AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಂಗಿ ಹಾಕಿಸಿಕೊಂಡು ಬರುವೆ ಎಂದು ಹೇಳಿ ಪಾರ್ಲರ್ ಗೆ ಹೋದ ವಧು ನಾಪತ್ತೆ!

ವಧು ಅಥವಾ ವರ ನಾಪತ್ತೆಯಾಗಿ ನಡೆಯಬೇಕಾಗಿದ್ದ ಮದುವೆಗಳು ನಿಂತು ಹೋದಂತಹ ಅದೆಷ್ಟೋ ಘಟನೆಗಳ ಬಗೆಗಿನ ಸುದ್ದಿಗಳನ್ನು ಆಗಾಗ್ಗೆ ಕೇಳಿರುತ್ತೇವೆ. ಇದೀಗ ಇಂತಹದೊಂದು ಘಟನೆಯು ನಡೆದಿದ್ದು, ಹಸಮಣೆ ಏರಬೇಕಾಗಿದ್ದ ಯುವತಿಯೊಬ್ಬಳು ಮದುವೆ ಹಿಂದಿನ ದಿನವೇ ನಾಪತ್ತೆಯಾಗಿದ್ದಾಳೆ. ಇದರಿಂದ ನಡೆಯಬೇಕಿದ್ದ ಮದುವೆಯೇ ನಿಂತು ಹೋಗಿದೆ. ಹಾಗಾದ್ರೆ ಏನಿದು ಪ್ರಕರಣ? ಈ ಕುರಿತಾದ ಮಾಹಿತಿ ಇಲ್ಲಿದೆ.

ಮದರಂಗಿ ಹಾಕಿಸಿಕೊಂಡು ಬರುವೆ ಎಂದು ಹೇಳಿ ಪಾರ್ಲರ್ ಗೆ ಹೋದ ವಧು ನಾಪತ್ತೆ!
A Bride Suddenly Goes Missing Previous Day Of Wedding
ಸಾಯಿನಂದಾ
| Edited By: |

Updated on:Apr 21, 2025 | 3:13 PM

Share

ಮನೆಯವರ ಒತ್ತಾಯಕ್ಕೆ ಮಣಿದು ಇಷ್ಟವಿಲ್ಲದ ಮದುವೆ (marriage) ಗೆ ಒಪ್ಪಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಸಂಸಾರ ನಡೆಸುತ್ತಿರುವ ಎಷ್ಟೋ ಹೆಣ್ಣು ಮಕ್ಕಳು ಇದ್ದಾರೆ. ಆದರೆ ಈಗ ಕಾಲ ಬದಲಾಗಿದೆ ಬಿಡಿ. ತಾವು ಇಷ್ಟ ಪಟ್ಟ ಹುಡುಗ ಅಥವಾ ಹುಡುಗಿಗಾಗಿ ಅಪ್ಪ ಅಮ್ಮನ ಮರ್ಯಾದೆಯನ್ನು ಬೀದಿಗೆ ತರುವವರು ಇದ್ದಾರೆ. ಹೌದು, ತಂದೆ ತಾಯಿಯವರ ಇಷ್ಟಕ್ಕೆ ಕಟ್ಟು ಬಿದ್ದು ಮದುವೆಗೆ ಒಪ್ಪಿಗೆ ಸೂಚಿಸಿ, ಮದುವೆ ದಿನವೆ ಓಡಿ ಹೋಗುವ ಎಷ್ಟೋ ಪ್ರಕರಣಗಳ ಬಗ್ಗೆ ನೀವು ಕೇಳಿರುತ್ತೀರಿ. ಇದೀಗ ಮದುವೆಯ ಹಿಂದಿನ ದಿನ ಮದರಂಗಿ (mehandi) ಹಾಕಿಸಿಕೊಂಡು ಬರುವೆ ಎಂದು ಹೇಳಿ ಬ್ಯೂಟಿ ಪಾರ್ಲರ್ (beauty parlour) ಗೆ ಹೋದ ವಧು ನಾಪತ್ತೆಯಾಗಿದ್ದಾಳೆ. ಈ ಘಟನೆಯು ಮಂಗಳೂರಿ (manglore) ನ ಬೋಳಾರ್ (bolar) ನಲ್ಲಿ ನಡೆದಿದೆ.

22 ವರ್ಷದ ಪಲ್ಲವಿ ನಾಪತ್ತೆಯಾದ ಯುವತಿಯಾಗಿದ್ದು, ಮದುವೆಯ ಹಿಂದಿನ ದಿನ ಮೆಹಂದಿ ಹಾಕಿಸಿಕೊಂಡು ಬರುವೆ ಎಂದು ಮನೆಯಲ್ಲಿ ಹೇಳಿ ಬ್ಯೂಟಿ ಪಾರ್ಲರ್ ಗೆ ಹೋಗಿದ್ದಳು. ಆದರೆ ತಡರಾತ್ರಿಯಾದರೂ ಆಕೆಯು ಮನೆಗೆ ವಾಪಾಸಾಗಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ 16 ರಂದು ಮದುವೆಯು ನಡೆಯಬೇಕಿತ್ತು. ಆದರೆ ಒಂದು ದಿನ ಮುಂಚೆಯೇ ಅಂದರೆ ಏಪ್ರಿಲ್ 15 ರಂದು ಈ ಯುವತಿಯು ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಕೂಡ ಸ್ವಿಚ್ ಆಫ್ ಎಂದು ಬಂದಿದೆ. ಮದುವೆಗೆ ಒಂದು ದಿನ ಇರುವಾಗಲೇ ಯುವತಿಯು ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ :ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕ, ಪ್ರಾಣ ಪಣಕ್ಕಿಟ್ಟು ಬಾಲಕನ ರಕ್ಷಣೆಗೆ ಧಾವಿಸಿದ ವ್ಯಕ್ತಿ, ವಿಡಿಯೋ ವೈರಲ್

ಹೌದು, ಮನೆಯವರು ಪಲ್ಲವಿಯ ಒಪ್ಪಿಗೆಯ ಮೇರೆಗೆ ಈ ಮದುವೆ ನಿಶ್ಚಯ ಮಾಡಿದ್ದರು. ಹೀಗಾಗಿ ಈ ಮದುವೆಯಾಗಬೇಕಿದ್ದ ಯುವಕನ ಜೊತೆಗೆ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಸೇರಿದಂತೆ ಮೆಹಂದಿ ಪಾರ್ಟಿ ಎಲ್ಲವೂ ಅದ್ದೂರಿಯಾಗಿಯೇ ನಡೆದಿತ್ತು. ಹೀಗಿರುವಾಗ ಮದುವೆಯ ಹಿಂದಿನ ದಿನವೇ ವಧು ನಾಪತ್ತೆಯಾಗಿರುವುದರಿಂದ ನಡೆಯಬೇಕಿದ್ದ ಮದುವೆಯು ನಿಂತು ಹೋಗಿದೆ. ಇದರಿಂದ ಎರಡು ಕುಟುಂಬವು ತಲೆತಗ್ಗಿಸುವಂತೆ ಆಗಿದೆ. ಈ ಘಟನೆಗೆ ಸಂಬಂಧ ಪಟ್ಟಂತೆ ಮಂಗಳೂರು ದಕ್ಷಿಣ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Sun, 20 April 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!