Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 14, 2023 | 11:59 AM

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್