AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಪಕ್ಷಿಧಾಮಗಳಲ್ಲೀಗ ಫ್ಲೆಮಿಂಗೋ ವಲಸೆ ಹಕ್ಕಿಗಳ ಕಲರವ: ವೀಡಿಯೋ ವೈರಲ್​

ತಮಿಳುನಾಡಿನ ಕೊಡಿಯಾಕರೈನಲ್ಲಿರುವ ಪಾಯಿಂಟ್​ ಕ್ಯಾಲಿಮರ್​ ವನ್ಯಜೀವಿ ಮತ್ತು ಪಕ್ಷಿಧಾಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆಗಳು  ಬಂದಿದ್ದು ಪ್ರವಾಸಿಗರನ್ನು ಆಕರ್ಷಿಸಿದೆ. ಇದರ ವೀಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ತಮಿಳುನಾಡಿನ ಪಕ್ಷಿಧಾಮಗಳಲ್ಲೀಗ ಫ್ಲೆಮಿಂಗೋ ವಲಸೆ ಹಕ್ಕಿಗಳ ಕಲರವ: ವೀಡಿಯೋ ವೈರಲ್​
ಫ್ಲೆಮಿಂಗೋ ಹಕ್ಕಿಗಳು
TV9 Web
| Updated By: Pavitra Bhat Jigalemane|

Updated on: Dec 29, 2021 | 10:20 AM

Share

ಚಳಿಗಾಲದಲ್ಲಿ ಎತ್ತ ನೋಡಿದರೂ ವಲಸೆ ಹಕ್ಕಿಗಳದೇ ಕಲವರ. ಪಕ್ಷಿಧಾಮಗಳು, ವನ್ಯಜೀವಿ ಧಾಮಗಳಲ್ಲಿ ವಲಸೆ ಹಕ್ಕಿಗಳು ಬೀಡು ಬಿಟ್ಟು ನೋಡುಗರ ಕಣ್ಮನ ಸೆಳೆಯುತ್ತವೆ. ಇದೀಗ ತಮಿಳುನಾಡಿನ ಕೊಡಿಯಾಕರೈನಲ್ಲಿರುವ ಪಾಯಿಂಟ್​ ಕ್ಯಾಲಿಮರ್​ ವನ್ಯಜೀವಿ ಮತ್ತು ಪಕ್ಷಿಧಾಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆಗಳು  ಬಂದಿದ್ದು ಪ್ರವಾಸಿಗರನ್ನು ಆಕರ್ಷಿಸಿದೆ. ಇದರ ವೀಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಸಾಲು ಸಾಲು ಪಕ್ಷಿಗಳು ಹಾರಾಡುವುದನ್ನು ಕಾಣಬಹದು. 

ಮುಖ್ಯವಾಗಿ ಫ್ಲೆಮಿಂಗೋ ಪಕ್ಷಿಗಳು ಕೊಡಿಯಾಕರೈನ ಪಕ್ಷಿಧಾಮದಲ್ಲಿ ಕಾಣಿಸಿಕೊಂಡಿವೆ. ಇದರ ವೀಡಿಯೋವನ್ನು ತಮಿಳುನಾಡಿನ ಅರಣ್ಯ ಮತ್ತು ಪರಿಸರ ಹವಾಮಾನ ಬದಲಾವಣೆ ಕಾರ್ಯದರ್ಶಿ ಸುಪ್ರಿಯಾ ಸಾಹು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.  ಡಿಸೆಂಬರ್​ 25ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, 8 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

20 ಚದರ ಕಿಮೀ ನಿತ್ಯಹರಿದ್ವರ್ಣ ಕಾಡುಗಳನ್ನು ಕೊಡಿಯಾಕರೈ ವನ್ಯಜೀವಿಧಾಮ ಆವರಿಸಿದ್ದು  250 ಜಾತಿಯ ವಿವಿಧ ಪಕ್ಷಿಗಳ ನೆಲೆಯಾಗಿದೆ. 1967ರಲ್ಲಿ ಕೊಡಿಯಾಕರೈಅನ್ನು ವನ್ಯ ಜೀವಿ ಮತ್ತು ಪಕ್ಷಿಧಾಮ ಎಂದು ತಮಿಳುನಾಡು ಸರ್ಕಾರ ಗುರುತಿಸಿ ಸಂರಕ್ಷಿಸುತ್ತಿದೆ. ಒಟ್ಟು ನಾಲ್ಕು ಜಾತಿ ಫ್ಲೆಮಿಂಗೋಗಳು ಅಮೆರಿಕಾದಲ್ಲಿ ಕಂಡುಬರುತ್ತವೆ. ಇನ್ನು ಎರಡು ಜಾತಿಯ ಫ್ಲೆಮಿಂಗೋಗಳು  ಆಫ್ರಿಕಾ, ಏಷ್ಯಾ ಮತ್ತು ಯುರೋಪ್​ ಖಂಡಗಳಲ್ಲಿ ಕಂಡುಬರುತ್ತವೆ. ಸಾರ್ವಜನಿಕವಾಗಿ ಸುಲಭವಾಗಿ ಕಾಣಿಸಕೊಳ್ಳುವ ಈ ಪಕ್ಷಿಗಳು ಪ್ರತಿ ವರ್ಷ ಚಳಿಗಾಲದ ಸಂದರ್ಭದಲ್ಲಿ ವಲಸೆ ಹೋಗುತ್ತವೆ.

ಸದ್ಯ ಪಕ್ಷಿಗಳ ಹಾರಾಟದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ವಾವ್​ ಎಂದು ಉದ್ಘರಿಸಿದ್ದಾರೆ. ಚಳಿಗಾಲದಲ್ಲಿ ಸಂತಾನಕ್ಕಾಗಿ ಪಕ್ಷಿಗಳು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವಲಸೆಹೋಗುತ್ತವೆ. ಅವುಗಳ ಹಾರಾಟ, ಅವುಗಳ ನಡುವಿನ ಬಾಂದವ್ಯ ನೋಡುಗರನ್ನು ಮೈಮರೆಸುತ್ತವೆ.

ಇದನ್ನೂ ಓದಿ:

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ