AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಬಾಂಬ್​ಗಳನ್ನು ಪತ್ತೆ ಮಾಡುತ್ತಿದ್ದ ಗೋಲ್ಡ್​ ಮೆಡಲಿಸ್ಟ್​ ಇಲಿ ‘ಮಾಗ್ವಾ’ ಇನ್ನು ನೆನಪು ಮಾತ್ರ

ತಾಂಜೇನಿಯಾದಲ್ಲಿ ಹುಟ್ಟಿ ವಿಶೇಷ ತರಬೇತಿ ಪಡೆದು 5 ವರ್ಷಗಳ ಕಾಲ ಕಾಂಬೋಡಿಯಾದಲ್ಲಿ ಭದ್ರತಾಪಡೆಗಳೊಂದಿಗೆ ಕಾರ್ಯನಿರ್ವಹಿಸಿದ್ದ ಮಾಗ್ವಾ ಇದೀಗ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಇಲಿಗಳಿಗೆ ತರಬೇತಿ ನೀಡುವ ಲಾಭ ರಹಿತ ಸಂಸ್ಥೆ APOPO ಮಾಹಿತಿ ಹಂಚಿಕೊಂಡಿದೆ. 

ನೆಲಬಾಂಬ್​ಗಳನ್ನು ಪತ್ತೆ ಮಾಡುತ್ತಿದ್ದ ಗೋಲ್ಡ್​ ಮೆಡಲಿಸ್ಟ್​ ಇಲಿ 'ಮಾಗ್ವಾ' ಇನ್ನು ನೆನಪು ಮಾತ್ರ
ಮಾಗ್ವಾ ಇಲಿ
TV9 Web
| Edited By: |

Updated on: Jan 12, 2022 | 5:20 PM

Share

ನೆಲದಲ್ಲಿ ಅಡಗಿಸಿಟ್ಟ ಬಾಂಬ್​ಗಳನ್ನು ಪತ್ತೆ ಮಾಡಿವುದರಲ್ಲಿ ನಿಸ್ಸೀಮನಾಗಿದ್ದ ಇಲಿ ಮಾಗ್ವಾ ಇನ್ನು ನೆನಪು ಮಾತ್ರ. ತಾಂಜೇನಿಯಾದಲ್ಲಿ ಹುಟ್ಟಿ ವಿಶೇಷ ತರಬೇತಿ ಪಡೆದು 5 ವರ್ಷಗಳ ಕಾಲ ಕಾಂಬೋಡಿಯಾದಲ್ಲಿ ಭದ್ರತಾಪಡೆಗಳೊಂದಿಗೆ ಕಾರ್ಯನಿರ್ವಹಿಸಿದ್ದ ಮಾಗ್ವಾ ಇದೀಗ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಇಲಿಗಳಿಗೆ ತರಬೇತಿ ನೀಡುವ ಲಾಭ ರಹಿತ ಸಂಸ್ಥೆ APOPO ಮಾಹಿತಿ ಹಂಚಿಕೊಂಡಿದೆ.  ಐದು ವರ್ಷಗಳಲ್ಲಿ ಮಾಗ್ವಾ 100ಕ್ಕೂ ಹೆಚ್ಚು ನೆಲಬಾಂಬುಗಳನ್ನು ಪತ್ತೆ ಮಾಡಿತ್ತು. ಮಾಗ್ವಾ ಅಪ್ರತಿಮ ಸಾಧನೆಗಾಗಿ ಗೋಲ್ಡ್​ ಮೆಡಲ್​ನ್ನು ನೀಡಲಾಗಿತ್ತು. ಈ ಇಲಿಯನ್ನು ಹೀರೋ ರಾಟ್​ ಎಂದೇ ಕರೆಯಲಾಗುತ್ತಿತ್ತು. 

ಮಾಗ್ವಾ ಸಾವಿನ ಬಗ್ಗೆ ಇಲಿಗಳಿಗೆ ತರಬೇತಿ ನೀಡುವ ಬೆಲ್ಜಿಯಂನ ಸಂಸ್ಥೆ  ಮಾಹಿತಿ ನೀಡಿದೆ.  ಇತ್ತೀಚೆಗಷ್ಟೇ 8ನೇ ವರ್ಷಕ್ಕೆ ಕಾಲಿಟ್ಟಿದ್ದ ಮಾಗ್ವಾ ವಾರಾಂತ್ಯದಲ್ಲಿ ಸಾವನ್ನಪ್ಪಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದೆ. ಆರಾಮವಾಗಿಯೇ ಇದ್ದ ಮಾಗ್ವಾ ಇದ್ದಕ್ಕಿದ್ದಂತೆ ಊಟ ಮಾಡುವುದನ್ನು ನಿಲ್ಲಿಸಿತ್ತು. ಕ್ರಮೇಣ ಆರೋಗ್ಯ ಕ್ಷೀಣಸಿ ಸಾವನ್ನಪ್ಪಿದೆ ಎಂದು ತಿಳಿಸಿದೆ. ಬದುಕಿರುವವರೆಗೆ 5 ವರ್ಷಗಳ ಅವಧಿಯಲ್ಲಿ  2,25,000 ಚದರ ಕಿಮೀನಷ್ಟು ಭೂಮಿಯಲ್ಲಿ ಬಾಂಬ್​ಗಳನ್ನು ಹುಡುಕಿದೆ.  31 ಪುಟ್ಬಾಲ್​ ಕ್ರೀಡಾಂಗಣದಲ್ಲಿ 71 ಜೀವಂತ ನೆಲಬಾಂಬ್​ಗಳನ್ನು ಪತ್ತೆ ಮಾಡಿದ್ದು, 38 ನಿಶ್ಯೇಷ್ಟಿತ ಬಾಂಬ್​ಗಳನ್ನು ಗುರುತಿಸಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಮಾಗ್ವಾದಿಂದ ನಾವು  ಜೀವ ಅಥವಾ ಅಂಗವನ್ನು ಕಳೆದುಕೊಳ್ಳುವ ಭಯವಿಲ್ಲದೆ ಬದುಕಿ, ಕೆಲಸ ಮಾಡಿ, ಅನಂದವಾಗಿರಿ ಎನ್ನುವ ದೊಡ್ಡ ಪಾಠವನ್ನು ಕಲಿತಿದ್ದೇವೆ. ಅಷ್ಟು ದೈರ್ಯದಿಂದ ಕೂಡಿದ ಮಾಗ್ವಾವನ್ನು ಕಳೆದುಕೊಂಡಿರುವುದು ನಮ್ಮ ಭದ್ರತಾಪಡೆಗೆ ದೊಡ್ಡ ನಷ್ಟವಾಗಿದೆ ಎಂದಿದ್ದಾರೆ.

ಈ ಇಲಿಯು 2016ರಲ್ಲಿ ತಾಂಜೇನಿಯಾದಲ್ಲಿ ಜನಿಸಿತ್ತು. ನಂತರ ತರಬೇತಿ ಪಡೆದು ಕಾಂಬೋಡಿಯಾ ಭದ್ರತಾಪಡೆಯನ್ನು ಸೇರಿಕೊಂಡಿತ್ತು. ಕಾಂಬೋಡಿಯಾ ಜಗತ್ತಿನಲ್ಲಿಯೇ ಅತಿ ಹೆಚ್ಚು ನೆಲಬಾಂಬ್​ಗಳನ್ನು ಪ್ರಯೋಗಿಸುವ ದೇಶವಾಗಿದೆ. ಇದರಿಂದ ಈಗಾಗಲೇ ಹಲವರು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:

ಕಳ್ಳತನಕ್ಕೆ ಹೋದಾಗ ಹಸಿವೆಯಾಗಿ ಕಿಚಡಿ ಮಾಡಿದ ಕಳ್ಳ: ಈಗ ಪೊಲೀಸರ ಅತಿಥಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ