AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಹಾಗೂ ಮಾವ ಹೇಳುತ್ತಾ ಬಂದಿದ್ದಾರೆ. ಇದಕ್ಕಾಗಿ ಗಂಡು ಮಗು ಆಗುವ ಸಾಧ್ಯತೆಯನ್ನು ಹೆಚ್ಚಿಸಲು ಲೈಂಗಿಕ ಸಂಭೋಗದ ಸಮಯ ಹಾಗೂ ಗರ್ಭ ಧರಿಸುವುದು ಹೇಗೆಂದು ವಿವರವಾದ ಸೂಚನೆ' ಇರುವ ಪುಸ್ತಕವನ್ನು ಆಕೆಗೆ ನೀಡಲಾಗಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ
ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳImage Credit source: Pinterest
ಅಕ್ಷತಾ ವರ್ಕಾಡಿ
|

Updated on:Mar 06, 2024 | 12:38 PM

Share

ಕೊಲ್ಲಂ: ಪ್ರತೀ ಹೆಣ್ಣಿನ ಜೀವನದಲ್ಲಿ ಮದುವೆ ಎಂಬುದು ಒಂದು ವಿಶೇಷ ಘಟ್ಟ. ಏಕೆಂದರೆ ಮದುವೆಯ ನಂತರ ಹೆಣ್ಣು ತನ್ನ ಮನೆ ಕುಟುಂಬದವರನ್ನು ಬಿಟ್ಟು ತನ್ನೆಲ್ಲ ಭಾವನೆಗಳನ್ನು ಬದಿಗಿಟ್ಟು ಗಂಡನನ್ನು ನಂಬಿ ಅವರ ಮನೆಗೆ ಬರುತ್ತಾಳೆ. ಆದರೆ ಇಲ್ಲೊಬ್ಬಳು ಯುವತಿ ಪತಿಯ ಮನೆಗೆ ಬಂದ ಮೊದಲ ದಿನದಿಂದಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಾ ಬಂದಿದ್ದಾಳೆ. ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಹಾಗೂ ಮಾವ ಹೇಳುತ್ತಾ ಬಂದಿದ್ದಾರೆ. ಇದಕ್ಕಾಗಿ ಗಂಡು ಮಗು ಆಗುವ ಸಾಧ್ಯತೆಯನ್ನು ಹೆಚ್ಚಿಸಲು ಲೈಂಗಿಕ ಸಂಭೋಗದ ಸಮಯ ಹಾಗೂ ಗರ್ಭ ಧರಿಸುವುದು ಹೇಗೆಂದು ವಿವರವಾದ ಸೂಚನೆ’ ಇರುವ ಪುಸ್ತಕವನ್ನು ಆಕೆಗೆ ನೀಡಲಾಗಿದೆ.

ಪ್ರಾರಂಭದಲ್ಲಿ ಅತ್ತೆ ಮಾವಂದಿರ ಆಸೆಯಂತೆ ಎಲ್ಲಾ ಷರತ್ತುಗಳಿಗೆ ಒಪ್ಪಿಕೊಂಡಿದ್ದ ಯುವತಿಗೆ, ದಿನಕಳೆದಂತೆ ಮಾನಸಿಕ ಹಿಂಸೆಯಾಗತೊಡಗಿದೆ. ಆದರೆ ಎಲ್ಲ ಪ್ರಯತ್ನಗಳ ಬಳಿಕ ಆಕೆಗೆ ಹೆಣ್ಣು ಮಗು ಜನಿಸಿದೆ. ಇದರಿಂದ ಕೋಪಗೊಂಡ ಪತಿ ಹಾಗೂ ಆತನ ಪೋಷಕರು ಆಕೆಯನ್ನು ನಿರ್ಲಕ್ಷ್ಯಿಸುತ್ತಾ ಬಂದಿದ್ದಾರೆ. ಈ ಸಂಬಂಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಕೊಲ್ಲಂ ಮೂಲದ ಮಹಿಳೆ, ಮದುವೆಯ ದಿನವೇ ಗಂಡು ಮಗುವನ್ನು ಹೊಂದುವಂತೆ ಸೂಚನೆ ನೀಡಿದ್ದ ಅತ್ತೆ ಮಾವ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಇನ್ನು ಮುಂದೆ ‘ಡಾರ್ಲಿಂಗ್’ ಎಂದು ಕರೆದರೆ ಜೈಲು ಕಂಬಿ ಎಣಿಸಬೇಕಾದಿತು ಎಚ್ಚರ!

“ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ 2012ರಲ್ಲಿ ಮೂವಾಟ್ಟುಪುಳ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದೆ. ಗಂಡನ ಜೊತೆ ಬೇಗ ಲಂಡನ್ ಗೆ ಹೋಗಬೇಕಾದ್ದರಿಂದ ಗಂಡು ಮಗುವಿಗೆ ಜನ್ಮ ನೀಡಲು ಅತ್ತೆ ಮತ್ತು ಮಾವ ಲೈಂಗಿಕ ಸಂಭೋಗದ ಸಮಯ ಹಾಗೂ ಗರ್ಭ ಧರಿಸುವುದು ಹೇಗೆಂದು ವಿವರವಾದ ಸೂಚನೆ’ ಇರುವ ಪುಸ್ತಕವನ್ನು ನನಗೆ ನೀಡಿದ್ದರು.ಆದರೂ ಕೂಡ 2014ರಲ್ಲಿ ನಾನು ಹೆಣ್ಣು ಮಗುವಿಗೆ ಜನ್ಮನೀಡಿದ್ದೇನೆ. ಇದಾದ ಬಳಿಕ ಒಂದು ಬಾರಿ ಮಾತ್ರ ಪತಿಯ ಮನೆಯವರು ಮಗುವನ್ನು ನೋಡಲು ಬಂದಿದ್ದಾರೆ. ಇದಾದ ಬಳಿಕ ನನ್ನನ್ನು ಅವರ ಕುಟುಂಬದಿಂದ ದೂರ ಇಟ್ಟಿದ್ದಾರೆ. ಈಗ ನನ್ನ ಮಗಳು ನನ್ನ ಹೆತ್ತವರ ಆಶ್ರಯದಲ್ಲಿ ಕೊಲ್ಲಂನಲ್ಲಿದ್ದಾಳೆ” ಎಂದು ಯುವತಿ ದೂರಿನಲ್ಲಿ ಬರೆದುಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Wed, 6 March 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ