AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಇದು ಆಗಸವೋ, ನದಿಯೋ?; ಅಪರೂಪದ ಚಿತ್ರ ನೋಡಿ ಅಚ್ಚರಿಗೊಂಡ ನೆಟ್ಟಿಗರು!

River Umngot: ಜಲ ಶಕ್ತಿ ಸಚಿವಾಲಯವು ಮೇಘಾಲಯದ ನದಿಯೊಂದರ ಚಿತ್ರವನ್ನು ಹಂಚಿಕೊಂಡಿದ್ದು, ಜನರು ಅದನ್ನು ನೋಡಿ ಅಚ್ಚರಿ ಪಟ್ಟಿದ್ದಾರೆ. ಏನದರ ವಿಶೇಷತೆ? ಇಲ್ಲಿದೆ ಮಾಹಿತಿ.

Meghalaya: ಇದು ಆಗಸವೋ, ನದಿಯೋ?; ಅಪರೂಪದ ಚಿತ್ರ ನೋಡಿ ಅಚ್ಚರಿಗೊಂಡ ನೆಟ್ಟಿಗರು!
ಜಲ ಶಕ್ತಿ ಸಚಿವಾಲಯ ಹಂಚಿಕೊಂಡಿರುವ ಚಿತ್ರ
TV9 Web
| Edited By: |

Updated on: Nov 19, 2021 | 2:59 PM

Share

ಭಾರತದಲ್ಲಿ ಯಮುನಾ ನದಿ ಮಲಿನಗೊಂಡು, ಅದರ ಮೇಲೆ ವಿಷಕಾರಿ ಬುರುಗು ತೇಲುತ್ತಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಇದರ ಬೆನ್ನಲ್ಲೇ ಈಗ ಮೇಘಾಲಯದ ಸ್ಫಟಿಕದಷ್ಟು ಶುಭ್ರವಾಗಿರುವ ನದಿಯೊಂದರ ಚಿತ್ರ ವೈರಲ್ ಆಗಿದ್ದು ನೆಟ್ಟಿಗರ ಮನಗೆದ್ದಿದೆ. ಜಲ ಶಕ್ತಿ ಸಚಿವಾಲಯದ ಟ್ವಿಟರ್ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದ್ದು, ನದಿಯ ಪಕ್ಷಿನೋಟವನ್ನು ಹಂಚಿಕೊಳ್ಳಲಾಗಿದೆ. ಶಿಲ್ಲಾಂಗ್​ನ ಉಮ್ನ್​ಗೋಟ್ ನದಿಯ ಚಿತ್ರವನ್ನು ಸಚಿವಾಲಯ ಶೇರ್ ಮಾಡಿದ್ದು, ಅದರಲ್ಲಿ ಸ್ಫಟಿಕದಷ್ಟು ಶುಭ್ರವಾದ ನೀರಿನ ಮೇಲೆ ದೋಣಿಯೊಂದರಲ್ಲಿ ಸ್ಥಳೀಯರು ಸಂಚರಿಸುತ್ತಿದ್ದಾರೆ. ಚಿತ್ರ ಹಲವಾರು ಕಾರಣಗಳಿಂದ ಜನರ ಕುತೂಹಲ ಕೆರಳಿಸಿದೆ.

ಮೊದಲ ಕಾರಣ, ಜಲ ಶಕ್ತಿ ಸಚಿವಾಲಯವು, ಟ್ವಿಟರ್​ನಲ್ಲಿ ಚಿತ್ರವನ್ನು ಹಂಚಿಕೊಳ್ಳುವಾಗ, ಸುಂದರವಾದ ಕ್ಯಾಪ್ಶನ್ ನೀಡಿದೆ. ಅದರಲ್ಲಿ ಬರೆಯುತ್ತಾ, ಈ ಚಿತ್ರ ನೋಡಿದಾಗ ಬೋಟ್ ಆಗಸದಲ್ಲಿದೆ ಎಂಬ ಭಾವ ಉಟುಮಾಡುತ್ತದೆ ಎಂದು ಬರೆದಿದೆ. ಈ ಹೋಲಿಕೆ ನೆಟ್ಟಿಗರಿಗೆ ಇಷ್ಟವಾಗಿದೆ. ಚಿತ್ರವನ್ನು ಹಂಚಿಕೊಂಡ ಸಚಿವಾಲಯವು, ‘‘ಇದು ವಿಶ್ವದಲ್ಲೇ ಅತ್ಯಂತ ಶುದ್ಧವಾದ ನದಿಗಳಲ್ಲೊಂದು. ಮೇಘಾಲಯದ ಶಿಲ್ಲಾಂಗ್​ನಿಂದ 100 ಕಿಮೀ ದೂರದಲ್ಲಿರುವ ಉಮ್ನ್​ಗೋಟ್ ಎಂಬಲ್ಲಿದೆ. ನದಿ ನೀರು ಎಷ್ಟು ಶುಭ್ರವಾಗಿದೆಯೆಂದರೆ, ಬೋಟ್ ಆಗಸದಲ್ಲಿರುವಂತೆ ಭಾಸವಾಗುತ್ತದೆ. ನಮ್ಮೆಲ್ಲಾ ನದಿಗಳು ಹೀಗೇ ಇರಲಿ ಎಂದು ಬಯಸುತ್ತೇವೆ. ಇಂತಹ ನದಿಯನ್ನು ಕಾಪಾಡಿಕೊಂಡಿದ್ದಕ್ಕೆ ಮೇಘಾಲಯದ ಜನರಿಗೆ ಧನ್ಯವಾದಗಳು’’ ಎಂದು ಬರೆದಿದೆ.

ಜಲ ಶಕ್ತಿ ಸಚಿವಾಲಯ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಈ ಚಿತ್ರಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದು, ಅಚ್ಚರಿ ಸೂಚಿಸಿದ್ದಾರೆ. ಕೆಲವರು ಇದು ಫೋಟೋಶಾಪ್ಡ್ ಚಿತ್ರ ಇರುವಂತೆ ಇದೆ. ಅಷ್ಟು ಅದ್ಭುತವಾಗಿದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ:

Password: ಭಾರತದಲ್ಲಿ ಜನರು ಅತಿ ಹೆಚ್ಚಾಗಿ‌‌ ಬಳಸೋದು ಇದೇ ಪಾಸ್​ವರ್ಡ್​ಗಳನ್ನಂತೆ! ಅವು ಯಾವುವು ಗೊತ್ತಾ?

ನಯನತಾರಾಗೆ ಕೊಟ್ಟಿದ್ದ ಆಫರ್​ ಬಾಚಿಕೊಂಡ ಸ್ಯಾಂಡಲ್​ವುಡ್​​ ನಟಿ; ಕಾಲಿವುಡ್​​​ನಲ್ಲಿ ಹೆಚ್ಚಾಯ್ತು ಕನ್ನಡ ಮಂದಿಯ ಹವಾ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ