AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ

Kanwar Yatra : ಈ ಶ್ರದ್ಧಾವಂತನಿಗೆ ಶಕ್ತಿಯನ್ನು ದಯಪಾಲಿಸು ಎಂದು ಕೆಲವರು. ಇಲ್ಲಿ ಇಬ್ಬರೂ ಹೈರಾಣಾಗುತ್ತಿದ್ದಾರೆ, ಇದರಿಂದ ಏನು ಪ್ರಯೋಜನ ಎಂದು ಕೆಲವರು. ಇದೆಲ್ಲವೂ ನಾಟಕ ಎಂದು ಒಂದಿಷ್ಟು ಜನ. ನೀವೇನಂತೀರಿ?

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ
ಹರಿದ್ವಾರದ ಕನ್ವರ್ ಯಾತ್ರಾದಲ್ಲಿ ತಾಯಿ ಮತ್ತು ಗಂಗಾಜಲವನ್ನು ಹೊತ್ತೊಯ್ಯುತ್ತಿರುವ ಯುವಕ.
ಶ್ರೀದೇವಿ ಕಳಸದ
|

Updated on:Jul 05, 2023 | 2:42 PM

Share

Haridwar : ಶ್ರಾವಣ ಬಂತೆಂದರೆ ಎಲ್ಲೆಡೆ ಯಾತ್ರೆ ಜಾತ್ರೆಗಳ ಸಂಭ್ರಮ. ಹರಿದ್ವಾರದ ಕನ್ವರ್​ ಯಾತ್ರೆ (Kanwar Yatra) ಜುಲೈ 15ರವರೆಗೆ ನಡೆಯಲಿದೆ. ಈ ವರ್ಷ ಸುಮಾರು 2 ಮಿಲಿಯನ್​ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂಬ ಅಂದಾಜಿದೆ. ಈಗಾಗಲೇ ಈ ಯಾತ್ರೆಯಲ್ಲಿ ಭಾಗಿಯಾಗಿರುವ ಅನೇಕ ಭಕ್ತರ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಪೈಕಿ ಯುವಕನೊಬ್ಬ ತನ್ನ ತಾಯಿ ಮತ್ತು ಗಂಗಾಜಲವನ್ನು ಶ್ರವಣಕುಮಾರನಂತೆ ಹೆಗಲ ಮೇಲೆ ಹೊತ್ತು ನಡೆಯುತ್ತಿರುವ ವಿಡಿಯೋ ಗಮನ ಸೆಳೆದಿದೆ. ಟ್ವೀಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ಎಂದಿನಂತೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ಅನ್ನು ಜು. 4ರಂದು ಎಎನ್​ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಈತನಕ ಸುಮಾರು 62,000 ಜನರು ಈ ವಿಡಿಯೋ ನೋಡಿದ್ದಾರೆ. 2,300ಕ್ಕೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ತನ್ನ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಜನರು ಹರ್​ ಹರ್ ಮಹಾದೇವ, ಜೈ ಹೋ ಎಂದು ಜೈಕಾರ ಹೇಳಿದ್ದಾರೆ.

ಇದನ್ನೂ ಓದಿ : Viral Video: ಸ್ಪೈಡರ್​ಮ್ಯಾನ್​ನ ಮೂಗು ಮುರಿದ ಹುಡುಗಿಯ ಬಂಧನ

ಈ ಯಾತ್ರೆಯು ಉತ್ತರಾಖಂಡದ ಹರಿದ್ವಾರದಲ್ಲಿ ಶುರುವಾಗುತ್ತದೆ, ಗಂಗಾಜಲವನ್ನು ಸಂಗ್ರಹಿಸಿ ತಮ್ಮ ಊರಿನ ಶಿವದೇವಾಲಯಗಳಿಗೆ ಅರ್ಪಿಸುತ್ತಾರೆ. ಈ ಯಾತ್ರೆಗೆ ಬರುವವರು ಕಾಲ್ನಡಿಗೆಯಲ್ಲಿಯೇ ಸಾಗುತ್ತಾರೆ. ವಾಪಾಸು ತಮ್ಮ ಊರು, ರಾಜ್ಯಗಳಿಗೆ ಮರಳುವಾಗ ಗೌಮುಖ, ಗಂಗೋತ್ರಿ ಮತ್ತು ಬಿಹಾರದಲ್ಲಿರುವ ಸುಲ್ತಾನ್​ಗಂಜ್​ನಂಥ ಪ್ರಮುಖ ಸ್ಥಳಗಳನ್ನ ಇವರು ಸಂದರ್ಶಿಸುತ್ತಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:41 pm, Wed, 5 July 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು