AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ

Mobile : ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದಂತೆ ಎಲ್ಲಾ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿಯೂ ಇದನ್ನು ಅನುಸರಿಸಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

Viral Video: ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ನೋಡಿ ಬೇಸರಿಸಿಕೊಂಡಿದ್ದಾರೆ
ಆನೆ ಮತ್ತು ಹುಲಿ ನೀರು ಕುಡಿಯಲು ಬಂದಿರುವ ದೃಶ್ಯ
TV9 Web
| Edited By: |

Updated on:Jun 14, 2023 | 11:59 AM

Share

Elephant: ಕರ್ನಾಟಕದಲ್ಲಿರುವ ಕಾಡಿನ ದೃಶ್ಯವಿದು. ಆನೆಯೊಂದು ನೀರು ಕುಡಿಯಲು ಬಂದಿದೆ. ಆ ಸಮಯಕ್ಕೆ ಹುಲಿಯೂ ಅಲ್ಲಿಗೆ ಬಂದಿದೆ. ಮುದೇನಾಗಬಹುದು ಎಂಬ ಕುತೂಹಲಕ್ಕಿಲ್ಲಿ ತೆರೆ ಬಿದ್ದಿದೆ. ಪರಸ್ಪರ ಸಮಾಧಾನವಾಗಿ ತಮ್ಮ ತಮ್ಮ ಹಾದಿ ಹಿಡಿದಿವೆ. ಈ ಅಪರೂಪದ ದೃಶ್ಯವನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ. ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಅತ್ಯಂತ ಅಸಹ್ಯಕರ, ಮೊಬೈಲ್​ ನಿಷೇಧಿಸಬೇಕೇ? ಎಂದು ಕೇಳಿದ್ದಾರೆ. ಯಾಕೆ ಎನ್ನುವುದು ಈ ವಿಡಿಯೋ ನೋಡಿದ ಮೇಲೆ ನಿಮಗರ್ಥವಾಗುತ್ತದೆ.

ಮೊಬೈಲ್​ ಶಬ್ದ ಕಿರಿಕಿರಿ ಮಾಡಿದ್ದು ಹೌದು. ಆದರೆ ಜೀಪ್​ ಎಂಜಿನ್​ ಶಬ್ದ? ಎಲೆಕ್ಟ್ರಿಕ್​ ಜೀಪ್​ ಆಗಬಹುದಲ್ಲ ಎಂದಿದ್ಧಾರೆ ಒಬ್ಬರು. ತಡೋಬಾ ಟೈಗರ್ ರಿಸರ್ವ್ ಕೋರ್ ಹಾಗೂ ಬಫರ್ ಝೋನ್​ನಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇತರೇ ಅರಣ್ಯ ಪ್ರದೇಶಗಳೂ ಇದನ್ನು ಅನುಸರಿಸಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಇದನ್ನು ಅನೇಕರು ಅನುಮೋದಿಸಿದ್ದಾರೆ.

ಇದನ್ನೂ ಓದಿ : Viral Video: ಆಸ್ಟ್ರೇಲಿಯಾದ ಮನೆಯೊಂದರಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆ

ಫಾರೆಸ್ಟ್​ ಗಾರ್ಡ್​ ಮಾತ್ರ ಉಪಯೋಗಿಸುವಂತಿರಲಿ ಎಂದು ಅನೇಕರು ಹೇಳಿದ್ದಾರೆ. ಮನಾನು ಸಾಕಷ್ಟು ಸಲ ಕಬಿನಿಗೆ ಪ್ರಯಾಣಿಸಿದ್ದೇನೆ. ಹುಲಿ, ಚಿರತೆ ಕಂಡತಕ್ಷಣ ಡ್ರೈವರ್​​ಗಳು ಮೊಬೈಲ್​ ಬಳಸಲು ಶುರು ಮಾಡುತ್ತಾರೆ ಎಂದಿದ್ದಾರೆ ಇನ್ನೂ ಒಬ್ಬರು. ಪ್ರವಾಸಿಗರ ಭೇಟಿ, ಪ್ರಾಣಿಗಳ ನಡುವಿನ ಅಂತರ ಇತ್ಯಾದಿಯೆಡೆ ವಿಶೇಷ ಗಮನ ಹರಿಸಬೇಕು ಎಂದು ಕೆಲವರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:57 am, Wed, 14 June 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ