AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನ

ಮಹಾರಾಷ್ಟ್ರ ಅರಣ್ಯ ಇಲಾಖೆ ಆರೋಪಿಯ ಮೊಬೈಲ್‌ ಪರಿಶೀಲಿಸಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯದ ದಾಖಲೆಯನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನ
ಬೆಂಗಾಲ್ ಮಾನಿಟರ್ ಹಲ್ಲಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 14, 2022 | 4:34 PM

ಮಹಾರಾಷ್ಟ್ರ: ಕಾಮಾಂಧರು ಮಾಡಿರೋ ಈ ಕೃತ್ಯದ ಬಗ್ಗೆ ನೀವು ಕೇಳಿದ್ರೆ ನಿಜಕ್ಕೂ ಅಸಹ್ಯಪಟ್ಟುಕೊಳ್ಳುತ್ತೀರಾ. ಮಹಾರಾಷ್ಟ್ರದ ಗೊಠಾಣೆ ಗ್ರಾಮದ ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ನಾಲ್ವರು ಅತ್ಯಾಚಾರ (Rape) ಎಸಗಿರುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಅತ್ಯಾಚಾರದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಇಂಡಿಯಾ ಟುಡೇ ವರದಿಯ ಪ್ರಕಾರ , ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್​ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ ಎನ್ನಲಾಗುತ್ತಿದೆ. ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನೀಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಅರಣ್ಯ ಇಲಾಖೆ ಆರೋಪಿಯ ಮೊಬೈಲ್‌ ಪರಿಶೀಲಿಸಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯದ ದಾಖಲೆಯನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.

ನಂತರ ಸಾಂಗ್ಲಿ ಮೀಸಲು ಅರಣ್ಯದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಿದ್ದು, ಅದರಲ್ಲಿ ಅವರು ಕಾಡಿನಲ್ಲಿ ತಿರುಗುತ್ತಿರುವುದನ್ನು ಕಾಣಬಹುದಾಗಿದೆ. ವರದಿಗಳ ಪ್ರಕಾರ, ಮೂವರು ಆರೋಪಿಗಳು ಕೊಂಕಣದಿಂದ ಕೊಲ್ಲಾಪುರದ ಚಂದೋಳಿ ಗ್ರಾಮಕ್ಕೆ ಬೇಟೆಯಾಡಲು ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಗೊಂದಲಕ್ಕೊಳಗಾಗಿರುವ ಅರಣ್ಯಾಧಿಕಾರಿಗಳು, ಆರೋಪಿಗಳ ವಿರುದ್ಧದ ಆರೋಪಗಳ ಬಗ್ಗೆ ಚರ್ಚಿಸಲು ಭಾರತೀಯ ದಂಡನಾ ನ್ಯಾಯಾಲಯಕ್ಕೆ ಈ ವಿಷಯವನ್ನು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಾಲ್​ ಮಾನಿಟರ್ ಹಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಮೀಸಲು ಜಾತಿಯಾಗಿದೆ. ತಪ್ಪಿತಸ್ಥರಾದರೆ, ಆರೋಪಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಇದನ್ನೂ ಓದಿ:

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ

‘ಎಲ್ಲ ಶೋ ನೋಡ್ತೀನಿ, ಥಿಯೇಟರ್​ನಲ್ಲೇ ಮಲಗ್ತೀನಿ’: ಅಮೆರಿಕದಲ್ಲಿ ‘ಕೆಜಿಎಫ್​ 2’ ಪ್ರೇಕ್ಷಕರ ಪ್ರತಿಕ್ರಿಯೆ

Published On - 3:55 pm, Thu, 14 April 22

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ