AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಮಹಿಳೆಯ ಅವಶೇಷಗಳು ಶಾರ್ಕ್ ಹೊಟ್ಟೆಯಲ್ಲಿ ಪತ್ತೆ

ಕಳೆದ ತಿಂಗಳು ಸೆ. 26ರಂದು 68 ವರ್ಷದ ಮಹಿಳೆ ಕೊಲೀನ್ ಮೊನ್‌ಫೋರ್ ತನ್ನ ಸ್ನೇಹಿತರೊಂದಿಗೆ ಇಂಡೋನೇಷ್ಯಾದ ಬೀಚ್​ಗೆ ಹೋಗಿದ್ದರು. ನೀರಿಗೆ ಧುಮುಕುವ ವೇಳೆ ಜೋರಾದ ಅಲೆಗಳ ರಭಸಕ್ಕೆ ಮಹಿಳೆ ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ಸ್ನೇಹಿತರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ಷಣಾ ತಂಡ ಮಹಿಳೆಗಾಗಿ ಹುಡುಕಾಟ ನಡೆಸಿದರೂ ಕೂಡ ಮಹಿಳೆ ಪತ್ತೆಯಾಗಿರಲ್ಲಿಲ್ಲ.

ಕಾಣೆಯಾಗಿದ್ದ ಮಹಿಳೆಯ ಅವಶೇಷಗಳು ಶಾರ್ಕ್ ಹೊಟ್ಟೆಯಲ್ಲಿ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Oct 09, 2024 | 4:25 PM

Share

ಇಂಡೋನೇಷ್ಯಾ: ಕುಟುಂಬದೊಂದಿಗೆ ಬೀಚ್​ನಲ್ಲಿ ವಾರಾಂತ್ಯ ಕಳೆಯಲು ಹೋಗಿದ್ದ ಮಹಿಳೆಯೊಬ್ಬಳು ಏಕಾಏಕಿ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ಮಹಿಳೆ ಅನಿರೀಕ್ಷಿತವಾಗಿ ಪತ್ತೆಯಾಗಿದ್ದಾಳೆ. ಮೀನುಗಾರರ ಬಲೆಗೆ ಬೃಹತ್ ಶಾರ್ಕ್ ಸಿಕ್ಕಿಬಿದ್ದಿದ್ದು, ಶಾರ್ಕ್ ಹೊಟ್ಟೆಯಲ್ಲಿ ಮಹಿಳೆಯ ತೊಟ್ಟಿದ್ದ ಈಜುಡುಗೆ​​ ಜೊತೆಗೆ ಆಕೆಯ ಅವಶೇಷಗಳು ಪತ್ತೆಯಾಗಿವೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.

ಕಳೆದ ತಿಂಗಳು ಸೆಪ್ಟೆಂಬರ್ 26ರಂದು 68 ವರ್ಷದ ಅಮೆರಿಕದ ಮಹಿಳೆ ಕೊಲೀನ್ ಮೊನ್‌ಫೋರ್ ತನ್ನ ಸ್ನೇಹಿತರೊಂದಿಗೆ ಇಂಡೋನೇಷ್ಯಾದ ಬೀಚ್​ಗೆ ಹೋಗಿದ್ದರು. ಮಹಿಳೆ ನೀರಿಗೆ ಧುಮುಕುವ ವೇಳೆ ಜೋರಾದ ಅಲೆಗಳ ರಭಸಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಾನ್‌ಫೋರ್ ನಾಪತ್ತೆಯಾದಾಗ, ಸ್ನೇಹಿತರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ರಕ್ಷಣಾ ತಂಡ ಕೊಲೀನ್ ಮಾನ್‌ಫೋರ್‌ಗಾಗಿ ಹುಡುಕಾಟ ಆರಂಭಿಸಿದೆ. ಹಾಗೆ ಒಂದು ವಾರ ಕಳೆದಿದೆ. ಅಂತಿಮವಾಗಿ ಶಾರ್ಕ್ ಹೊಟ್ಟೆಯಲ್ಲಿ ಅವಳ ಅವಶೇಷಗಳು ಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಬೆಚ್ಚಿ ಬೀಳಿಸಿದೆ.

ಇದನ್ನೂ ಓದಿ: ಗರ್ಬಾ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಖ್ಯಾತ ಕಲಾವಿದ ಸಾವು

ಟಿಮೋರ್-ಲೆಸ್ಟೆಯಲ್ಲಿ ಮೀನುಗಾರರ ಬಲೆಗೆ ಬೃಹತ್ ಶಾರ್ಕ್ ಸಿಕ್ಕಿಬಿದ್ದಿದ್ದು, ಸೆರೆಹಿಡಿದ ಶಾರ್ಕ್‌ನ ಹೊಟ್ಟೆಯೊಳಗೆ ಮಾನವ ಅವಶೇಷಗಳು ಕಂಡುಬಂದಿತ್ತು. ಇದಲ್ಲದೇ ಈಜುಡುಗೆ ಕೂಡ ಇರುವುದು ಗಮನಕ್ಕೆ ಬಂದಿದೆ. ಡೈವಿಂಗ್ ಮಾಡುವಾಗ ಕೊಲೀನ್ ಮೊನ್‌ಫೋರ್ ಧರಿಸಿದ ಉಡುಗೆ ಇದೇ ಎಂದು ತಿಳಿದಿದೆ. ಅಧಿಕಾರಿಗಳು ಇಂಡೋನೇಷಿಯನ್ ಕೋಸ್ಟ್ ಗಾರ್ಡ್ ಅನ್ನು ಸಂಪರ್ಕಿಸಿ, ಕಾಣೆಯಾದ ಕಾಲಿನ್ ಮಾನ್‌ಫೋರ್‌ನ ಸಂಬಂಧಿಕರು ಮತ್ತು ಸ್ನೇಹಿತರಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಆದರೆ, ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ತನಿಖೆ ಮುಂದುವರಿದಿದೆ ಎನ್ನಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:23 pm, Wed, 9 October 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ