Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

ನ್ಯೂಯಾರ್ಕ್ ಪೋಸ್ಟ್ ಪ್ರಕಾರ , ಇಬ್ಬರು ಯುವತಿಯರು ಶನಿವಾರ ಮೆಕ್ಸಿಕನ್ ನಗರದ ಕ್ಯುರ್ನಾವಾಕಾದಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಆಂಬ್ಯುಲೆನ್ಸ್ ಬರುವವರೆಗೆ ಕಾಯುತ್ತಿದ್ದ ಈ ಯುವತಿಯರು ಫುಟ್​​ ಪಾತ್​​ನಲ್ಲಿ ಕುಳಿತು ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು
Follow us
ಅಕ್ಷತಾ ವರ್ಕಾಡಿ
|

Updated on: May 22, 2024 | 1:02 PM

ಮೆಕ್ಸಿಕೋದಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಇಬ್ಬರು ಯುವತಿಯರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ಆಂಬ್ಯುಲೆನ್ಸ್ ಬರುವವರೆಗೆ ರಸ್ತೆಯಲ್ಲೇ ಕುಳಿತು ಕಾಯುತ್ತಿದ್ದ ಈ ಯುವತಿರು ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಅಪಘಾತದ ಮಧ್ಯೆ ಈ ಯವತಿಯರ ಅವತಾರ ಕಂಡು ನೆರೆದಿದ್ದವರು ತಬ್ಬಿಬ್ಬಾಗಿದ್ದಾರೆ.

ನ್ಯೂಯಾರ್ಕ್ ಪೋಸ್ಟ್ ಪ್ರಕಾರ , ಇಬ್ಬರು ಮಹಿಳೆಯರು ಶನಿವಾರ ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ಬೀದಿಗಳಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದಾಗ ಐವರು ಮಹಿಳೆಯರು ಕಾರಿನಲ್ಲಿದ್ದರು. ಆದರೆ ಗಾಯಗೊಂಡಿದ್ದ ಇಬ್ಬರು ಯುವತಿಯರು ಫುಟ್​​ ಪಾತ್​​ನಲ್ಲಿ ಕುಳಿತು ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಆಂಬ್ಯುಲೆನ್ಸ್ ಬರುವವರೆಗೆ ಕಾಯುತ್ತಿದ್ದ ಮಹಿಳೆಯರು ಸೆಲ್ಫಿ ತೆಗೆದುಕೊಂಡರು.

ಇದನ್ನೂ ಓದಿ: ಕೋಮಾದಲ್ಲಿರುವ ಪ್ರೀತಿಯ ಸ್ನೇಹಿತನನ್ನು ಎಚ್ಚರಗೊಳಿಸಲು ಗೆಳೆಯರ ಮುಗ್ಧ ಸಂಭಾಷಣೆ

ಈ ಮಧ್ಯೆ, ಅವರ ಕಾರು ರಸ್ತೆಯ ಮಧ್ಯದಲ್ಲಿ ಅದರ ಛಾವಣಿಯ ಮೇಲೆ ಉರುಳಿದ್ದು ಅದರ ಕಿಟಕಿಗಳನ್ನು ಒಡೆದು ಹಾಕಲಾಗಿದೆ. ಅವರೆಲ್ಲರೂ ಮದ್ಯದ ಅಮಲಿನಲ್ಲಿದ್ದ ಶಂಕೆ ವ್ಯಕ್ತವಾಗಿದೆ. ಅಂತಿಮವಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಕಾರು ಅಪಘಾತದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಮೆಕ್ಸಿಕನ್ ಅಧಿಕಾರಿಗಳು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ