Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ

Mari Mata Hindu Temple : '150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಮಧ್ಯರಾತ್ರಿಯಲ್ಲಿ ಬುಲ್ಡೋಜರ್​ ಮೂಲಕ ಧ್ವಂಸ ಮಾಡಲಾಗಿದೆ. ಕೆಲ ವರ್ಷಗಳ ಹಿಂದೆ ಇದ್ದ ಸ್ಥಿತಿಗೆ ಪಾಕಿಸ್ತಾನವು ಮರಳುತ್ತಿದೆ' ಎಂದಿದ್ದಾರೆ ಪ್ರೊ. ಅಶೋಕ ಸ್ವೈನ್​  

Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ
ಕರಾಚಿಯಲ್ಲಿ ಧ್ವಂಸಗೊಂಡ ಮಾರಿ ಮಾತಾ ಹಿಂದೂ ದೇವಸ್ಥಾನ
Follow us
|

Updated on:Jul 17, 2023 | 1:22 PM

Pakistan : ಕರಾಚಿಯಲ್ಲಿ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು (Mari Mata Hindu Temple) ನೆಲಸಮಗೊಳಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿ ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್​ ಬಂದು ನಿಂತಿತು. ನೋಡನೋಡುತ್ತಿದ್ದಂತೆ ದೇವಸ್ಥಾನವನ್ನು ಧ್ವಂಸಗೊಳಿಸಲಾಯಿತು. ಆದರೆ ಹೊರಾವರಣದ ಗೋಡೆಗಳು ಮತ್ತು ಗೇಟ್ ಮಾತ್ರ​ ಸುಸ್ಥಿತಿಯಲ್ಲಿವೆ. ಅಲ್ಲದೆ ಬುಲ್ಡೋಜರ್ ನಿರ್ವಹಿಸಿದ ತಂಡಕ್ಕೆ ಪೊಲೀಸರು ‘ಪಾಕೀಟು’ ನೀಡುವುದನ್ನು ನೋಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ ಎಂದು ಪಾಕಿಸ್ತಾನದ ಇಂಗ್ಲಿಷ್​ ಪತ್ರಿಕೆ Dawn ವರದಿ ಮಾಡಿದೆ.

ಮಾರಿ ಮಾತಾ ದೇವಸ್ಥಾನವು ಕರಾಚಿಯ ಮುಖಿ ಚೋಹಿತ್ರಮ್​ ರಸ್ತೆಯ ಸೋಲ್ಜರ್​ ಬಜಾರ್​ ಪೊಲೀಸ್​ ಠಾಣೆಯ ಬಳಿ ಇದೆ. ಅತ್ಯಂತ ಹಳೆಯ ದೇವಸ್ಥಾನವಾದ ಶ್ರೀ ಪಂಚಮುಖಿ ಹನುಮಾನ್​​ ಮಂದಿರದ ಶ್ರೀರಾಮನಾಥ ಮಿಶ್ರಾ ಮಹಾರಾಜ್​, ‘ಇದು ಅತ್ಯಂತ ಹಳೆಯ ದೇವಾಲಯ. 150 ವರ್ಷಗಳ ಹಿಂದೆ ಇದನ್ನು ನಿರ್ಮಿಸಲಾಗಿದ್ದು  ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದೆ ಎಂದು ಕೇಳಿ ತಿಳಿದಿದ್ದೇನೆ. ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು’ ಎಂದಿದ್ದಾರೆ.

ಇದನ್ನೂ ಓದಿ : Viral: ಒಂಟಿತನ ಕಾಡುತ್ತಿದೆಯೇ?;ಬಾಡಿಗೆ ಗೆಳತಿಯನ್ನು ನೇಮಿಸಿಕೊಳ್ಳಿ!

‘ಇದು ಅತ್ಯಂತ ಹಳೆಯ ದೇವಸ್ಥಾನ. ಇದು ಮದ್ರಾಸಿ ಹಿಂದೂ ಸಮುದಾಯವು ಆಡಳಿತದಲ್ಲಿತ್ತು. ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಯಾವಾಗ ಬೇಕಾದರೂ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಹಾಗಾಗಿ ಆಡಳಿತ ಮಂಡಳಿಯು ಮನಸ್ಸಿಲ್ಲದಿದ್ದರೂ ದೇವಸ್ಥಾನವನ್ನು ನವೀಕರಣಗೊಳಿಸುವತನಕ ಬೇರೊಂದು ಜಾಗದ ಸಣ್ಣಕೋಣೆಗೆ ತಾತ್ಕಾಲಿಕವಾಗಿ ದೇವರ ಮೂರ್ತಿಯನ್ನು ಸ್ಥಳಾಂತರಿಸಿತ್ತು. ಆದರೆ ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ  ಈ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ’ ಎಂದಿದ್ದಾರೆ ಶ್ರೀರಾಮನಾಥ ಮಿಶ್ರಾ ಮಹಾರಾಜ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Mon, 17 July 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ