AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ

Mari Mata Hindu Temple : '150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಮಧ್ಯರಾತ್ರಿಯಲ್ಲಿ ಬುಲ್ಡೋಜರ್​ ಮೂಲಕ ಧ್ವಂಸ ಮಾಡಲಾಗಿದೆ. ಕೆಲ ವರ್ಷಗಳ ಹಿಂದೆ ಇದ್ದ ಸ್ಥಿತಿಗೆ ಪಾಕಿಸ್ತಾನವು ಮರಳುತ್ತಿದೆ' ಎಂದಿದ್ದಾರೆ ಪ್ರೊ. ಅಶೋಕ ಸ್ವೈನ್​  

Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ
ಕರಾಚಿಯಲ್ಲಿ ಧ್ವಂಸಗೊಂಡ ಮಾರಿ ಮಾತಾ ಹಿಂದೂ ದೇವಸ್ಥಾನ
Follow us
ಶ್ರೀದೇವಿ ಕಳಸದ
|

Updated on:Jul 17, 2023 | 1:22 PM

Pakistan : ಕರಾಚಿಯಲ್ಲಿ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು (Mari Mata Hindu Temple) ನೆಲಸಮಗೊಳಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿ ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್​ ಬಂದು ನಿಂತಿತು. ನೋಡನೋಡುತ್ತಿದ್ದಂತೆ ದೇವಸ್ಥಾನವನ್ನು ಧ್ವಂಸಗೊಳಿಸಲಾಯಿತು. ಆದರೆ ಹೊರಾವರಣದ ಗೋಡೆಗಳು ಮತ್ತು ಗೇಟ್ ಮಾತ್ರ​ ಸುಸ್ಥಿತಿಯಲ್ಲಿವೆ. ಅಲ್ಲದೆ ಬುಲ್ಡೋಜರ್ ನಿರ್ವಹಿಸಿದ ತಂಡಕ್ಕೆ ಪೊಲೀಸರು ‘ಪಾಕೀಟು’ ನೀಡುವುದನ್ನು ನೋಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ ಎಂದು ಪಾಕಿಸ್ತಾನದ ಇಂಗ್ಲಿಷ್​ ಪತ್ರಿಕೆ Dawn ವರದಿ ಮಾಡಿದೆ.

ಮಾರಿ ಮಾತಾ ದೇವಸ್ಥಾನವು ಕರಾಚಿಯ ಮುಖಿ ಚೋಹಿತ್ರಮ್​ ರಸ್ತೆಯ ಸೋಲ್ಜರ್​ ಬಜಾರ್​ ಪೊಲೀಸ್​ ಠಾಣೆಯ ಬಳಿ ಇದೆ. ಅತ್ಯಂತ ಹಳೆಯ ದೇವಸ್ಥಾನವಾದ ಶ್ರೀ ಪಂಚಮುಖಿ ಹನುಮಾನ್​​ ಮಂದಿರದ ಶ್ರೀರಾಮನಾಥ ಮಿಶ್ರಾ ಮಹಾರಾಜ್​, ‘ಇದು ಅತ್ಯಂತ ಹಳೆಯ ದೇವಾಲಯ. 150 ವರ್ಷಗಳ ಹಿಂದೆ ಇದನ್ನು ನಿರ್ಮಿಸಲಾಗಿದ್ದು  ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದೆ ಎಂದು ಕೇಳಿ ತಿಳಿದಿದ್ದೇನೆ. ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು’ ಎಂದಿದ್ದಾರೆ.

ಇದನ್ನೂ ಓದಿ : Viral: ಒಂಟಿತನ ಕಾಡುತ್ತಿದೆಯೇ?;ಬಾಡಿಗೆ ಗೆಳತಿಯನ್ನು ನೇಮಿಸಿಕೊಳ್ಳಿ!

‘ಇದು ಅತ್ಯಂತ ಹಳೆಯ ದೇವಸ್ಥಾನ. ಇದು ಮದ್ರಾಸಿ ಹಿಂದೂ ಸಮುದಾಯವು ಆಡಳಿತದಲ್ಲಿತ್ತು. ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಯಾವಾಗ ಬೇಕಾದರೂ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಹಾಗಾಗಿ ಆಡಳಿತ ಮಂಡಳಿಯು ಮನಸ್ಸಿಲ್ಲದಿದ್ದರೂ ದೇವಸ್ಥಾನವನ್ನು ನವೀಕರಣಗೊಳಿಸುವತನಕ ಬೇರೊಂದು ಜಾಗದ ಸಣ್ಣಕೋಣೆಗೆ ತಾತ್ಕಾಲಿಕವಾಗಿ ದೇವರ ಮೂರ್ತಿಯನ್ನು ಸ್ಥಳಾಂತರಿಸಿತ್ತು. ಆದರೆ ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ  ಈ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ’ ಎಂದಿದ್ದಾರೆ ಶ್ರೀರಾಮನಾಥ ಮಿಶ್ರಾ ಮಹಾರಾಜ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Mon, 17 July 23

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ