AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಇದು ಆಗಸವೋ, ನದಿಯೋ?; ಅಪರೂಪದ ಚಿತ್ರ ನೋಡಿ ಅಚ್ಚರಿಗೊಂಡ ನೆಟ್ಟಿಗರು!

River Umngot: ಜಲ ಶಕ್ತಿ ಸಚಿವಾಲಯವು ಮೇಘಾಲಯದ ನದಿಯೊಂದರ ಚಿತ್ರವನ್ನು ಹಂಚಿಕೊಂಡಿದ್ದು, ಜನರು ಅದನ್ನು ನೋಡಿ ಅಚ್ಚರಿ ಪಟ್ಟಿದ್ದಾರೆ. ಏನದರ ವಿಶೇಷತೆ? ಇಲ್ಲಿದೆ ಮಾಹಿತಿ.

Meghalaya: ಇದು ಆಗಸವೋ, ನದಿಯೋ?; ಅಪರೂಪದ ಚಿತ್ರ ನೋಡಿ ಅಚ್ಚರಿಗೊಂಡ ನೆಟ್ಟಿಗರು!
ಜಲ ಶಕ್ತಿ ಸಚಿವಾಲಯ ಹಂಚಿಕೊಂಡಿರುವ ಚಿತ್ರ
TV9 Web
| Updated By: shivaprasad.hs|

Updated on: Nov 19, 2021 | 2:59 PM

Share

ಭಾರತದಲ್ಲಿ ಯಮುನಾ ನದಿ ಮಲಿನಗೊಂಡು, ಅದರ ಮೇಲೆ ವಿಷಕಾರಿ ಬುರುಗು ತೇಲುತ್ತಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಇದರ ಬೆನ್ನಲ್ಲೇ ಈಗ ಮೇಘಾಲಯದ ಸ್ಫಟಿಕದಷ್ಟು ಶುಭ್ರವಾಗಿರುವ ನದಿಯೊಂದರ ಚಿತ್ರ ವೈರಲ್ ಆಗಿದ್ದು ನೆಟ್ಟಿಗರ ಮನಗೆದ್ದಿದೆ. ಜಲ ಶಕ್ತಿ ಸಚಿವಾಲಯದ ಟ್ವಿಟರ್ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದ್ದು, ನದಿಯ ಪಕ್ಷಿನೋಟವನ್ನು ಹಂಚಿಕೊಳ್ಳಲಾಗಿದೆ. ಶಿಲ್ಲಾಂಗ್​ನ ಉಮ್ನ್​ಗೋಟ್ ನದಿಯ ಚಿತ್ರವನ್ನು ಸಚಿವಾಲಯ ಶೇರ್ ಮಾಡಿದ್ದು, ಅದರಲ್ಲಿ ಸ್ಫಟಿಕದಷ್ಟು ಶುಭ್ರವಾದ ನೀರಿನ ಮೇಲೆ ದೋಣಿಯೊಂದರಲ್ಲಿ ಸ್ಥಳೀಯರು ಸಂಚರಿಸುತ್ತಿದ್ದಾರೆ. ಚಿತ್ರ ಹಲವಾರು ಕಾರಣಗಳಿಂದ ಜನರ ಕುತೂಹಲ ಕೆರಳಿಸಿದೆ.

ಮೊದಲ ಕಾರಣ, ಜಲ ಶಕ್ತಿ ಸಚಿವಾಲಯವು, ಟ್ವಿಟರ್​ನಲ್ಲಿ ಚಿತ್ರವನ್ನು ಹಂಚಿಕೊಳ್ಳುವಾಗ, ಸುಂದರವಾದ ಕ್ಯಾಪ್ಶನ್ ನೀಡಿದೆ. ಅದರಲ್ಲಿ ಬರೆಯುತ್ತಾ, ಈ ಚಿತ್ರ ನೋಡಿದಾಗ ಬೋಟ್ ಆಗಸದಲ್ಲಿದೆ ಎಂಬ ಭಾವ ಉಟುಮಾಡುತ್ತದೆ ಎಂದು ಬರೆದಿದೆ. ಈ ಹೋಲಿಕೆ ನೆಟ್ಟಿಗರಿಗೆ ಇಷ್ಟವಾಗಿದೆ. ಚಿತ್ರವನ್ನು ಹಂಚಿಕೊಂಡ ಸಚಿವಾಲಯವು, ‘‘ಇದು ವಿಶ್ವದಲ್ಲೇ ಅತ್ಯಂತ ಶುದ್ಧವಾದ ನದಿಗಳಲ್ಲೊಂದು. ಮೇಘಾಲಯದ ಶಿಲ್ಲಾಂಗ್​ನಿಂದ 100 ಕಿಮೀ ದೂರದಲ್ಲಿರುವ ಉಮ್ನ್​ಗೋಟ್ ಎಂಬಲ್ಲಿದೆ. ನದಿ ನೀರು ಎಷ್ಟು ಶುಭ್ರವಾಗಿದೆಯೆಂದರೆ, ಬೋಟ್ ಆಗಸದಲ್ಲಿರುವಂತೆ ಭಾಸವಾಗುತ್ತದೆ. ನಮ್ಮೆಲ್ಲಾ ನದಿಗಳು ಹೀಗೇ ಇರಲಿ ಎಂದು ಬಯಸುತ್ತೇವೆ. ಇಂತಹ ನದಿಯನ್ನು ಕಾಪಾಡಿಕೊಂಡಿದ್ದಕ್ಕೆ ಮೇಘಾಲಯದ ಜನರಿಗೆ ಧನ್ಯವಾದಗಳು’’ ಎಂದು ಬರೆದಿದೆ.

ಜಲ ಶಕ್ತಿ ಸಚಿವಾಲಯ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಈ ಚಿತ್ರಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದು, ಅಚ್ಚರಿ ಸೂಚಿಸಿದ್ದಾರೆ. ಕೆಲವರು ಇದು ಫೋಟೋಶಾಪ್ಡ್ ಚಿತ್ರ ಇರುವಂತೆ ಇದೆ. ಅಷ್ಟು ಅದ್ಭುತವಾಗಿದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ:

Password: ಭಾರತದಲ್ಲಿ ಜನರು ಅತಿ ಹೆಚ್ಚಾಗಿ‌‌ ಬಳಸೋದು ಇದೇ ಪಾಸ್​ವರ್ಡ್​ಗಳನ್ನಂತೆ! ಅವು ಯಾವುವು ಗೊತ್ತಾ?

ನಯನತಾರಾಗೆ ಕೊಟ್ಟಿದ್ದ ಆಫರ್​ ಬಾಚಿಕೊಂಡ ಸ್ಯಾಂಡಲ್​ವುಡ್​​ ನಟಿ; ಕಾಲಿವುಡ್​​​ನಲ್ಲಿ ಹೆಚ್ಚಾಯ್ತು ಕನ್ನಡ ಮಂದಿಯ ಹವಾ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು