AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಷನ್​ ಶೋ ವೇಳೆ ಪ್ರೇಕ್ಷಕನಿಗೆ ಕೋಟ್​ನಿಂದ ಹೊಡೆದ ರೂಪದರ್ಶಿ; ವಿಡಿಯೋ ವೈರಲ್​

ಇಲ್ಲೊಂದು ರೂಪದರ್ಶಿ ಸ್ಟೇಜ್​ ಮೇಲೆ ನಡೆಯುವಾಗ ತನ್ನ ಕೋಟ್​ನಿಂದ ನೆರೆದಿದ್ದ ವ್ಯಕ್ತಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಫ್ಯಾಷನ್​ ಶೋ ವೇಳೆ ಪ್ರೇಕ್ಷಕನಿಗೆ ಕೋಟ್​ನಿಂದ ಹೊಡೆದ ರೂಪದರ್ಶಿ; ವಿಡಿಯೋ ವೈರಲ್​
ರೂಪದರ್ಶಿ
Follow us
TV9 Web
| Updated By: Pavitra Bhat Jigalemane

Updated on:Feb 01, 2022 | 9:54 AM

ರೂಪದರ್ಶಿಗಳು (Model) ಸ್ಟೇಜ್​ ಮೇಲೆ ನಡೆದುಕೊಂಡು ಹೋಗುವಾಗ ನೆರೆದವರ ಗಮನ ಅವರ ಮೇಲೆಯೇ ಇರುತ್ತದೆ. ಹೀಗಿದ್ದಾಗ ಅವರ ವರ್ತನೆ, ಹಾವ, ಭಾವ ಎಲ್ಲವೂ ಪ್ರಕ್ಷಕರನ್ನು ಮನರಂಜಿಸುತ್ತವೆ. ಇಲ್ಲೊಂದು ರೂಪದರ್ಶಿ ಪ್ಯಾಷನ್​ ಶೋ (Fashion Show) ವೇಳೆ ಸ್ಟೇಜ್​ ಮೇಲೆ ನಡೆಯುವಾಗ ತನ್ನ ಕೋಟ್​ನಿಂದ ನೆರೆದಿದ್ದ ವ್ಯಕ್ತಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.ಈ ಘಟನೆ ನ್ಯೂಯಾರ್ಕ್​ನಲ್ಲಿ ನಡೆದಿದೆ.  ಡಿಸೈನರ್​ ಕ್ರಿಶ್ಚಿಯನ್ ಕೋವನ್ ಎನ್ನುವವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೊದಲು ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದ  ವಿಡಿಯೋವನ್ನು ಕ್ರಿಶ್ಚಿಯನ್ ಕೋವನ್ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ 2 ಮಿಲಿಯನ್​ ವೀಕ್ಷಣೆ ಪಡೆದಿದೆ. ಕ್ರಿಶ್ಚಿಯನ್ ಕೋವನ್ ಅವರ Spring 2022 Ready-to-Wear runway ಎನ್ನುವ ಶೋದಲ್ಲಿ ಈ ಘಟನೆ ನಡೆದಿದ್ದು ಜಗತ್ತಿನಾದ್ಯಂತ ವಿಡಿಯೋ ವೈರಲ್​ ಆಗಿದೆ.

ವಿಡಿಯೋದಲ್ಲಿ ನೇರಳೆ ಬಣ್ಣದ ಕ್ರಾಫ್​ಟಾಪ್ ಧರಿಸಿದ್ದ ರೂಪದರ್ಶಿಯೊಬ್ಬಳು ನಡೆದುಕೊಂಡು ಬರುತ್ತಿದ್ದಳು. ನಂತರ ತಕ್ಷಣ ಹಿಂದೆ ಹೋಗಿ ತನ್ನ ಕೈಲ್ಲಿದ್ದ ಕೋಟ್​ನಲ್ಲಿ ಸ್ಟೇಜಿನ ಕೆಳಗೆ ನಿಂತ ವ್ಯಕ್ತಿಗೆ ಹೊಡೆಯುತ್ತಾಳೆ. ನಂತರ ತಿರುಗಿ ಮತ್ತೆ ಮುಂದೆ ಕ್ಯಾಟ್​ಮಾಡುತ್ತಾ ನಡೆದುಕೊಂಡು ಬರುತ್ತಾಳೆ. ಇದರ ವಿಡಿಯೋ ನೋಡಿ ನೆಟ್ಟಿಗರು ಇದೊಂದು ಹೊಸ ಟ್ರೆಂಡ್​ ಸೃಷ್ಟಿ ಮಾಡಲಿದೆ ಎಂದಿದ್ದಾರೆ. ವಿಡಿಯೋದಲ್ಲಿರುವ ರೂಪದರ್ಶಿಯನ್ನು ಥಿಯೋಡೋರಾ ಕ್ವಿನ್ಲಿವಾನ್ ಎಂದು ಗುರುತಿಸಲಾಗಿದೆ.  ಟಿಕ್​ಟಾಕ್​ನಲ್ಲಿ ವೈರಲ್​ ಆದ ವಿಡಿಯೋ ಸದ್ಯ ಇನ್ಸ್ಟಾಗ್ರಾಮ್​ನಲ್ಲಿಯೂ ಟ್ರೆಂಡ್​ ಸೆಟ್​ ಮಾಡಿದೆ.

ಇದನ್ನೂ ಓದಿ:

ಗಾಲಿಕುರ್ಚಿಯಲ್ಲಿ ಗರಿಷ್ಠ ದೂರ ಕ್ರಮಿಸಿ ವಿಶ್ವ ಗಿನ್ನಿಸ್ ದಾಖಲೆ ನಿರ್ಮಿಸಿದ ಒಡಿಶಾದ 28ರ ಯುವಕ

Published On - 9:52 am, Tue, 1 February 22

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!