AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಮಹಿಳೆಯ ಅವಶೇಷಗಳು ಶಾರ್ಕ್ ಹೊಟ್ಟೆಯಲ್ಲಿ ಪತ್ತೆ

ಕಳೆದ ತಿಂಗಳು ಸೆ. 26ರಂದು 68 ವರ್ಷದ ಮಹಿಳೆ ಕೊಲೀನ್ ಮೊನ್‌ಫೋರ್ ತನ್ನ ಸ್ನೇಹಿತರೊಂದಿಗೆ ಇಂಡೋನೇಷ್ಯಾದ ಬೀಚ್​ಗೆ ಹೋಗಿದ್ದರು. ನೀರಿಗೆ ಧುಮುಕುವ ವೇಳೆ ಜೋರಾದ ಅಲೆಗಳ ರಭಸಕ್ಕೆ ಮಹಿಳೆ ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ಸ್ನೇಹಿತರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ಷಣಾ ತಂಡ ಮಹಿಳೆಗಾಗಿ ಹುಡುಕಾಟ ನಡೆಸಿದರೂ ಕೂಡ ಮಹಿಳೆ ಪತ್ತೆಯಾಗಿರಲ್ಲಿಲ್ಲ.

ಕಾಣೆಯಾಗಿದ್ದ ಮಹಿಳೆಯ ಅವಶೇಷಗಳು ಶಾರ್ಕ್ ಹೊಟ್ಟೆಯಲ್ಲಿ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Oct 09, 2024 | 4:25 PM

Share

ಇಂಡೋನೇಷ್ಯಾ: ಕುಟುಂಬದೊಂದಿಗೆ ಬೀಚ್​ನಲ್ಲಿ ವಾರಾಂತ್ಯ ಕಳೆಯಲು ಹೋಗಿದ್ದ ಮಹಿಳೆಯೊಬ್ಬಳು ಏಕಾಏಕಿ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ಮಹಿಳೆ ಅನಿರೀಕ್ಷಿತವಾಗಿ ಪತ್ತೆಯಾಗಿದ್ದಾಳೆ. ಮೀನುಗಾರರ ಬಲೆಗೆ ಬೃಹತ್ ಶಾರ್ಕ್ ಸಿಕ್ಕಿಬಿದ್ದಿದ್ದು, ಶಾರ್ಕ್ ಹೊಟ್ಟೆಯಲ್ಲಿ ಮಹಿಳೆಯ ತೊಟ್ಟಿದ್ದ ಈಜುಡುಗೆ​​ ಜೊತೆಗೆ ಆಕೆಯ ಅವಶೇಷಗಳು ಪತ್ತೆಯಾಗಿವೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.

ಕಳೆದ ತಿಂಗಳು ಸೆಪ್ಟೆಂಬರ್ 26ರಂದು 68 ವರ್ಷದ ಅಮೆರಿಕದ ಮಹಿಳೆ ಕೊಲೀನ್ ಮೊನ್‌ಫೋರ್ ತನ್ನ ಸ್ನೇಹಿತರೊಂದಿಗೆ ಇಂಡೋನೇಷ್ಯಾದ ಬೀಚ್​ಗೆ ಹೋಗಿದ್ದರು. ಮಹಿಳೆ ನೀರಿಗೆ ಧುಮುಕುವ ವೇಳೆ ಜೋರಾದ ಅಲೆಗಳ ರಭಸಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಾನ್‌ಫೋರ್ ನಾಪತ್ತೆಯಾದಾಗ, ಸ್ನೇಹಿತರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ರಕ್ಷಣಾ ತಂಡ ಕೊಲೀನ್ ಮಾನ್‌ಫೋರ್‌ಗಾಗಿ ಹುಡುಕಾಟ ಆರಂಭಿಸಿದೆ. ಹಾಗೆ ಒಂದು ವಾರ ಕಳೆದಿದೆ. ಅಂತಿಮವಾಗಿ ಶಾರ್ಕ್ ಹೊಟ್ಟೆಯಲ್ಲಿ ಅವಳ ಅವಶೇಷಗಳು ಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಬೆಚ್ಚಿ ಬೀಳಿಸಿದೆ.

ಇದನ್ನೂ ಓದಿ: ಗರ್ಬಾ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಖ್ಯಾತ ಕಲಾವಿದ ಸಾವು

ಟಿಮೋರ್-ಲೆಸ್ಟೆಯಲ್ಲಿ ಮೀನುಗಾರರ ಬಲೆಗೆ ಬೃಹತ್ ಶಾರ್ಕ್ ಸಿಕ್ಕಿಬಿದ್ದಿದ್ದು, ಸೆರೆಹಿಡಿದ ಶಾರ್ಕ್‌ನ ಹೊಟ್ಟೆಯೊಳಗೆ ಮಾನವ ಅವಶೇಷಗಳು ಕಂಡುಬಂದಿತ್ತು. ಇದಲ್ಲದೇ ಈಜುಡುಗೆ ಕೂಡ ಇರುವುದು ಗಮನಕ್ಕೆ ಬಂದಿದೆ. ಡೈವಿಂಗ್ ಮಾಡುವಾಗ ಕೊಲೀನ್ ಮೊನ್‌ಫೋರ್ ಧರಿಸಿದ ಉಡುಗೆ ಇದೇ ಎಂದು ತಿಳಿದಿದೆ. ಅಧಿಕಾರಿಗಳು ಇಂಡೋನೇಷಿಯನ್ ಕೋಸ್ಟ್ ಗಾರ್ಡ್ ಅನ್ನು ಸಂಪರ್ಕಿಸಿ, ಕಾಣೆಯಾದ ಕಾಲಿನ್ ಮಾನ್‌ಫೋರ್‌ನ ಸಂಬಂಧಿಕರು ಮತ್ತು ಸ್ನೇಹಿತರಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಆದರೆ, ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ತನಿಖೆ ಮುಂದುವರಿದಿದೆ ಎನ್ನಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:23 pm, Wed, 9 October 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್