Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಮಿಸ್ ಆಗಿದ್ರೂ ಈ ವ್ಯಕ್ತಿ ಹುಲಿಗೆ ಆಹಾರ, ಎದೆ ಝಲ್ ಎನಿಸುವ ವಿಡಿಯೋ 

ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನ ಪ್ರದೇಶದ  ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಅದೇ ರಸ್ತೆಯಲ್ಲಿ ಬೃಹತ್ ಗಾತ್ರದ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.  ಸ್ವಲ್ಪ ಮಿಸ್ ಆಗಿದ್ರೂ  ಈ ವ್ಯಕ್ತಿ ಹುಲಿಗೆ ಆಹಾರವಾಗುತ್ತಿದ್ದ. 

ಸ್ವಲ್ಪ ಮಿಸ್ ಆಗಿದ್ರೂ ಈ ವ್ಯಕ್ತಿ ಹುಲಿಗೆ ಆಹಾರ, ಎದೆ ಝಲ್ ಎನಿಸುವ ವಿಡಿಯೋ 
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 08, 2023 | 5:56 PM

ಕಾಡುಗಳ ವಿನಾಶದ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ  ಕಾಡುಗಳಲ್ಲಿರುವ ಪ್ರಾಣಿಗಳೆಲ್ಲವೂ ಆಹಾರವನ್ನು ಅರಸುತ್ತಾ ನಾಡಿನೆಡೆಗೆ ಬರಲಾರಂಭಿಸಿವೆ. ಈ ರೀತಿಯ ಹಲವು ಘಟನೆಗಳು ಪ್ರತಿನಿತ್ಯ ನಡೆಯುತ್ತಲೇ ಇರುತ್ತವೆ. ರೈತರ ಜಮೀನಿಗೆ ನುಗ್ಗಿದ ಆನೆ, ಮನೆಗೆ ನುಗ್ಗಿ ಸಾಕು ನಾಯಿಯನ್ನು ತಿಂದು ತೇಗಿದ ಹುಲಿ ಹೀಗೆ ಕಾಡು ಪ್ರಾಣಿಗಳ ಕುರಿತ ಹಲವಾರು ಸುದ್ದಿಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಹರಿದಾಡುತ್ತಿರುತ್ತವೆ.  ಇದೇ ರೀತಿಯ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ರಸ್ತೆಯಲ್ಲಿ ಪ್ರಶಾಂತವಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಅದೇ ರಸ್ತೆಯಲ್ಲಿ ಹುಲಿಯೊಂದು ರಸ್ತೆ ದಾಟುವ ದೃಶ್ಯ ಸೆರೆಯಾಗಿದೆ.  ಸ್ವಲ್ಪ ಮಿಸ್ ಆಗಿದ್ರೂ ಆ ವ್ಯಕ್ತಿ  ಮಾತ್ರ ಹುಲಿಯ ಬಾಯಿಗೆ ಆಹಾರವಾಗುತ್ತಿದ್ದ ಎಂದು ಹಲವರು ಹೇಳಿದ್ದಾರೆ.

ಈ ಘಟನೆ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾವನದ ಬಳಿ ನಡೆದಿದೆ. ಪ್ರಸ್ತುತ ಉತ್ತರಾಖಂಡದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಪ್ರವಾಸೋದ್ಯಮದ ದೃಷ್ಟಿಯಿಂದ ಇದು ಸಂತಸದ ವಿಷಯವಾದರೂ, ಅಲ್ಲಿನ ಜನಸಾಮಾನ್ಯರಿಗೆ ಸ್ವಲ್ಪ ಅಪಾಯದ ಸಂಕೇತ ಅಂತಾನೇ ಹೇಳಬಹುದು.   ಏಕೆಂದರೆ  ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಸುತ್ತಮುತ್ತ ಹುಲಿಗಳ ಓಡಾಟ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಜನಸಾಮಾನ್ಯರ ಮೇಲೆ ಹುಲಿಗಳು ದಾಳಿ ಮಾಡಿರುವ ಸುದ್ದಿಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ ಅಂತಹದ್ದೇ ಘಟನೆ ಇದೇ ಸ್ಥಳದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಬೃಹದಾಕಾರದ ಹುಲಿಯೊಂದು ಆತನ ಪಕ್ಕದಲ್ಲಿಯೇ ರಸ್ತೆ ದಾಟಿದ್ದು, ಆ ವ್ಯಕ್ತಿ ಕೂದಲೆಳೆಯುವ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾನೆ. ಈ ಘಟನೆಯ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಇದನ್ನೂ ಓದಿ: ತನ್ನ ನೆಚ್ಚಿನ ಹಾಡನ್ನು ಕೇಳಿದಾಗ ಈ ಶ್ವಾನದ ಪ್ರತಿಕ್ರಿಯೆ ಹೇಗಿತ್ತು ನೋಡಿ

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ:

ಈ ವಿಡಿಯೋವನ್ನು  @DeccanChronicle  ಎಂಬ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು,  ವಿಡಿಯೋದಲ್ಲಿ ಉತ್ತರಾಖಂಡದ ಜಿಮ್ ಕಾರ್ಬೆಟ್ ಪ್ರದೇಶದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಲೆಂದು ವ್ಯಕ್ತಿಯೊಬ್ಬ ಅಲ್ಲಿನ ರಸ್ತೆಯ ಪಕ್ಕದಲ್ಲಿ  ತನ್ನ ಪಾಡಿಗೆ ನಡೆದುಕೊಂಡು ಹೋಗುತ್ತಿರುತ್ತಾನೆ,  ಆ ವೇಳೆಯನ್ನು ಆ ವ್ಯಕ್ತಿ  ಒಮ್ಮೆಲೆ ಬೆಚ್ಚಿ ಬಿದ್ದು, ಹಿಂದೆ ಸರಿದು ಓಡಿ ಬರುತ್ತಾನೆ. ಏಕೆಂದರೆ  ಬೃಹದಾಕಾರದ ಹುಲಿಯೊಂದು ಒಂದು ಬದಿಯ ಕಾಡಿನಿಂದ ಇನ್ನೊಂದು ಬದಿಯ ಅರಣ್ಯ ಪ್ರದೇಶಕ್ಕೆ ಹೋಗಲೆಂದು ರಸ್ತೆ ದಾಟಲು ಬರುತ್ತೆ. ಮತ್ತು ಆ ಹುಲಿ ಈ  ವ್ಯಕ್ತಿಯ ಮೇಲೆ ಯಾವುದೇ ದಾಳಿಯನ್ನು  ಮಾಡದೆ ಥಟ್ಟನೆ ರಸ್ತೆ ದಾಟಿ ಹೋಗಿಬಿಡುತ್ತದೆ. ಈ ದೃಶ್ಯವನ್ನು  ಕಂಡ ಇತರರು ಈ ಹುಲಿ ವಾಪಸ್ ಬಂದು ದಾಳಿ ಮಾಡಿದರೆ ತುಂಬಾ ಕಷ್ಟ, ಪ್ರಾಣ ಉಳಿದರೆ ಸಾಕು ಎಂದು ಅಲ್ಲಿಂದ ಓಡಿ ಹೋಗುವ ದೃಶ್ಯಾವಳಿಯನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ