AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
TV9 Web
| Edited By: |

Updated on:Jun 14, 2023 | 11:59 AM

Share

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ