AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ

Bihar News: ಸಹಾಯಕ ನರ್ಸ್​ ಆಗಿದ್ದ ಪೂನಂ ಕೊವಿಡ್​ ಅವಧಿಯ ನಂತರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಕೊನೆಯ ಆಸೆಯನ್ನು ಐಸಿಯುನಲ್ಲಿಯೇ ನೆರವೇರಿಸಲಾಯಿತು. ಎರಡು ಗಂಟೆಗಳ ನಂತರ ಅವರು ಕೊನೆಯುಸಿರೆಳೆದರು.

ತಾಯಿಯ ಕೊನೆಯ ಆಸೆ ಪೂರೈಸಲು ಐಸಿಯುನಲ್ಲಿಯೇ ಮಗಳ ಮದುವೆ
ತಾಯಿಯ ಕೊನೆಯ ಆಸೆ ತೀರಿಸಲು ಐಸಿಯುನಲ್ಲಿಯೇ ಮದುವೆಯಾದ ಮಗಳು
TV9 Web
| Updated By: Digi Tech Desk|

Updated on:Dec 27, 2022 | 5:26 PM

Share

ಮದುವೆ ಎಂದರೆ ಹೀಗೇ ಆಗಬೇಕೆಂಬ ನಿಯಮವೇನೂ ಇಲ್ಲ. ಹಾಗೆಂದು ಎಲ್ಲವೂ ನಮ್ಮ ಎಣಿಕೆಯಂತೆಯೇ ನೆರವೇರುವುದಿಲ್ಲ. ಸಂದರ್ಭಕ್ಕೆ ತಕ್ಕಂತೆ ನಿಭಾವಣೆ ಮಾಡುವುದು ಅನಿವಾರ್ಯವಾಗುತ್ತದೆ. ಅದರಲ್ಲಿಯೂ ಮದುವೆ ಎನ್ನುವುದು ಭಾವಬಂಧಕ್ಕೆ ಸಂಬಂಧಿಸಿದ್ದು. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ವಧುವಿನ ತಾಯಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿದ್ದಾರೆ. ಮಗಳ ಮದುವೆಯನ್ನು ನೋಡುವುದೇ ಅವರ ಕೊನೆಯ ಆಸೆಯಾಗಿತ್ತು. ಅಂತೂ ಅದು ಸಾಧ್ಯವಾಗಿದೆ.

ಬಿಹಾರದ ಗುರಾರು ಬ್ಲಾಕ್​ನ ಬಾಲಿ ಗ್ರಾಮದ ನಿವಾಸಿ ಪೂನಂ ಕುಮಾರಿ ವರ್ಮಾ ಎಂಬುವವರ ಆರೋಗ್ಯ ತೀರಾ ಬಿಗಡಾಯಿಸಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಯಾದ ಖಾಸಗಿ ಆಸ್ಪತ್ರೆಯ ವೈದ್ಯರು ಇವರ ಆರೋಗ್ಯ ಚಿಂತಾಜನಕವಾಗಿದೆ ಯಾವ ಸಂದರ್ಭದಲ್ಲಿಯೂ ಏನೂ ಆಗಬಹುದು ಎಂದು ಮೊದಲೇ ಹೇಳಿದ್ದರು. ಹಾಗಾಗಿ ಪೂನಂ ತನ್ನ ಮಗಳು ಚಾಂದನಿ (26)ಯ ಮದುವೆ ನೋಡುವುದು ತನ್ನ ಕೊನೆಯ ಆಸೆಯಾಗಿದ್ದು ಅದನ್ನು ನೆರವೇರಿಸಿ ಕೊಡಬೇಕೆಂದು ಕುಟುಂಬಸ್ಥರಲ್ಲಿ ವಿನಂತಿಸಿಕೊಂಡಳು.

ಇದನ್ನೂ ಓದಿ : ಅಂಗಾಂಗದಾನ ಪ್ರತಿಜ್ಞೆಯ ಮೂಲಕ ನವದಾಂಪತ್ಯಕ್ಕೆ ಕಾಲಿಡಲಿರುವ ಆಂಧ್ರಪ್ರದೇಶದ ಜೋಡಿ

ಆ ಪ್ರಕಾರ ಗುರುವಾ ಪೊಲೀಸ್​ ಠಾಣೆಯ ವ್ಯಾಪ್ತಿಯ ಸೇಲಂಪುರದ ನಿವಾಸಿ ಸುಮಿತ್ ಗೌರವ್ (28) ಅವರೊಂದಿಗೆ ಚಾಂದನಿಯ ಮದುವೆ ನೆರವೇರಿತು. ಆದರೆ ಮದುವೆಯಾದ ಎರಡು ಗಂಟೆಗಳ ನಂತರ ವಧುವಿನ ತಾಯಿ ಪೂನಂ ನಿಧನರಾದರು. ಇಂಥ ಸಂಕಟಮಯ, ಸಂದಿಗ್ಧ ಮತ್ತು ಭಾವನಾತ್ಮಕ ಸಂದರ್ಭಕ್ಕೆ ಅಲ್ಲಿದ್ದವರೆಲ್ಲ ಸಾಕ್ಷಿಯಾದರು.

ಇದನ್ನೂ ಓದಿ : ಹೇಳಿ ಕೇಳಿ ಗೂಳಿ, ಆಮಂತ್ರಣ ಬೇಕೇ ಮದುವೆಗೆ? ವೈರಲ್ ಆದ ವಿಡಿಯೋ ನೋಡಿ

ಸುಮಿತ್ ಮತ್ತು ಚಾಂದನಿಯ ನಿಶ್ಚಿತಾರ್ಥ ಇದೇ 26ರಂದು ನೆರವೇರಿಸಲು ನಿರ್ಧರಿಸಲಾಗಿತ್ತು. ಆದರೆ ವಧುವಿನ ತಾಯಿ ಪೂನಂ ತಮ್ಮ ಕೊನೆಯ ಆಸೆಯನ್ನು ನೆರವೇರಿಸಲು ಕೇಳಿಕೊಂಡಾಗ ಎರಡೂ ಕುಟುಂಬಗಳು ಈ ಮಾರ್ಪಾಡನ್ನು ಮಾಡಿಕೊಂಡವು. ಹಾಗಾಗಿ ಆಸ್ಪತ್ರೆಯಲ್ಲಿಯೇ ವಧುವರರು ಹಾರ ಬದಲಾಯಿಸಿಕೊಂಡರು. ಕುಟುಂಬದ ನಾಲ್ಕು ಜನ ಮಾತ್ರ ಹಾಜರಿದ್ದರು.

ಇದನ್ನೂ ಓದಿ : ರಾ ರಾ ರಕ್ಕಮ್ಮ; ತನ್ನ ಮದುವೆಯ ದಿನ ವಧು ನರ್ತಿಸಿದ ವಿಡಿಯೋ ವೈರಲ್​

‘ನನ್ನ ತಾಯಿ ಪೂನಂ ಮಗಧ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಹಾಯಕ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೊರೊನಾ ಅವಧಿಯ ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಹೃದ್ರೋಗವೂ ಇತ್ತು. ಅವರ ಕೊನೆಯ ಆಸೆಯನ್ನು ನೆರವೇರಿಸಲು ಆಸ್ಪತ್ತೆಯಲ್ಲಿಯೇ ಮದುವೆಯಾದೆ. ಈಗ ಅವರು ನಮ್ಮೊಂದಿಗಿಲ್ಲದೇ ಇರುವುದು ದೊಡ್ಡ ದುಃಖ.’ ಎಂದಿದ್ದಾರೆ ವಧು ಚಾಂದನಿ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:08 pm, Tue, 27 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ