AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಪಕ್ಷಿಧಾಮಗಳಲ್ಲೀಗ ಫ್ಲೆಮಿಂಗೋ ವಲಸೆ ಹಕ್ಕಿಗಳ ಕಲರವ: ವೀಡಿಯೋ ವೈರಲ್​

ತಮಿಳುನಾಡಿನ ಕೊಡಿಯಾಕರೈನಲ್ಲಿರುವ ಪಾಯಿಂಟ್​ ಕ್ಯಾಲಿಮರ್​ ವನ್ಯಜೀವಿ ಮತ್ತು ಪಕ್ಷಿಧಾಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆಗಳು  ಬಂದಿದ್ದು ಪ್ರವಾಸಿಗರನ್ನು ಆಕರ್ಷಿಸಿದೆ. ಇದರ ವೀಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ತಮಿಳುನಾಡಿನ ಪಕ್ಷಿಧಾಮಗಳಲ್ಲೀಗ ಫ್ಲೆಮಿಂಗೋ ವಲಸೆ ಹಕ್ಕಿಗಳ ಕಲರವ: ವೀಡಿಯೋ ವೈರಲ್​
ಫ್ಲೆಮಿಂಗೋ ಹಕ್ಕಿಗಳು
TV9 Web
| Edited By: |

Updated on: Dec 29, 2021 | 10:20 AM

Share

ಚಳಿಗಾಲದಲ್ಲಿ ಎತ್ತ ನೋಡಿದರೂ ವಲಸೆ ಹಕ್ಕಿಗಳದೇ ಕಲವರ. ಪಕ್ಷಿಧಾಮಗಳು, ವನ್ಯಜೀವಿ ಧಾಮಗಳಲ್ಲಿ ವಲಸೆ ಹಕ್ಕಿಗಳು ಬೀಡು ಬಿಟ್ಟು ನೋಡುಗರ ಕಣ್ಮನ ಸೆಳೆಯುತ್ತವೆ. ಇದೀಗ ತಮಿಳುನಾಡಿನ ಕೊಡಿಯಾಕರೈನಲ್ಲಿರುವ ಪಾಯಿಂಟ್​ ಕ್ಯಾಲಿಮರ್​ ವನ್ಯಜೀವಿ ಮತ್ತು ಪಕ್ಷಿಧಾಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಲಸೆಗಳು  ಬಂದಿದ್ದು ಪ್ರವಾಸಿಗರನ್ನು ಆಕರ್ಷಿಸಿದೆ. ಇದರ ವೀಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಸಾಲು ಸಾಲು ಪಕ್ಷಿಗಳು ಹಾರಾಡುವುದನ್ನು ಕಾಣಬಹದು. 

ಮುಖ್ಯವಾಗಿ ಫ್ಲೆಮಿಂಗೋ ಪಕ್ಷಿಗಳು ಕೊಡಿಯಾಕರೈನ ಪಕ್ಷಿಧಾಮದಲ್ಲಿ ಕಾಣಿಸಿಕೊಂಡಿವೆ. ಇದರ ವೀಡಿಯೋವನ್ನು ತಮಿಳುನಾಡಿನ ಅರಣ್ಯ ಮತ್ತು ಪರಿಸರ ಹವಾಮಾನ ಬದಲಾವಣೆ ಕಾರ್ಯದರ್ಶಿ ಸುಪ್ರಿಯಾ ಸಾಹು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.  ಡಿಸೆಂಬರ್​ 25ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, 8 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

20 ಚದರ ಕಿಮೀ ನಿತ್ಯಹರಿದ್ವರ್ಣ ಕಾಡುಗಳನ್ನು ಕೊಡಿಯಾಕರೈ ವನ್ಯಜೀವಿಧಾಮ ಆವರಿಸಿದ್ದು  250 ಜಾತಿಯ ವಿವಿಧ ಪಕ್ಷಿಗಳ ನೆಲೆಯಾಗಿದೆ. 1967ರಲ್ಲಿ ಕೊಡಿಯಾಕರೈಅನ್ನು ವನ್ಯ ಜೀವಿ ಮತ್ತು ಪಕ್ಷಿಧಾಮ ಎಂದು ತಮಿಳುನಾಡು ಸರ್ಕಾರ ಗುರುತಿಸಿ ಸಂರಕ್ಷಿಸುತ್ತಿದೆ. ಒಟ್ಟು ನಾಲ್ಕು ಜಾತಿ ಫ್ಲೆಮಿಂಗೋಗಳು ಅಮೆರಿಕಾದಲ್ಲಿ ಕಂಡುಬರುತ್ತವೆ. ಇನ್ನು ಎರಡು ಜಾತಿಯ ಫ್ಲೆಮಿಂಗೋಗಳು  ಆಫ್ರಿಕಾ, ಏಷ್ಯಾ ಮತ್ತು ಯುರೋಪ್​ ಖಂಡಗಳಲ್ಲಿ ಕಂಡುಬರುತ್ತವೆ. ಸಾರ್ವಜನಿಕವಾಗಿ ಸುಲಭವಾಗಿ ಕಾಣಿಸಕೊಳ್ಳುವ ಈ ಪಕ್ಷಿಗಳು ಪ್ರತಿ ವರ್ಷ ಚಳಿಗಾಲದ ಸಂದರ್ಭದಲ್ಲಿ ವಲಸೆ ಹೋಗುತ್ತವೆ.

ಸದ್ಯ ಪಕ್ಷಿಗಳ ಹಾರಾಟದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ವಾವ್​ ಎಂದು ಉದ್ಘರಿಸಿದ್ದಾರೆ. ಚಳಿಗಾಲದಲ್ಲಿ ಸಂತಾನಕ್ಕಾಗಿ ಪಕ್ಷಿಗಳು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವಲಸೆಹೋಗುತ್ತವೆ. ಅವುಗಳ ಹಾರಾಟ, ಅವುಗಳ ನಡುವಿನ ಬಾಂದವ್ಯ ನೋಡುಗರನ್ನು ಮೈಮರೆಸುತ್ತವೆ.

ಇದನ್ನೂ ಓದಿ:

ಬಚ್​ಪನ್​ಕಾ ಪ್ಯಾರ್​ ಖ್ಯಾತಿಯ ಸಹದೇವ್ ದಿರ್ಡೋಗೆ ಅಪಘಾತ: ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡ ಬಾದ್​ ಶಾ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್