AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ

Kanwar Yatra : ಈ ಶ್ರದ್ಧಾವಂತನಿಗೆ ಶಕ್ತಿಯನ್ನು ದಯಪಾಲಿಸು ಎಂದು ಕೆಲವರು. ಇಲ್ಲಿ ಇಬ್ಬರೂ ಹೈರಾಣಾಗುತ್ತಿದ್ದಾರೆ, ಇದರಿಂದ ಏನು ಪ್ರಯೋಜನ ಎಂದು ಕೆಲವರು. ಇದೆಲ್ಲವೂ ನಾಟಕ ಎಂದು ಒಂದಿಷ್ಟು ಜನ. ನೀವೇನಂತೀರಿ?

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ
ಹರಿದ್ವಾರದ ಕನ್ವರ್ ಯಾತ್ರಾದಲ್ಲಿ ತಾಯಿ ಮತ್ತು ಗಂಗಾಜಲವನ್ನು ಹೊತ್ತೊಯ್ಯುತ್ತಿರುವ ಯುವಕ.
ಶ್ರೀದೇವಿ ಕಳಸದ
|

Updated on:Jul 05, 2023 | 2:42 PM

Share

Haridwar : ಶ್ರಾವಣ ಬಂತೆಂದರೆ ಎಲ್ಲೆಡೆ ಯಾತ್ರೆ ಜಾತ್ರೆಗಳ ಸಂಭ್ರಮ. ಹರಿದ್ವಾರದ ಕನ್ವರ್​ ಯಾತ್ರೆ (Kanwar Yatra) ಜುಲೈ 15ರವರೆಗೆ ನಡೆಯಲಿದೆ. ಈ ವರ್ಷ ಸುಮಾರು 2 ಮಿಲಿಯನ್​ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂಬ ಅಂದಾಜಿದೆ. ಈಗಾಗಲೇ ಈ ಯಾತ್ರೆಯಲ್ಲಿ ಭಾಗಿಯಾಗಿರುವ ಅನೇಕ ಭಕ್ತರ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಪೈಕಿ ಯುವಕನೊಬ್ಬ ತನ್ನ ತಾಯಿ ಮತ್ತು ಗಂಗಾಜಲವನ್ನು ಶ್ರವಣಕುಮಾರನಂತೆ ಹೆಗಲ ಮೇಲೆ ಹೊತ್ತು ನಡೆಯುತ್ತಿರುವ ವಿಡಿಯೋ ಗಮನ ಸೆಳೆದಿದೆ. ಟ್ವೀಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ಎಂದಿನಂತೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ಅನ್ನು ಜು. 4ರಂದು ಎಎನ್​ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಈತನಕ ಸುಮಾರು 62,000 ಜನರು ಈ ವಿಡಿಯೋ ನೋಡಿದ್ದಾರೆ. 2,300ಕ್ಕೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ತನ್ನ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಜನರು ಹರ್​ ಹರ್ ಮಹಾದೇವ, ಜೈ ಹೋ ಎಂದು ಜೈಕಾರ ಹೇಳಿದ್ದಾರೆ.

ಇದನ್ನೂ ಓದಿ : Viral Video: ಸ್ಪೈಡರ್​ಮ್ಯಾನ್​ನ ಮೂಗು ಮುರಿದ ಹುಡುಗಿಯ ಬಂಧನ

ಈ ಯಾತ್ರೆಯು ಉತ್ತರಾಖಂಡದ ಹರಿದ್ವಾರದಲ್ಲಿ ಶುರುವಾಗುತ್ತದೆ, ಗಂಗಾಜಲವನ್ನು ಸಂಗ್ರಹಿಸಿ ತಮ್ಮ ಊರಿನ ಶಿವದೇವಾಲಯಗಳಿಗೆ ಅರ್ಪಿಸುತ್ತಾರೆ. ಈ ಯಾತ್ರೆಗೆ ಬರುವವರು ಕಾಲ್ನಡಿಗೆಯಲ್ಲಿಯೇ ಸಾಗುತ್ತಾರೆ. ವಾಪಾಸು ತಮ್ಮ ಊರು, ರಾಜ್ಯಗಳಿಗೆ ಮರಳುವಾಗ ಗೌಮುಖ, ಗಂಗೋತ್ರಿ ಮತ್ತು ಬಿಹಾರದಲ್ಲಿರುವ ಸುಲ್ತಾನ್​ಗಂಜ್​ನಂಥ ಪ್ರಮುಖ ಸ್ಥಳಗಳನ್ನ ಇವರು ಸಂದರ್ಶಿಸುತ್ತಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:41 pm, Wed, 5 July 23

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ