ಮಹಾರಾಷ್ಟ್ರ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು

ಸಿಸೇರಿಯನ್ ಮಾಡಿ ನಾಲ್ಕು ತಿಂಗಳು ಕಳೆದರೂ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಇತ್ತೀಚಿಗಷ್ಟೇ ಆಸ್ಪತ್ರೆಗೆ ದಾಖಲಿಸಿದ ವೇಳೆ ಹೊಟ್ಟೆಯೊಳಗೆ ಬಟ್ಟೆಯೊಂದು ಇರುವುದು ಪತ್ತೆಯಾಗಿದೆ. ಸಿ-ಸೆಕ್ಷನ್ ಸಮಯದಲ್ಲಿ ವೈದ್ಯರು ರಕ್ತವನ್ನು ಸ್ವಚ್ಛಗೊಳಿಸಲು ಬಳಸಲಾದ ಬಟ್ಟೆಯನ್ನು ಹಾಗೆಯೇ ಮರೆತು ಹೊಲಿಗೆ ಹಾಕಿರುವುದು ತಿಳಿದುಬಂದಿದೆ.

ಮಹಾರಾಷ್ಟ್ರ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ಬೆಚ್ಚಿಬಿದ್ದ ವೈದ್ಯರು
CT Scan
Follow us
|

Updated on: Sep 12, 2024 | 10:34 AM

ಮಹಾರಾಷ್ಟ್ರ: ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಮಹಿಳೆಯ CT ಸ್ಕ್ಯಾನ್ ಕಂಡು ವೈದ್ಯರು ಬೆಚ್ಚಿಬಿದ್ದ ಘಟನೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ. ಮಹಿಳೆಗೆ ಈ ಹಿಂದೆ ಲಾತೂರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಆಗಿದ್ದು, ಈ ವೇಳೆ ಬಳಸಿದ ಬಟ್ಟೆಯೊಂದನ್ನು ಸಿಸೇರಿಯನ್ ಮಾಡಿದ ವೈದ್ಯರು ಹೊಟ್ಟೆಯೊಳಗೆ ಹಾಗೆಯೇ ಮರೆತು ಹೊಲಿಗೆ ಹಾಕಿದ್ದಾರೆ. ಇದರಿಂದ ಮಹಿಳೆ ತೀವ್ರ ಹೊಟ್ಟೆ ನೋವು ಉಂಟಾಗಿದ್ದು, ಇದೀಗ CT ಸ್ಕ್ಯಾನ್ ವೇಳೆ ಹೊಟ್ಟೆಯೊಳಗೆ ಬಟ್ಟೆಯಿರುವುದು ಪತ್ತೆಯಾಗಿದೆ.

ಸಿಸೇರಿಯನ್ ಮಾಡಿ ನಾಲ್ಕು ತಿಂಗಳು ಕಳೆದರೂ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಇತ್ತೀಚಿಗಷ್ಟೇ ಆಸ್ಪತ್ರೆಗೆ ದಾಖಲಿಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಎಷ್ಟೋ ಬಾರಿ ಔಷಧೋಪಚಾರ ಮಾಡಿದರೂ ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಸಿಟಿ ಸ್ಕ್ಯಾನ್ ಮಾಡಿಸಿದಾಗ ಹೊಟ್ಟೆಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಣಿಸಿಕೊಂಡ ಹೆರಿಗೆ ನೋವು; ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ವೈದ್ಯಕೀಯ ತಂಡ

ಬಳಿಕ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಸಿ-ಸೆಕ್ಷನ್ ಸಮಯದಲ್ಲಿ ವೈದ್ಯರು ರಕ್ತವನ್ನು ಸ್ವಚ್ಛಗೊಳಿಸಲು ಬಳಸಲಾದ ಬಟ್ಟೆಯನ್ನು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಒಂದೂವರೆ ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಮಹಿಳೆಯ ಹೊಟ್ಟೆಯಿಂದ ಬಟ್ಟೆಯನ್ನು ಹೊರತೆಗೆದಿದ್ದಾರೆ. ಏತನ್ಮಧ್ಯೆ, ಈ ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು