಬ್ಬರು ವ್ಯಕ್ತಿಗಳು ಕೂಗುತ್ತಿರುವುದನ್ನು ನೋಡಿ ಪೊಲೀಸ್​ ಕಮಿಷನರ್​ ಕಚೇರಿಯಲ್ಲಿದ್ದ ಸಿಬ್ಬಂದಿ ಗಮನಿಸಿದ್ದಾರೆ. ನಂತರ ವಿಷಯ ತಿಳಿದು ಕಳ್ಳನನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಒಬ್ಬ ಆರೋಪಿ ಸೆರೆಯಾಗಿದ್ದನು. ಆತನ ಸಹಾಯದಿಂದ ಇನ್ನೊಬ್ಬ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಮಂಗಳೂರು ಪೊಲೀಸರ ಕರ್ತವ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಜ. 12 ರಂದು ನಡೆದಿದೆ. ಬಿಹಾರ ಮೂಲದ ಇಬ್ಬರ ಮೊಬೈಲ್​ ಹಾಗು ಇತರ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿಯೇ ಓರ್ವ ಆರೋಪಿಯನ್ನು ಹಿಡಿದಿದ್ದ ಪೊಲೀಸರು ಪ್ರಮುಖ ಆರೋಪಿಯನ್ನು ಬೆನ್ನಟ್ಟಿದ್ದರು. ಮಂಗಳೂರು ರೈಲು ನಿಲ್ದಾಣದ ಬಳಿ ಅರೋಪಿಯೊಬ್ಬನನ್ನು ಸೆರೆಹಿಡಿದಿದ್ದಾರೆ. ಸದ್ಯ ಸೆರೆಯಾದ ಆರೋಪಿಗಳನ್ನು ಶಮಂತ್​ (20), ಹರೀಶ್​ ಪೂಜಾರಿ(32) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕದ್ದಿರುವ ವಸ್ತುಗಳಾದ ಸ್ಯಾಮಸಂಗ್​​ ಮೊಬೈಲ್​ ಹಾಗೂ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಪೊಲೀಸ್​ ಸಿಬ್ಬಂದಿಗೆ ಸಾರ್ವಜನಿಕರು ಸಹಾಯ ಮಾಡಿದ್ದು, ಪೊಲೀಸರ ಚೇಸಿಂಗ್​ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನೂ ಓದಿ:

ಆರು ಸಿಂಹಿಣಿಗಳ ಜತೆ ಕಾಡಿನಲ್ಲಿ ರಾಜಾರೋಷವಾಗಿ ನಡೆದ ಮಹಿಳೆ: ವಿಡಿಯೋ ವೈರಲ್​

Published On - 5:10 pm, Thu, 13 January 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು