AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ರಜೆಯಲ್ಲಿದ್ದ ಉದ್ಯೋಗಿಯನ್ನು ವಜಾಗೊಳಿಸಿದ ‘ಮೆಟಾ’

Meta Layoffs : ‘ಬೆಳಗ್ಗೆ 3ಕ್ಕೆ ಎಚ್ಚರವಾಯಿತು. 4ಕ್ಕೆ ನನ್ನ 3 ತಿಂಗಳ ಮಗುವಿಗೆ ಹಾಲು ಕುಡಿಸಿದೆ. ವಜಾಗೊಂಡ 11,000 ಉದ್ಯೋಗಿಗಳ ಪೈಕಿ ನಾನೂ ಒಬ್ಬಳಿರಬಹುದೆಂಬ ನಿರೀಕ್ಷೆಯಲ್ಲಿಯೇ ಆಫೀಸಿನ ಮೇಲ್​ ತೆರೆದು ನೋಡಿದೆ...

ಹೆರಿಗೆ ರಜೆಯಲ್ಲಿದ್ದ ಉದ್ಯೋಗಿಯನ್ನು ವಜಾಗೊಳಿಸಿದ ‘ಮೆಟಾ’
Meta Fires Employee During Maternity Leave
TV9 Web
| Edited By: |

Updated on:Nov 10, 2022 | 7:31 PM

Share

Viral Video : ಮೆಟಾ ಕಂಪೆನಿಯ ಸಿಇಒ ಜುಕರ್​​ಬರ್ಗ್ ಉದ್ಯೋಗಿಗಳನ್ನು ವಜಾಗೊಳಿಸುವ ಕಾರ್ಯವನ್ನು ಮುಂದುವರಿಸಿದ್ದಾರೆ. ಈತನಕ 11,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ್ದಾರೆ. ಈ ಮಧ್ಯೆ ಅನೇಕ ಉದ್ಯೋಗಿಗಳು ತಮ್ಮ ತಮ್ಮ ಅಭಿಪ್ರಾಯ, ಅನುಭವಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೆರಿಗೆ ರಜೆಯಲ್ಲಿದ್ದ ಫೇಸ್​ಬುಕ್​ನ ಕಮ್ಯೂನಿಕೇಷನ್ ಮ್ಯಾನೇಜರ್ ಅನ್ನೆಕಾ ಪಟೇಲ್​ ವಜಾಗೊಳಿಸಲಾದ ಉದ್ಯೋಗಿಗಳ ಪೈಕಿ ಒಬ್ಬರು. ತಮ್ಮ ಮಗುವನ್ನು ಎತ್ತಿಕೊಂಡ ಫೋಟೋ ಜೊತೆ ವಿವಿರವಾದ ಪೋಸ್ಟ್​ ಒಂದನ್ನು ಬರೆದು ಲಿಂಕ್ಡ್​ಇನ್​ ಗೆ ಹಾಕಿದ್ದಾರೆ.

‘ಈವತ್ತು ಬೆಳಗ್ಗೆ ಮೂರು ಗಂಟೆಗೆ ಎಚ್ಚರವಾಯಿತು. ನಾಲ್ಕು ಗಂಟೆಗೆ ನನ್ನ ಮೂರು ತಿಂಗಳ ಮಗು ಎಮಿಲಿಯಾಗೆ ಹಾಲು ಕುಡಿಸಿದೆ. ವಜಾಗೊಂಡ 11,000 ಉದ್ಯೋಗಿಗಳ ಪೈಕಿ ನಾನೂ ಒಬ್ಬಳಿರಬಹುದೆಂಬ ನಿರೀಕ್ಷೆಯಲ್ಲಿಯೇ ಆಫೀಸಿನ ಮೇಲ್​ ತೆರೆದು ನೋಡಿದೆ. ನನಗೂ ಮೇಲ್​ ಬಂದಿತ್ತು. ಸಹೋದ್ಯೋಗಿಗಳೊಂದಿಗೆ ವಿಚಾರಿಸಿದಾಗ ಅದು ಆಟೋಮ್ಯಾಟಿಕ್ ಆಗಿ ಬಂದ ಮೇಲ್​ ಎಂದರು. ಆಗ ಸಮಯ ನಾಲ್ಕೂವರೆ. ಮುಂದಿನ ಬದುಕು ಹೇಗೆ ಎಂದು ಯೋಚಿಸುತ್ತ ಮಗುವಿನೊಂದಿಗೆ ಮಲಗಿದಾಗ ನಾಲ್ಕೂ ಮುಕ್ಕಾಲು. ಮತ್ತೆ ಮಲಗಬೇಕೋ ಬೇಡವೋ ಎಂಬ ಸಂದಿಗ್ಧ ಕಾಡಿತು. 5.35ಕ್ಕೆ ಮತ್ತೊಂದು ಮೇಲ್​ ಬಂದಿತು. ವಜಾಗೊಳಿಸಿದ ಪಟ್ಟಿಯಲ್ಲಿ ನನ್ನ ಹೆಸರನ್ನೂ ನೋಡಿ ಆಘಾತವಾಯಿತು’ ಎಂದಿದ್ದಾರೆ ಅನ್ನೇಕಾ.

‘ಈ ತನಕ ಈ ಕಂಪೆಯನಿ ಇತಿಹಾಸದಲ್ಲಿ ಇಂಥ ಕಷ್ಟಕರವಾದ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಪ್ರತಿಭಾವಂತ ಉದ್ಯೋಗಿಗಗಳಲ್ಲಿ 11,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದು ನೋವು ತರುತ್ತಿದೆ. ಇದಕ್ಕಾಗಿ ವಿಷಾದಿಸುತ್ತೇನೆ’ ಎಂದಿದ್ದಾರೆ ಜುಕರ್ ಬರ್ಗ್​.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 7:31 pm, Thu, 10 November 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು