Viral: ವಿದ್ಯುತ್‌ ತಂತಿಯಲ್ಲಿ ಸಿಲುಕಿ ಜೀವನ್ಮರಣದ ಹೋರಾಟದಲ್ಲಿದ್ದ ಪಾರಿವಾಳವನ್ನು ರಕ್ಷಿಸಿದ ಯುವಕರು

ಕಷ್ಟ ಕಾಲದಲ್ಲಿ ಸ್ವಂತದವರಿಗೆಯೇ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯದಲ್ಲಿ ಇಲ್ಲಿಬ್ರು ಯುವಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುಗ್ಧ ಜೀವವೊಂದನ್ನು ಕಾಪಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು ವಿದ್ಯುತ್‌ ತಂತಿಯಲ್ಲಿ ಸಿಲುಕಿ ಜೀವನ್ಮರಣ ಹೋರಾಟದಲ್ಲಿದ್ದ ಪಾರಿವಾಳವನ್ನು ಕಾಪಾಡುವ ಮೂಲಕ ಮುಗ್ಧ ಜೀವಕ್ಕೆ ಮರು ಜೀವವನ್ನೇ ನೀಡಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಇಂದಿನ ಕಾಲದಲ್ಲಿ ಮಾನವೀಯತೆ ಎಂಬುದು ಮರೆಯಾಗುತ್ತಿದೆ. ಜನರು ಸ್ವಾರ್ಥ ಜೀವನವನ್ನೇ ನಡೆಸುತ್ತಿದ್ದು, ಗುರುತು ಪರಿಚಯವಿಲ್ಲದವರಿಗೆ ಬಿಡಿ ಜನ ತಮ್ಮ ಸ್ವಂತದವರಿಗೆಯೇ ಸಹಾಯ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಇಂತಹವರ ಮಧ್ಯದಲ್ಲಿ ಇಲ್ಲಿಬ್ರು ಯುವಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುಗ್ಧ ಜೀವವೊಂದನ್ನು ಕಾಪಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು ವಿದ್ಯುತ್‌ ತಂತಿಯಲ್ಲಿ ಸಿಲುಕಿ ಜೀವನ್ಮರಣ ಹೋರಾಟದಲ್ಲಿದ್ದ ಪಾರಿವಾಳವನ್ನು ಕಾಪಾಡುವ ಮೂಲಕ ಮುಗ್ಧ ಜೀವಕ್ಕೆ ಮರು ಜೀವವನ್ನೇ ನೀಡಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಯುವಕರ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಈ ಕುರಿತ ವಿಡಿಯೋವನ್ನು nepalinreels ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ವಿದ್ಯುತ್‌ ತಂತಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಪಾರಿವಾಳವನ್ನು ರಕ್ಷಿಸಿದ ಧೈರ್ಯಶಾಲಿ ಯುವಕರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕರಿಬ್ಬರು ಪಾರಿವಾಳವನ್ನು ರಕ್ಷಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ವಿದ್ಯುತ್‌ ತಂತಿಯೊಂದರಲ್ಲಿ ಸಿಲುಕಿ ಪಾರಿವಾಳವೊಂದು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸಂದರ್ಭದಲ್ಲಿ ತಕ್ಷಣಕ್ಕೆ ಧಾವಿಸಿದ ಯುವಕರಿಬ್ಬರು ಕಾರ್‌ ಮೇಲೆ ಹತ್ತಿ ಪಾರಿವಾಳವನ್ನು ಅಪಾಯದಿಂದ ರಕ್ಷಣೆ ಮಾಡಿದ್ದಾರೆ.

ಇದನ್ನು ಓದಿ; ಪುಟ್ಟ ಮಗುವನ್ನು ರಂಜಿಸಲು ವಿಮಾನದಲ್ಲಿ ಹಾಡು ಹಾಡಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್‌

ಡಿಸೆಂಬರ್‌ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4.8 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವರೇ ನೋಡಿ ನಿಜವಾದ ಹೀರೋಗಳುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮುಗ್ಧ ಜೀವವನ್ನು ಕಾಪಾಡಿದ ಗೆಳೆಯರಿಬ್ಬರಿಗೆ ದೇವರು ಒಳ್ಳೆಯದು ಮಾಡಲಿʼ ಎಂದು ಆಶಿರ್ವಾದಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ರಿಯಲ್‌ ಹೀರೋಗಳಿಗೆ ನನ್ನದೊಂದು ಸಲಾಂʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕು ಯುವಕರಿಬ್ಬರ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us