AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಹಾಗೂ ಮಾವ ಹೇಳುತ್ತಾ ಬಂದಿದ್ದಾರೆ. ಇದಕ್ಕಾಗಿ ಗಂಡು ಮಗು ಆಗುವ ಸಾಧ್ಯತೆಯನ್ನು ಹೆಚ್ಚಿಸಲು ಲೈಂಗಿಕ ಸಂಭೋಗದ ಸಮಯ ಹಾಗೂ ಗರ್ಭ ಧರಿಸುವುದು ಹೇಗೆಂದು ವಿವರವಾದ ಸೂಚನೆ' ಇರುವ ಪುಸ್ತಕವನ್ನು ಆಕೆಗೆ ನೀಡಲಾಗಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ
ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳImage Credit source: Pinterest
ಅಕ್ಷತಾ ವರ್ಕಾಡಿ
|

Updated on:Mar 06, 2024 | 12:38 PM

Share

ಕೊಲ್ಲಂ: ಪ್ರತೀ ಹೆಣ್ಣಿನ ಜೀವನದಲ್ಲಿ ಮದುವೆ ಎಂಬುದು ಒಂದು ವಿಶೇಷ ಘಟ್ಟ. ಏಕೆಂದರೆ ಮದುವೆಯ ನಂತರ ಹೆಣ್ಣು ತನ್ನ ಮನೆ ಕುಟುಂಬದವರನ್ನು ಬಿಟ್ಟು ತನ್ನೆಲ್ಲ ಭಾವನೆಗಳನ್ನು ಬದಿಗಿಟ್ಟು ಗಂಡನನ್ನು ನಂಬಿ ಅವರ ಮನೆಗೆ ಬರುತ್ತಾಳೆ. ಆದರೆ ಇಲ್ಲೊಬ್ಬಳು ಯುವತಿ ಪತಿಯ ಮನೆಗೆ ಬಂದ ಮೊದಲ ದಿನದಿಂದಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಾ ಬಂದಿದ್ದಾಳೆ. ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಹಾಗೂ ಮಾವ ಹೇಳುತ್ತಾ ಬಂದಿದ್ದಾರೆ. ಇದಕ್ಕಾಗಿ ಗಂಡು ಮಗು ಆಗುವ ಸಾಧ್ಯತೆಯನ್ನು ಹೆಚ್ಚಿಸಲು ಲೈಂಗಿಕ ಸಂಭೋಗದ ಸಮಯ ಹಾಗೂ ಗರ್ಭ ಧರಿಸುವುದು ಹೇಗೆಂದು ವಿವರವಾದ ಸೂಚನೆ’ ಇರುವ ಪುಸ್ತಕವನ್ನು ಆಕೆಗೆ ನೀಡಲಾಗಿದೆ.

ಪ್ರಾರಂಭದಲ್ಲಿ ಅತ್ತೆ ಮಾವಂದಿರ ಆಸೆಯಂತೆ ಎಲ್ಲಾ ಷರತ್ತುಗಳಿಗೆ ಒಪ್ಪಿಕೊಂಡಿದ್ದ ಯುವತಿಗೆ, ದಿನಕಳೆದಂತೆ ಮಾನಸಿಕ ಹಿಂಸೆಯಾಗತೊಡಗಿದೆ. ಆದರೆ ಎಲ್ಲ ಪ್ರಯತ್ನಗಳ ಬಳಿಕ ಆಕೆಗೆ ಹೆಣ್ಣು ಮಗು ಜನಿಸಿದೆ. ಇದರಿಂದ ಕೋಪಗೊಂಡ ಪತಿ ಹಾಗೂ ಆತನ ಪೋಷಕರು ಆಕೆಯನ್ನು ನಿರ್ಲಕ್ಷ್ಯಿಸುತ್ತಾ ಬಂದಿದ್ದಾರೆ. ಈ ಸಂಬಂಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಕೊಲ್ಲಂ ಮೂಲದ ಮಹಿಳೆ, ಮದುವೆಯ ದಿನವೇ ಗಂಡು ಮಗುವನ್ನು ಹೊಂದುವಂತೆ ಸೂಚನೆ ನೀಡಿದ್ದ ಅತ್ತೆ ಮಾವ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಇನ್ನು ಮುಂದೆ ‘ಡಾರ್ಲಿಂಗ್’ ಎಂದು ಕರೆದರೆ ಜೈಲು ಕಂಬಿ ಎಣಿಸಬೇಕಾದಿತು ಎಚ್ಚರ!

“ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ 2012ರಲ್ಲಿ ಮೂವಾಟ್ಟುಪುಳ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದೆ. ಗಂಡನ ಜೊತೆ ಬೇಗ ಲಂಡನ್ ಗೆ ಹೋಗಬೇಕಾದ್ದರಿಂದ ಗಂಡು ಮಗುವಿಗೆ ಜನ್ಮ ನೀಡಲು ಅತ್ತೆ ಮತ್ತು ಮಾವ ಲೈಂಗಿಕ ಸಂಭೋಗದ ಸಮಯ ಹಾಗೂ ಗರ್ಭ ಧರಿಸುವುದು ಹೇಗೆಂದು ವಿವರವಾದ ಸೂಚನೆ’ ಇರುವ ಪುಸ್ತಕವನ್ನು ನನಗೆ ನೀಡಿದ್ದರು.ಆದರೂ ಕೂಡ 2014ರಲ್ಲಿ ನಾನು ಹೆಣ್ಣು ಮಗುವಿಗೆ ಜನ್ಮನೀಡಿದ್ದೇನೆ. ಇದಾದ ಬಳಿಕ ಒಂದು ಬಾರಿ ಮಾತ್ರ ಪತಿಯ ಮನೆಯವರು ಮಗುವನ್ನು ನೋಡಲು ಬಂದಿದ್ದಾರೆ. ಇದಾದ ಬಳಿಕ ನನ್ನನ್ನು ಅವರ ಕುಟುಂಬದಿಂದ ದೂರ ಇಟ್ಟಿದ್ದಾರೆ. ಈಗ ನನ್ನ ಮಗಳು ನನ್ನ ಹೆತ್ತವರ ಆಶ್ರಯದಲ್ಲಿ ಕೊಲ್ಲಂನಲ್ಲಿದ್ದಾಳೆ” ಎಂದು ಯುವತಿ ದೂರಿನಲ್ಲಿ ಬರೆದುಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Wed, 6 March 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!