AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಕಾಂ ಇಡ್ಲಿವಾಲೆ’ ಫರೀದಾಬಾದ್​ನಲ್ಲಿ ಹೀಗೊಂದು ಬೈಕ್​ಕ್ಯಾಂಟೀನ್

Idli Sambar : ಅವಿನಾಶಗೆ ಕಾರ್ಪೋರೇಟ್​ ಕಂಪನಿಗಳಲ್ಲಿ ಕೆಲಸ ಬೇಡವೆನ್ನಿಸಿತು. ಅಪ್ಪ ಕೊಟ್ಟ ಬೈಕ್​, ಹೆಂಡತಿ ಮಾಡುವ ಇಡ್ಲಿ ಸಾಂಬಾರ್​ನಿಂದ ಸಣ್ಣ ಉದ್ಯೋಗ ಶುರುಮಾಡಿದರು. ವೈರಲ್ ಆಗಿರುವ ವಿಡಿಯೋ ನೋಡಿ.

‘ಬಿಕಾಂ ಇಡ್ಲಿವಾಲೆ’ ಫರೀದಾಬಾದ್​ನಲ್ಲಿ ಹೀಗೊಂದು ಬೈಕ್​ಕ್ಯಾಂಟೀನ್
Avinash a B.Com graduate who sells idli-sambhar on a motorcycle in Faridabad
TV9 Web
| Edited By: |

Updated on:Oct 14, 2022 | 10:42 AM

Share

Viral Video : ಮನಸ್ಸಿದ್ದರೆ ಏನೂ ಸಾಧ್ಯವಾಗಿಸಿಕೊಳ್ಳಬಹುದು ಎನ್ನುವುದಕ್ಕೆ ಫರೀದಾಬಾದ್​ನ ಈ ಯುವಕನೇ ಮಾದರಿ. 2019ರಲ್ಲಿ ಅವಿನಾಶ್ ಬಿ.ಕಾಂ ಪದವಿ ಪಡೆದರು. ನಂತರ ಕೆಲ ಕಾರ್ಪೊರೇಟ್​ ಕಂಪನಿಗಳಲ್ಲಿ ಕೆಲಸ ಮಾಡಿದರು. ಮೆಕ್​ಡೊನಾಲ್ಡ್​ನಲ್ಲಿಯೂ ಕೆಲಸ ಮಾಡಿದರು. ಆದರೆ ಅಲ್ಲಿ ಕೊಡುವ ಸಂಬಳ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿರಲಿಲ್ಲ. ಮೊದಲಿನಿಂದಲೂ ಸ್ವಂತ ಉದ್ಯೋಗ ಮಾಡುವ ಕನಸು ಹಾಗೇ ಇತ್ತು, ಏಕೆಂದರೆ ಬಂಡವಾಳವಿರಲಿಲ್ಲ. ಮೂರು ತಿಂಗಳುಗಳ ಕಾಲ ನಿರುದ್ಯೋಗಿಯಾಗಿ ಕಾಲ ಕಳೆದರು. ಜೊತೆಗಿದ್ದಿದ್ದು ಅಪ್ಪ ಕೊಟ್ಟ ಗಿಫ್ಟ್​ ದ್ವಿಚಕ್ರವಾಹನ ಮತ್ತು ಚೆನ್ನೈ ಮೂಲದ ಹೆಂಡತಿಯ ಕೈರುಚಿ. ಆಗ ತಾನು ದ್ವಿಚಕ್ರವಾಹನದ ಮೇಲೆಯೇ ಒಂದು ಸಣ್ಣ ಕ್ಯಾಂಟೀನ್ ಪ್ರಾರಂಭಿಸಬಾರದು ಎನ್ನಿಸಿತು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಬಿಕಾಂ ಇಡ್ಲಿವಾಲೆ’ ಎಂಬ ಹೆಸರಿನೊಂದಿಗೆ ಇಡ್ಲಿ-ಸಾಂಬಾರ್ ಮಾರಲು ಶುರುಮಾಡಿದರು. ಫರೀದಾಬಾದ್​ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 6ರತನಕ ರೂ. 20 ಒಂದು ಪ್ಲೇಟ್​ನಂತೆ ಇಡ್ಲಿ ಮಾರುತ್ತಾರೆ.  ‘ನನ್ನ ಅಪ್ಪ ಕಳೆದ ವರ್ಷ ಹೃದಯಾಘಾತದಿಂದ ತೀರಿಕೊಂಡರು. ಅವರು ಕೊಟ್ಟ ಗಿಫ್ಟ್ ಈ ಗಾಡಿ. ನನ್ನ ಹೆಂಡತಿ ದಕ್ಷಿಣಭಾರತದವರು. ಅವರು ತಯಾರಿಸುವ ಇಡ್ಲಿ ಮಾರುತ್ತೇನೆ. ಒಂದೂವರೆವರ್ಷದ ಮಗ, ಅಮ್ಮ ಮತ್ತು ತಮ್ಮತಂಗಿಯರನ್ನೆಲ್ಲ ಪೋಷಿಸುವ ಜವಾಬ್ದಾರಿ ನನಗಿದೆ’ ಎನ್ನುತ್ತಾರೆ ಅವಿನಾಶ್.

ಈ ವಿಡಿಯೋ ಅನ್ನು ಸ್ವ್ಯಾಗ್​ ಸೇ ಡಾಕ್ಟರ್​ ಎಂಬ ಇನ್​ಸ್ಟಾಗ್ರಾಂ ಪುಟವು ಹಂಚಿಕೊಂಡಿದೆ. 6 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. ನೆಟ್ಟಿಗರಿಗೆ ಈ ವಿಡಿಯೋ ಬಹಳ ಆಕರ್ಷಿಸಿದ್ದು ಶರವೇಗದಲ್ಲಿ ಈ ಪೋಸ್ಟ್​ ಮರುಹಂಚಿಕೆಯಾಗುತ್ತಿದೆ. ‘ಇದನ್ನು ಮುಂದುವರಿಸಿಕೊಂಡು ಹೋಗು ಅಣ್ಣಾ’ ಎಂದು ಪ್ರೋತ್ಸಾಹಿಸಿದ್ದಾರೆ. ‘ಸ್ವಂತ ಮಾಡುವ ಯಾವ ಉದ್ಯೋಗವೂ ಸಣ್ಣದಲ್ಲ, ಒಳ್ಳೆಯದಾಗಲಿ’ ಎಂದು ಒಬ್ಬರು ಹಾರೈಸಿದ್ದಾರೆ. ‘ಕಷ್ಟಪಟ್ಟು ದುಡಿಯುತ್ತಿರುವ ನಿಮಗೆ ಒಳ್ಳೆಯದಾಗುತ್ತದೆ’ ಎಂದು ಮತ್ತೊಬ್ಬರು ಹೇಳಿದ್ದಾರೆ. ಈ ವಿಡಿಯೋ ಅನ್ನು ಸುಮಾರು 57,000 ಜನರು ಮೆಚ್ಚಿದ್ದಾರೆ.

ಮನೆಯವರ ಸಹಕಾರದಿಂದ ದುಡಿದು ಬದುಕು ಕಟ್ಟಿಕೊಳ್ಳುತ್ತಿರುವ ಅವಿನಾಶಗೆ ಒಳಿತಾಗಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:38 am, Fri, 14 October 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್