AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Men Not Allowed: ಭಾರತದ ಈ ದೇವಾಲಯಗಳಿಗೆ ಪುರುಷರಿಗೆ ಪ್ರವೇಶವಿಲ್ಲ

ಸಾಮಾನ್ಯವಾಗ ಮಹಿಳೆಯರಿಗೆ ಕೆಲವು ದೇವಾಲಯಗಳಿಗೆ ಪ್ರವೇಶವಿಲ್ಲ ಎಂಬುದನ್ನು ನೀವು ಕೇಳಿರುತ್ತೀರಿ. ಆದರೆ ಎಂದಾದರೂ ಪುರುಷರಿಗೆ ಪ್ರವೇಶವಿಲ್ಲದ ದೇವಾಲಗಳ ಬಗ್ಗೆ ಕೇಳಿದ್ದೀರಾ? ಭಾರತದ ಕೆಲವು ದೇವಾಲಯಗಳಿಗೆ ಮಹಿಳೆಯರಿಗೆ ಮಾತ್ರ ಪ್ರವೇಶಿಸಲು ಅವಕಾಶವಿದ್ದು,ಪುರುಷರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Men Not Allowed: ಭಾರತದ ಈ ದೇವಾಲಯಗಳಿಗೆ ಪುರುಷರಿಗೆ ಪ್ರವೇಶವಿಲ್ಲ
Men Not AllowedImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 31, 2024 | 12:22 PM

Share

ಕೆಲವು ವರ್ಷಗಳ ಹಿಂದೆ ಶಬರಿಮಲೆ ವಿವಾದ ಸಂಭವಿಸಿದಾಗ ಹಲವಾರು ಪ್ರತಿಭಟನೆಗಳು ಮತ್ತು ಪ್ರಕರಣಗಳು ನಡೆದವು. ಕಟ್ಟಾ ಸ್ತ್ರೀವಾದಿಗಳಿಂದ ಹಿಡಿದು ಸಮಾನತೆಯ ಬೆಂಬಲಿಗರವರೆಗೂ ಈ ಕೂಗು ಜೋರಾಗಿ ಕೇಳಿಬರುತ್ತಿತ್ತು. ಸಾಮಾನ್ಯವಾಗ ಮಹಿಳೆಯರಿಗೆ ಕೆಲವು ದೇವಾಲಯಗಳಿಗೆ ಪ್ರವೇಶವಿಲ್ಲ ಎಂಬುದನ್ನು ನೀವು ಕೇಳಿರುತ್ತೀರಿ. ಆದರೆ ಎಂದಾದರೂ ಪುರುಷರಿಗೆ ಪ್ರವೇಶವಿಲ್ಲದ ದೇವಾಲಯಗಳ ಬಗ್ಗೆ ತಿಳಿದಿದ್ದೀರಾ? ಭಾರತದ ಕೆಲವು ದೇವಾಲಯಗಳಿಗೆ ಮಹಿಳೆಯರಿಗೆ ಮಾತ್ರ ಪ್ರವೇಶಿಸಲು ಅವಕಾಶವಿದ್ದು,ಪುರುಷರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆ ದೇವಾಯಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಪುರುಷರಿಗೆ ಪ್ರವೇಶವಿಲ್ಲದ ದೇವಾಲಯಗಳು:

ಅಟ್ಟುಕಲ್ ಭಗವತಿ ದೇವಸ್ಥಾನ:

ಅಟ್ಟುಕಲ್ ದೇವಾಲಯವು ತಿರುವನಂತಪುರಂ ನಗರದ ಹೃದಯಭಾಗದಲ್ಲಿರುವ ಅಟ್ಟುಕಲ್‌ನಲ್ಲಿದೆ, ಆದಿಶಕ್ತಿಯ ಅವತಾರಗಳಲ್ಲಿ ಒಂದಾದ ಭದ್ರಕಾಳಿ ದೇವಿಯನ್ನು ಇಲ್ಲಿ ಪೂಜಿಸಲಾಗುತ್ತದೆ. ಈ ದೇವಾಲಯದಲ್ಲಿ ಅಟ್ಟುಕಲ್ ಪೊಂಗಲ್​​ ಹಬ್ಬದ ಸಮಯದಲ್ಲಿ ಲಕ್ಷಾಂತರ ಮಹಿಳೆಯರು ಒಟ್ಟಾಗಿ ಸೇರುತ್ತಾರೆ.ಈ ಉತ್ಸವದ ಸಮಯದಲ್ಲಿ, ದೇವಾಲಯದ ಆವರಣದೊಳಗೆ ಪುರುಷರಿಗೆ ಪ್ರವೇಶವಿಲ್ಲ.

ಕಾಮಾಕ್ಯ ದೇವಾಲಯ:

ಕಾಮಾಕ್ಯ ದೇವಾಲಯವು ಅಸ್ಸಾಂನ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿ ದೇವಾಲಯವಾಗಿದೆ. ಈ ದೇವಾಲಯವು ಕಾಮಾಕ್ಯ ದೇವಿಯ ಋತುಚಕ್ರವನ್ನು ಮತ್ತು ಆಕೆಯ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಆಚರಿಸುತ್ತದೆ. ಪ್ರತಿ ವರ್ಷ ಅಂಬುಬಾಚಿ ಮೇಳದ ಸಮಯದಲ್ಲಿ, ದೇವಾಲಯವನ್ನು ಮೂರು ದಿನಗಳವರೆಗೆ ಮುಚ್ಚಲಾಗುತ್ತದೆ ಮತ್ತು ಆ ಅವಧಿಯಲ್ಲಿ ಪುರುಷರಿಗೆ ಪ್ರವೇಶವಿರುವುದಿಲ್ಲ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಚಕ್ಕುಲತುಕಾವು ದೇವಸ್ಥಾನ:

ಆಲಪ್ಪುಳದ ಆಗ್ನೇಯಕ್ಕೆ 30 ಕಿಮೀ ದೂರದಲ್ಲಿರುವ ಚಕ್ಕುಲತುಕಾವು ಭಗವತಿ ದೇವಸ್ಥಾನವು ಕೇರಳದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದ ವಾರ್ಷಿಕ ‘ನಾರಿ ಪೂಜೆ’ ಉತ್ಸವದಲ್ಲಿ, ಪುರುಷರು ದೇವಾಲಯದ ಪ್ರದೇಶವನ್ನು ಪ್ರವೇಶಿಸುವಂತಿಲ್ಲ.

ಸಂತೋಷಿ ಮಾತಾ ದೇವಸ್ಥಾನ:

ಸಂತೋಷಿ ಮಾತಾ ದೇವಾಲಯವು ಜೋಧಪುರ ನಗರದಿಂದ 10 ಕಿ.ಮೀ ದೂರದಲ್ಲಿರುವ ಲಾಲ್ ಸಾಗರ್‌ನಲ್ಲಿದೆ. ದೇವತೆ ಸಂತೋಷಿ ಮಾತೆಗೆ ಅರ್ಪಿತವಾಗಿರುವ ದೇವಾಲಯವಿದು. ಈ ದೇವಾಲಯದೊಳಗೆ ಪುರುಷರಿಗೆ ಪ್ರವೇಶವಿಲ್ಲ. ದಂತಕಥೆಗಳ ಪ್ರಕಾರ ಶುಕ್ರವಾರದಂದು ದೇವಾಲಯದ ಶಕ್ತಿಯು ಹೆಚ್ಚಾಗುತ್ತದೆ ಎಂದು ನಂಬಿಕೆ ಇದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!