AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ

Mari Mata Hindu Temple : '150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಮಧ್ಯರಾತ್ರಿಯಲ್ಲಿ ಬುಲ್ಡೋಜರ್​ ಮೂಲಕ ಧ್ವಂಸ ಮಾಡಲಾಗಿದೆ. ಕೆಲ ವರ್ಷಗಳ ಹಿಂದೆ ಇದ್ದ ಸ್ಥಿತಿಗೆ ಪಾಕಿಸ್ತಾನವು ಮರಳುತ್ತಿದೆ' ಎಂದಿದ್ದಾರೆ ಪ್ರೊ. ಅಶೋಕ ಸ್ವೈನ್​  

Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ
ಕರಾಚಿಯಲ್ಲಿ ಧ್ವಂಸಗೊಂಡ ಮಾರಿ ಮಾತಾ ಹಿಂದೂ ದೇವಸ್ಥಾನ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 17, 2023 | 1:22 PM

Share

Pakistan : ಕರಾಚಿಯಲ್ಲಿ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು (Mari Mata Hindu Temple) ನೆಲಸಮಗೊಳಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿ ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್​ ಬಂದು ನಿಂತಿತು. ನೋಡನೋಡುತ್ತಿದ್ದಂತೆ ದೇವಸ್ಥಾನವನ್ನು ಧ್ವಂಸಗೊಳಿಸಲಾಯಿತು. ಆದರೆ ಹೊರಾವರಣದ ಗೋಡೆಗಳು ಮತ್ತು ಗೇಟ್ ಮಾತ್ರ​ ಸುಸ್ಥಿತಿಯಲ್ಲಿವೆ. ಅಲ್ಲದೆ ಬುಲ್ಡೋಜರ್ ನಿರ್ವಹಿಸಿದ ತಂಡಕ್ಕೆ ಪೊಲೀಸರು ‘ಪಾಕೀಟು’ ನೀಡುವುದನ್ನು ನೋಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ ಎಂದು ಪಾಕಿಸ್ತಾನದ ಇಂಗ್ಲಿಷ್​ ಪತ್ರಿಕೆ Dawn ವರದಿ ಮಾಡಿದೆ.

ಮಾರಿ ಮಾತಾ ದೇವಸ್ಥಾನವು ಕರಾಚಿಯ ಮುಖಿ ಚೋಹಿತ್ರಮ್​ ರಸ್ತೆಯ ಸೋಲ್ಜರ್​ ಬಜಾರ್​ ಪೊಲೀಸ್​ ಠಾಣೆಯ ಬಳಿ ಇದೆ. ಅತ್ಯಂತ ಹಳೆಯ ದೇವಸ್ಥಾನವಾದ ಶ್ರೀ ಪಂಚಮುಖಿ ಹನುಮಾನ್​​ ಮಂದಿರದ ಶ್ರೀರಾಮನಾಥ ಮಿಶ್ರಾ ಮಹಾರಾಜ್​, ‘ಇದು ಅತ್ಯಂತ ಹಳೆಯ ದೇವಾಲಯ. 150 ವರ್ಷಗಳ ಹಿಂದೆ ಇದನ್ನು ನಿರ್ಮಿಸಲಾಗಿದ್ದು  ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದೆ ಎಂದು ಕೇಳಿ ತಿಳಿದಿದ್ದೇನೆ. ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು’ ಎಂದಿದ್ದಾರೆ.

ಇದನ್ನೂ ಓದಿ : Viral: ಒಂಟಿತನ ಕಾಡುತ್ತಿದೆಯೇ?;ಬಾಡಿಗೆ ಗೆಳತಿಯನ್ನು ನೇಮಿಸಿಕೊಳ್ಳಿ!

‘ಇದು ಅತ್ಯಂತ ಹಳೆಯ ದೇವಸ್ಥಾನ. ಇದು ಮದ್ರಾಸಿ ಹಿಂದೂ ಸಮುದಾಯವು ಆಡಳಿತದಲ್ಲಿತ್ತು. ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಯಾವಾಗ ಬೇಕಾದರೂ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಹಾಗಾಗಿ ಆಡಳಿತ ಮಂಡಳಿಯು ಮನಸ್ಸಿಲ್ಲದಿದ್ದರೂ ದೇವಸ್ಥಾನವನ್ನು ನವೀಕರಣಗೊಳಿಸುವತನಕ ಬೇರೊಂದು ಜಾಗದ ಸಣ್ಣಕೋಣೆಗೆ ತಾತ್ಕಾಲಿಕವಾಗಿ ದೇವರ ಮೂರ್ತಿಯನ್ನು ಸ್ಥಳಾಂತರಿಸಿತ್ತು. ಆದರೆ ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ  ಈ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ’ ಎಂದಿದ್ದಾರೆ ಶ್ರೀರಾಮನಾಥ ಮಿಶ್ರಾ ಮಹಾರಾಜ್.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:01 pm, Mon, 17 July 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!