AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಇದು ಆಗಸವೋ, ನದಿಯೋ?; ಅಪರೂಪದ ಚಿತ್ರ ನೋಡಿ ಅಚ್ಚರಿಗೊಂಡ ನೆಟ್ಟಿಗರು!

River Umngot: ಜಲ ಶಕ್ತಿ ಸಚಿವಾಲಯವು ಮೇಘಾಲಯದ ನದಿಯೊಂದರ ಚಿತ್ರವನ್ನು ಹಂಚಿಕೊಂಡಿದ್ದು, ಜನರು ಅದನ್ನು ನೋಡಿ ಅಚ್ಚರಿ ಪಟ್ಟಿದ್ದಾರೆ. ಏನದರ ವಿಶೇಷತೆ? ಇಲ್ಲಿದೆ ಮಾಹಿತಿ.

Meghalaya: ಇದು ಆಗಸವೋ, ನದಿಯೋ?; ಅಪರೂಪದ ಚಿತ್ರ ನೋಡಿ ಅಚ್ಚರಿಗೊಂಡ ನೆಟ್ಟಿಗರು!
ಜಲ ಶಕ್ತಿ ಸಚಿವಾಲಯ ಹಂಚಿಕೊಂಡಿರುವ ಚಿತ್ರ
TV9 Web
| Updated By: shivaprasad.hs|

Updated on: Nov 19, 2021 | 2:59 PM

Share

ಭಾರತದಲ್ಲಿ ಯಮುನಾ ನದಿ ಮಲಿನಗೊಂಡು, ಅದರ ಮೇಲೆ ವಿಷಕಾರಿ ಬುರುಗು ತೇಲುತ್ತಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಇದರ ಬೆನ್ನಲ್ಲೇ ಈಗ ಮೇಘಾಲಯದ ಸ್ಫಟಿಕದಷ್ಟು ಶುಭ್ರವಾಗಿರುವ ನದಿಯೊಂದರ ಚಿತ್ರ ವೈರಲ್ ಆಗಿದ್ದು ನೆಟ್ಟಿಗರ ಮನಗೆದ್ದಿದೆ. ಜಲ ಶಕ್ತಿ ಸಚಿವಾಲಯದ ಟ್ವಿಟರ್ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದ್ದು, ನದಿಯ ಪಕ್ಷಿನೋಟವನ್ನು ಹಂಚಿಕೊಳ್ಳಲಾಗಿದೆ. ಶಿಲ್ಲಾಂಗ್​ನ ಉಮ್ನ್​ಗೋಟ್ ನದಿಯ ಚಿತ್ರವನ್ನು ಸಚಿವಾಲಯ ಶೇರ್ ಮಾಡಿದ್ದು, ಅದರಲ್ಲಿ ಸ್ಫಟಿಕದಷ್ಟು ಶುಭ್ರವಾದ ನೀರಿನ ಮೇಲೆ ದೋಣಿಯೊಂದರಲ್ಲಿ ಸ್ಥಳೀಯರು ಸಂಚರಿಸುತ್ತಿದ್ದಾರೆ. ಚಿತ್ರ ಹಲವಾರು ಕಾರಣಗಳಿಂದ ಜನರ ಕುತೂಹಲ ಕೆರಳಿಸಿದೆ.

ಮೊದಲ ಕಾರಣ, ಜಲ ಶಕ್ತಿ ಸಚಿವಾಲಯವು, ಟ್ವಿಟರ್​ನಲ್ಲಿ ಚಿತ್ರವನ್ನು ಹಂಚಿಕೊಳ್ಳುವಾಗ, ಸುಂದರವಾದ ಕ್ಯಾಪ್ಶನ್ ನೀಡಿದೆ. ಅದರಲ್ಲಿ ಬರೆಯುತ್ತಾ, ಈ ಚಿತ್ರ ನೋಡಿದಾಗ ಬೋಟ್ ಆಗಸದಲ್ಲಿದೆ ಎಂಬ ಭಾವ ಉಟುಮಾಡುತ್ತದೆ ಎಂದು ಬರೆದಿದೆ. ಈ ಹೋಲಿಕೆ ನೆಟ್ಟಿಗರಿಗೆ ಇಷ್ಟವಾಗಿದೆ. ಚಿತ್ರವನ್ನು ಹಂಚಿಕೊಂಡ ಸಚಿವಾಲಯವು, ‘‘ಇದು ವಿಶ್ವದಲ್ಲೇ ಅತ್ಯಂತ ಶುದ್ಧವಾದ ನದಿಗಳಲ್ಲೊಂದು. ಮೇಘಾಲಯದ ಶಿಲ್ಲಾಂಗ್​ನಿಂದ 100 ಕಿಮೀ ದೂರದಲ್ಲಿರುವ ಉಮ್ನ್​ಗೋಟ್ ಎಂಬಲ್ಲಿದೆ. ನದಿ ನೀರು ಎಷ್ಟು ಶುಭ್ರವಾಗಿದೆಯೆಂದರೆ, ಬೋಟ್ ಆಗಸದಲ್ಲಿರುವಂತೆ ಭಾಸವಾಗುತ್ತದೆ. ನಮ್ಮೆಲ್ಲಾ ನದಿಗಳು ಹೀಗೇ ಇರಲಿ ಎಂದು ಬಯಸುತ್ತೇವೆ. ಇಂತಹ ನದಿಯನ್ನು ಕಾಪಾಡಿಕೊಂಡಿದ್ದಕ್ಕೆ ಮೇಘಾಲಯದ ಜನರಿಗೆ ಧನ್ಯವಾದಗಳು’’ ಎಂದು ಬರೆದಿದೆ.

ಜಲ ಶಕ್ತಿ ಸಚಿವಾಲಯ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಈ ಚಿತ್ರಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದು, ಅಚ್ಚರಿ ಸೂಚಿಸಿದ್ದಾರೆ. ಕೆಲವರು ಇದು ಫೋಟೋಶಾಪ್ಡ್ ಚಿತ್ರ ಇರುವಂತೆ ಇದೆ. ಅಷ್ಟು ಅದ್ಭುತವಾಗಿದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ:

Password: ಭಾರತದಲ್ಲಿ ಜನರು ಅತಿ ಹೆಚ್ಚಾಗಿ‌‌ ಬಳಸೋದು ಇದೇ ಪಾಸ್​ವರ್ಡ್​ಗಳನ್ನಂತೆ! ಅವು ಯಾವುವು ಗೊತ್ತಾ?

ನಯನತಾರಾಗೆ ಕೊಟ್ಟಿದ್ದ ಆಫರ್​ ಬಾಚಿಕೊಂಡ ಸ್ಯಾಂಡಲ್​ವುಡ್​​ ನಟಿ; ಕಾಲಿವುಡ್​​​ನಲ್ಲಿ ಹೆಚ್ಚಾಯ್ತು ಕನ್ನಡ ಮಂದಿಯ ಹವಾ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!