AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್ ಚಟ, ತರಕಾರಿ ಬದಲಿಗೆ ಹೆತ್ತ ಕಂದಮ್ಮನನ್ನು ಫ್ರಿಡ್ಜ್ ಒಳಗಿಟ್ಟ ತಾಯಿ

ಮೊಬೈಲ್ ಚಟಕ್ಕೆ ಬಿದ್ದರೆ ಉಳಿದೆಲ್ಲಾ ಕೆಲಸ ಕಾರ್ಯಗಳನ್ನು ಮರೆತು ಅದರಲ್ಲಿಯೇ ಮುಳುಗಿ ಹೋಗುತ್ತೇವೆ. ಈ ಮೊಬೈಲ್ ಎಂಬ ಮಾಯಾಜಾಲವು ತಂದಿಡುವ ಅವಾಂತರಗಳು ಒಂದೆರಡಲ್ಲ. ಇದಕ್ಕೆ ಸೂಕ್ತ ನಿದರ್ಶನವೆಂಬಂತೆ ಇಲ್ಲೊಂದು ವಿಡಿಯೋ ಹರಿದಾಡುತ್ತಿದ್ದು, ಮೊಬೈಲ್ ಚಟಕ್ಕೆ ಬಿದ್ದಂತಹ  ತಾಯಿಯೊಬ್ಬಳು, ಫೋನಿನಲ್ಲಿ ಮಾತನಾಡುತ್ತಾ ತರಕಾರಿ ಬದಲಿಗೆ ಹೆತ್ತ ಕಂದಮ್ಮನನ್ನೇ ಫ್ರಿಡ್ಜ್ ಒಳಗೆ ಇಟ್ಟಿದ್ದಾಳೆ. 

Viral Video: ಮೊಬೈಲ್ ಚಟ, ತರಕಾರಿ ಬದಲಿಗೆ ಹೆತ್ತ ಕಂದಮ್ಮನನ್ನು ಫ್ರಿಡ್ಜ್ ಒಳಗಿಟ್ಟ ತಾಯಿ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 02, 2024 | 1:24 PM

Share

ಇತ್ತೀಚಿಗಂತೂ ಚಿಕ್ಕ ಮಕ್ಕಳಿಂದ ಹಿಡಿದು  ವಯಸ್ಕರರವರೆಗೂ  ಪ್ರತಿಯೊಬ್ಬರೂ ಕೂಡಾ ಮೊಬೈಲ್ ಎನ್ನುವ ಮಾಯಾಜಾಲದಲ್ಲಿ ಸಿಲುಕಿಕೊಂಡಿದ್ದಾರೆ. ಹೌದು ಮೊಬೈಲ್ ಇಲ್ಲದೆ ಇಂದಿನ ಕಾಲದಲ್ಲಿ ಬದುಕುವುದು ಕಷ್ಟ ಎನ್ನುವಂತಾಗಿದೆ. ಮಕ್ಕಳು ಮೊಬೈಲ್ ಅಲ್ಲಿ ಮುಳುಗಿದರೆ ಆಟ ಪಾಠವನ್ನೇ ಮರೆಯುತ್ತಾರೆ. ಇನ್ನೂ ದೊಡ್ಡವರು ಮೊಬೈಲ್ ನೋಡುತ್ತಾ ಕೂತರೆ  ತಮ್ಮ ಜವಬ್ದಾರಿ, ಕೆಲಸ ಕಾರ್ಯವನ್ನೇ ಮರೆಯುತ್ತಾರೆ. ಅಷ್ಟೇ ಅಲ್ಲದೆ ಮನೆಗೆ ಕಳ್ಳ ನುಗ್ಗಿದ್ರೂ ಅವರಿಗೆ ತಿಳಿಯದು. ಅದೇ ರೀತಿ ಮೊಬೈಲ್ ಚಟದಿಂದಾಗುವ ಅವಾಂತರಗಳ  ಬಗ್ಗೆ  ಪಾಠ ಕಲಿಸುವುವಂತಹ ವಿಡಿಯೋವೊಂದು ಇದೀಗ ಹರಿದಾಡುತ್ತಿದ್ದು,   ಮಹಿಳೆಯೊಬ್ಬರು ಮೊಬೈಲ್ ಚಟಕ್ಕೆ ಬಿದ್ದು, ತರಕಾರಿ ಬದಲಿಗೆ ಹೆತ್ತ ಕಂದಮ್ಮನನ್ನೆ ಫ್ರಿಡ್ಜ್ ಒಳಗಿಟ್ಟಿದ್ದಾರೆ.

ಮೊಬೈಲ್ ಚಟಕ್ಕೆ ಬಿದ್ದಂತಹ ಎಲ್ಲರಿಗೂ ಒಂದೊಳ್ಳೆ  ಪಾಠ ಕಲಿಸುವಂತಹ ಈ ವಿಡಿಯೋವನ್ನು @Prof_Cheems ಎಂಬ ಹೆಸರಿನ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಭಯಾನಕ ಮೊಬೈಲ್ ಚಟ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ಪುಟ್ಟ ಮಗು ಹಾಗೂ ಮೊಬೈಲ್ ನಲ್ಲಿಯೇ ಮುಳುಗಿ ಹೋಗಿರುವಂತಹ ತಾಯಿಯನ್ನು ಕಾಣಬಹುದು. ಮಗು ಇದೆ, ಆ ಪುಟ್ಟ ಕಂದಮ್ಮನಿಗೂ ಸಮಯ ನೀಡಬೇಕು ಎಂಬ ಪರಿಜ್ಞಾನವೂ ಇಲ್ಲದೆ ತಾಯಿಯು ಮೊಬೈಲ್ ಅಲ್ಲಿಯೇ ಮಾತನಾಡುತ್ತಾ ಇರುತ್ತಾಳೆ. ಅಷ್ಟೇ ಅಲ್ಲದೆ ತರಕಾರಿ ಕಟ್ ಮಾಡುತ್ತಲೂ ಮೊಬೈಲ್ ನಲ್ಲಿಯೇ ಮಾತನಾಡುತ್ತಿರುತ್ತಾಳೆ.  ಹೀಗೆ ಮೊಬೈಲ್ ಎಂಬ ಮಾಯಾಜಾಲದಲ್ಲಿ ಮುಳುಗಿ ಹೋಗಿರುವ ಆಕೆ, ಹೆಚ್ಚಿಟ್ಟ ತರಕಾರಿ ಬದಲಿಗೆ ಮಗುವನ್ನೇ ಫ್ರಿಡ್ಜ್ ಒಳಗೆ ಇಡುತ್ತಾಳೆ. ಸ್ವಲ್ಪ ಹೊತ್ತಿನ ಬಳಿಕ ಆಕೆಯ ಗಂಡ ಮನೆಗೆ ಬರುತ್ತಾನೆ ಹಾಗೂ ಮಗು ಎಲ್ಲಿ ಎಂದು ಪ್ರಶ್ನೆ ಮಾಡುತ್ತಾನೆ. ಆ ಸಂದರ್ಭದಲ್ಲಿ ಇಬ್ಬರೂ ಮಗುವನ್ನು ಕಾಣದೆ ಕಂಗಾಲಾಗುತ್ತಾರೆ. ಹೀಗೆ ಸ್ವಲ್ಪ ಹೊತ್ತು ಹುಡುಕಾಟ ನಡೆಸಿದಾಗ, ಫ್ರಿಡ್ಜ್ ಒಳಗಿಂದ ಮಗು ಅಳುವ ಸದ್ದು, ಕೇಳುತ್ತದೆ. ನಂತರ ಮಗುವನ್ನು ಫ್ರಿಡ್ಜ್ ನಿಂದ  ಹೊರ ತೆಗೆಯುವಂತಹ ದೃಶ್ಯವನ್ನು ಕಾಣಬಹುದು.

ಇದನನ್ನೂ ಓದಿ: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

ಮಾರ್ಚ್ 30 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ವಿಡಿಯೋ ಸ್ಕ್ರಿಪ್ಟೆಡ್ ಆಗಿರಬಹುದು, ಆದರೆ ಪ್ರತಿಯೊಬ್ಬ ಪೋಷಕರಿಗೂ ಒಂದೊಳ್ಳೆ ಪಾಠವನ್ನು ಕಲಿಸುವಂತಿದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೌದು ಇಂದಿನ ದಿನಗಳಲ್ಲಿ ನಾವೆಲ್ಲರೂ ಮೊಬೈಲ್ ಎಂಬ ಮಾಯಾಜಾಲದಲ್ಲಿ ಸಿಕ್ಕಿ ಹಾಕಿಕೊಂಡಿದ್ದೇವೆʼ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ