AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲಿನ ಒಳಗೆ ಸಂಗೀತ ರಸಮಂಜರಿ! ಗಿಟಾರ್ ಹಾಗೂ ಸ್ಯಾಕ್ಸೋಫೋನ್ ಮೋಡಿಗೆ ಪ್ರಯಾಣಿಕರು ಫಿದಾ

Viral Video: ಸಾರ್ವಜನಿಕ ಸ್ಥಳದಲ್ಲಿ ಅಚಾನಕ್ ಆಗಿ ಸಂಗೀತ ಕೇಳಿದರೆ ಹೇಗೆ? ಎಷ್ಟು ವಿಶೇಷ ಅನಿಸಬಹುದು. ಅಂತಹ ಒಂದು ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

Video: ರೈಲಿನ ಒಳಗೆ ಸಂಗೀತ ರಸಮಂಜರಿ! ಗಿಟಾರ್ ಹಾಗೂ ಸ್ಯಾಕ್ಸೋಫೋನ್ ಮೋಡಿಗೆ ಪ್ರಯಾಣಿಕರು ಫಿದಾ
ವೈರಲ್ ವಿಡಿಯೋದ ದೃಶ್ಯ
TV9 Web
| Edited By: |

Updated on: Sep 26, 2021 | 9:52 PM

Share

ಇಬ್ಬರು ಯುವಕರು ಹಾಗೂ ಕೆಲವಷ್ಟು ಸಂಗೀತ ಪರಿಕರಗಳು. ಇಷ್ಟರ ಜೊತೆಯಾಗಿ ಖುಷಿಖುಷಿಯಾಗಿ ಸಂಗೀತ ಸವಿಯುವ ಅವಕಾಶ ರೈಲಿನ ಸಹಪ್ರಯಾಣಿಕರಿಗೆ. ಇಂತಹದೊಂದು ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನಿಮಗೂ ಇಷ್ಟವಾಗುತ್ತದೆ ಎಂಬುದರಲ್ಲಿ ಅನುಮಾನ ಇಲ್ಲ.

ಸಂಗೀತ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರೂ ಒಂದಲ್ಲಾ ಒಂದುರೀತಿಯಲ್ಲಿ ಯಾವುದೋ ವಿಧದ, ಶೈಲಿಯ ಸಂಗೀತ ಇಷ್ಟಪಡುವವರೇ ಆಗಿರುತ್ತಾರೆ. ಅದರಲ್ಲೂ ಸಾರ್ವಜನಿಕ ಸ್ಥಳದಲ್ಲಿ ಅಚಾನಕ್ ಆಗಿ ಸಂಗೀತ ಕೇಳಿದರೆ ಹೇಗೆ? ಎಷ್ಟು ವಿಶೇಷ ಅನಿಸಬಹುದು. ಅಂತಹ ಒಂದು ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಮ್ಯೂಸಿಕ್ ನುಡಿಸಿದವರನ್ನು ಕಫೆಲೆ ಹಾಗೂ ಬಾರ್ತೊಲೊಮಿಯೋ ಎಂದು ಹೇಳಲಾಗಿದೆ.

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದು ನೆಟ್ಟಿಗರ ಮನಗೆದ್ದಿದೆ. ಅದರಲ್ಲಿ ರೈಲಿನ ಒಳಭಾಗದಲ್ಲಿ ಇಬ್ಬರು ಕೆಲವಾರು ಸಂಗೀತ ಪರಿಕರ ಬಳಸಿ ಒಂದು ಟ್ಯೂನ್ ನುಡಿಸುತ್ತಿರುತ್ತಾರೆ. ಸ್ಯಾಕ್ಸೋಫೋನ್ ಹಾಗೂ ಗಿಟಾರ್ ಬಳಸಿ ಟ್ಯೂನ್ ನುಡಿಸುತ್ತಿರುತ್ತಾರೆ. ವಿಶೇಷ ವಿಡಿಯೋ ಇಲ್ಲಿದೆ ನೋಡಿ.

ಈ ಪೋಸ್ಟ್​ನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಲಾಗಿದೆ. ಪೋಸ್ಟ್ ಶೇರ್ ಮಾಡಿದ ಬಳಿಕ ಸುಮಾರು 89,000 ವ್ಯೂವ್​ ಪಡೆದುಕೊಂಡಿದೆ. ವಿಡಿಯೋಗೆ ನೋಡುಗರು ವಿವಿಧ ಕಮೆಂಟ್​ಗಳನ್ನು ಕೂಡ ಮಾಡಿದ್ದಾರೆ. ತುಂಬಾ ಚೆನ್ನಾಗಿದೆ. ಅಮೇಜಿಂಗ್. ಸೂಪರ್ ಎಂದು ಇತ್ಯಾದಿ ಕಮೆಂಟ್ ಮೂಲಕ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Video: ಬೀದಿನಾಯಿ ಒಂದಕ್ಕೆ ಬೊಗಸೆಯಲ್ಲಿ ನೀರು ಕುಡಿಸಿದ ವ್ಯಕ್ತಿ; ಆಪ್ತ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ದೆವ್ವ ವದಂತಿ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಇಲ್ಲಿದೆ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ