AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಯ್ಟರ್ ಮೇಲೆ ಬಿಸಿ ಬಿಸಿ ಕಾಫಿ ಎರಚಿದ ಮಹಿಳೆ, ಅಷ್ಟಕ್ಕೂ ಆತ ಮಾಡಿದ ತಪ್ಪೇನು?

ಮೆಕ್‌ಡೊನಾಲ್ಡ್ಸ್‌ನಲ್ಲಿ ಕಾಫಿ ನೀಡುವುದು ವಿಳಂಬವಾದ ಕಾರಣಕ್ಕೆ ಅಮೆರಿಕದಲ್ಲಿ ಮಹಿಳೆಯೊಬ್ಬರು ಸಿಬ್ಬಂದಿ ಮೇಲೆ ಬಿಸಿ ಕಾಫಿ ಎರಚಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಕ್ಯಾಶರಾ ಬ್ರೌನ್ ಎಂಬ ಮಹಿಳೆಯ ಬಂಧನಕ್ಕೆ ವಾರಂಟ್ ಹೊರಡಿಸಿದ್ದಾರೆ. ಇದೀಗ ಈ ವಿಡಿಯೋ ನೋಡಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಯ್ಟರ್ ಮೇಲೆ ಬಿಸಿ ಬಿಸಿ ಕಾಫಿ ಎರಚಿದ ಮಹಿಳೆ, ಅಷ್ಟಕ್ಕೂ ಆತ ಮಾಡಿದ ತಪ್ಪೇನು?
ವೈರಲ್​​ ವಿಡಿಯೋ Image Credit source: social Media
ಅಕ್ಷಯ್​ ಪಲ್ಲಮಜಲು​​
|

Updated on: Nov 10, 2025 | 1:05 PM

Share

ಕಾಫಿ ಆರ್ಡರ್ಮಾಡಿ 1 ಗಂಟೆಯಾದರೂ  ಇನ್ನೂ ಬಂದಿಲ್ಲ ಎಂದು ಮಹಿಳೆಯೊಬ್ಬರು ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ಮೇಲೆ ಬಿಸಿ ಬಿಸಿ ಕಾಫಿ (Hot Coffee) ಎರಚಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಆಗಿದೆ. ವಿಡಿಯೋವನ್ನು ಬ್ಯೂನಾ ವಿಸ್ಟಾ ಪೊಲೀಸ್ ಇಲಾಖೆ ಹಂಚಿಕೊಂಡಿದೆ. ವಿಡಿಯೋದಲ್ಲಿ ಮಹಿಳೆಯೊಬ್ಬರು ಮಿಚಿಗನ್ ಎಂಬ ಕಾಫಿ ಶಾಪ್​​​​ನ ವ್ಯವಸ್ಥಾಪಕರ ಜತೆಗೆ ಒಂದು ಗಂಟೆಯಾದರೂ ಕಾಫಿ ನೀಡದಿದ್ದಕ್ಕೆ ವಾಗ್ವಾದ ನಡೆಸಿರುವುದು ತೋರಿಸಲಾಗಿದೆ. ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯನ್ನು ಎಷ್ಟೇ ಸಮಾಧಾನ ಮಾಡಿದ್ರೂ, ಮಹಿಳೆ ಮಾತ್ರ ಶಾಂತವಾಗಿಲ್ಲ, ಮಹಿಳೆಯೂ ಸಿಬ್ಬಂದಿಯನ್ನು ಸುಳ್ಳುಗಾರ ಎಂದು ಕರೆಯುವುದನ್ನು  ವಿಡಿಯೋದಲ್ಲಿ ನೋಡಬಹುದು.

ಮೇಡಂ ನಿಮ್ಮ ಕಾಫಿ ಬಂದಿದೆ ಸ್ವೀಕರಿಸಿ, ನಿಮಗೆ ಶುಲ್ಕ ವಿಧಿಸಲಾಗಿದೆ ಅಷ್ಟೇ. ಮರುಪಾವತಿಗೆ 48 ಗಂಟೆಗಳವರೆಗೆ ತೆಗೆದುಕೊಳ್ಳುತ್ತದೆ ಎಂದು ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ಹೇಳಿ ಹಿಂದಿರುಗಿ ಹೋಗಿದ್ದಾರೆ. ವೇಳೆ ಕೋಪಗೊಂಡ ಮಹಿಳೆ, ಬಿಸಿ ಬಿಸಿ ಕಾಫಿಯನ್ನು ಸಿಬ್ಬಂದಿಯ ಬೆನ್ನಿನ ಮೇಲೆ ಎರಚಿದ್ದಾರೆ. ಇನ್ನು ಮಹಿಳೆಯನ್ನು 48 ವರ್ಷದ ಕ್ಯಾಶರಾ ಬ್ರೌನ್ ಎಂದು ಪೊಲೀಸರು ಗುರುತಿಸಿದ್ದು,  ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಈ ಆತಂಕಕಾರಿ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಕ್ಯಾಶರಾ ಬ್ರೌನ್ ಅವರ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ.

ಇದನ್ನೂ ಓದಿ: ಹೊರಗಿನ ಊಟದಿಂದ ಮನೆ ಊಟಕ್ಕೆ ಶಿಫ್ಟ್​​: ಸಣ್ಣ ಉಳಿತಾಯದಿಂದ ಭಾರೀ ಲಾಭ, ಜೇಬಲ್ಲೇ ಉಳಿಯಿತು ಸಾವಿರಾರು ರೂ!

ವೈರಲ್​​ ವಿಡಿಯೋ: 

ವಿಡಿಯೋವನ್ನು ನೋಡಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಹೇಳಿದ್ದಾರೆ. ಮಹಿಳೆಯನ್ನು ನ್ಯಾಯಂಗ ಬಂಧನಕ್ಕೆ ಒಳಪಡಿಸುವಂತೆ ಒಬ್ಬರು ಒತ್ತಾಯಿಸಿದ್ದಾರೆ. ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ನಾನು ನಿಲ್ಲುತ್ತೇನೆ. ಅವರಿಗೆ ನ್ಯಾಯ ಸಿಗಲೇಬೇಕು. ಹಾಗೂ ಮಹಿಳೆಗೆ ಶಿಕ್ಷೆ ನೀಡಲೇಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!