AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Richest Beggar: ಭಿಕ್ಷಾಟನೆಯಿಂದಲೇ ತಿಂಗಳಿಗೆ 75 ಸಾವಿರ ರೂ. ಆದಾಯ ಗಳಿಸುವ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ

'ಭಾರತದ ಶ್ರೀಮಂತ ಭಿಕ್ಷುಕ' ಎಂದೆ ಹೆಸರು ಗಳಿಸಿಕೊಂಡಿರುವ ಭರತ್ ಜೈನ್, ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿರುವ ಇವರು ಪುಣೆ ಹಾಗೂ ಮುಂಬೈನಲ್ಲಿ ಸ್ವಂತ ಫ್ಲ್ಯಾಟ್‌ಗಳನ್ನು ಹೊಂದಿ​ದ್ದಾರೆ. ಅಷ್ಟು ಮಾತ್ರವಲ್ಲದೇ, ತನ್ನ ಮಕ್ಕಳನ್ನು ಮುಂಬೈನ ಪ್ರತಿಷ್ಠಿತ ಆಂಗ್ಲಮಾಧ್ಯಮ ಶಾಲೆಯಲ್ಲಿ ಓದಿಸುತ್ತಿದ್ದಾರೆ. ಕೋಟಿ ಕೋಟಿ ಹಣ, ಆಸ್ತಿ ಸಂಪಾದಿಸಿದ್ದರೂ ಕೂಡ ತನ್ನ ಭಿಕ್ಷಾಟನೆ ಮಾಡುವುದನ್ನು ಇನ್ನೂ ಬಿಟ್ಟಿಲ್ಲ.

Richest Beggar: ಭಿಕ್ಷಾಟನೆಯಿಂದಲೇ ತಿಂಗಳಿಗೆ 75 ಸಾವಿರ ರೂ. ಆದಾಯ ಗಳಿಸುವ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ
Millionaire Beggar Image Credit source: Pinterest
ಅಕ್ಷತಾ ವರ್ಕಾಡಿ
|

Updated on: Nov 26, 2023 | 3:54 PM

Share

ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಭಿಕ್ಷೆ ಬೇಡುತ್ತಿರುವುದನ್ನು ಕಾಣಬಹುದು. ಆದರೆ ಅವರನ್ನು ಕಂಡಾಗ ಪಾಪ ಎರಡು ಹೊತ್ತಿನ ಊಟಕ್ಕೂ ಎಷ್ಟು ಕಷ್ಟಪಡುತ್ತಿದ್ದಾರೆ ಅಂತ ಅನಿಸುವುದು ಸಹಜ. ಹಾಗಂತ ನಮ್ಮಲ್ಲಿರುವ ದುಡ್ಡಿನಲ್ಲಿ 10 ಅಥವಾ 20 ರೂಪಾಯಿಯನ್ನು ಅವರು ತಟ್ಟೆಗೆ ಹಾಕಿ ಬರುವುದುಂಟು. ಆದರೆ ಇಲ್ಲೊಬ್ಬ ಭಿಕ್ಷುಕ ತನ್ನ ಭಿಕ್ಷಾಟನೆಯಿಂದಲೇ ಕೋಟಿ ಕೋಟಿ ಹಣ ಸಂಪಾದಿಸಿದ್ದಾನೆ. ಈ ಕೋಟ್ಯಾಧಿಪತಿ ಭಿಕ್ಷುಕನ ಹೆಸರು ಭರತ್ ಜೈನ್. ಆತನ ಒಟ್ಟು ಸಂಪತ್ತು ಏಳು ಕೋಟಿ ರೂಪಾಯಿ. ಮುಂಬೈನ ಪರಾಲ್‌ನಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಇವರು ಪುಣೆ ಹಾಗೂ ಮುಂಬೈನಲ್ಲಿ ಸ್ವಂತ ಫ್ಲ್ಯಾಟ್‌ಗಳನ್ನು ಹೊಂದಿದ್​ದಾರೆ. ಅಷ್ಟು ಮಾತ್ರವಲ್ಲದೇ, ತನ್ನ ಮಕ್ಕಳನ್ನು ಮುಂಬೈನ ಪ್ರತಿಷ್ಠಿತ ಆಂಗ್ಲಮಾಧ್ಯಮ ಶಾಲೆಯಲ್ಲಿ ಓದಿಸುತ್ತಿದ್ದಾರೆ. ಭಿಕ್ಷಾಟನೆಯಿಂದ ತಿಂಗಳಿಗೆ 75 ಸಾವಿರ ರೂಪಾಯಿ ಸಂಪಾದಿಸುತ್ತಾರೆ. ಅಂದರೆ ಇವರ ವಾರ್ಷಿಕ ಆದಾಯ ರೂ.9 ಲಕ್ಷ.

ಕೋಟಿ ಕೋಟಿ ಹಣ, ಆಸ್ತಿ ಸಂಪಾದಿಸಿದ್ದರೂ ಕೂಡ ತನ್ನ ಭಿಕ್ಷಾಟನೆ ಮಾಡುವುದನ್ನು ಇನ್ನೂ ಬಿಟ್ಟಿಲ್ಲ. ಈಗಲೂ ಕೂಡ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ಮತ್ತು ಆಜಾದ್ ಮೈದಾನದಲ್ಲಿ ಭಿಕ್ಷೆ ಬೇಡುತ್ತಾರೆ. ಇವರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಭರತ್ ಜೈನ್ 10 ರಿಂದ 12 ಗಂಟೆಗಳ ಒಳಗೆ ದಿನಕ್ಕೆ 2,000 ರಿಂದ 2,500 ರೂ. ಸಂಪಾದನೆ ಮಾಡುತ್ತಾರಂತೆ.

ಇದನ್ನೂ ಓದಿ: ಫ್ರೈಡ್‌ ಚಿಕನ್‌ ಖರೀದಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದ ಪತಿ

ಭರತ್ ಜೈನ್ ಅವರು ಮುಂಬೈನಲ್ಲಿ ಪ್ಯಾರಾಲ್‌ನಲ್ಲಿ 1.2 ಕೋಟಿ ರೂಪಾಯಿ ಮೌಲ್ಯದ 2BHK ಫ್ಲಾಟ್ ಹೊಂದಿದ್ದಾರೆ. ಇದಲ್ಲದೇ ಥಾಣೆಯಲ್ಲಿ ಅಂಗಡಿಯನ್ನು ಹೊಂದಿದ್ದಾರೆ. ಈ ಅಂಗಡಿಯಿಂದಲೇ ತಿಂಗಳಿಗೆ 30000 ರೂಪಾಯಿ ಆದಾಯ ಪಡೆಯುತ್ತಿದ್ದಾರೆ. ಇಷ್ಟೆಲ್ಲಾ ಆದಾಯ ಬರುವುದರಿಂದ ಅನೇಕ ಸಲ ಕುಟುಂಬಸ್ಥರು ಇನ್ನು ಭಿಕ್ಷೆಬೇಡುವುದು ಬೇಡ ಎಂದು ಹೇಳಿದರೂ ಕೂಡ ಭಿಕ್ಷಾಟನೆಯನ್ನು ಬಿಟ್ಟಿಲ್ಲ. ಈ ಮೂಲಕ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ ಎಂಬ ಹೆಸರು ಗಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ